ಶೀರ್ಷಿಕೆ : ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ವಿವಿಧ ಯೋಜನೆ : ಅರ್ಜಿ ಆಹ್ವಾನ
ಲಿಂಕ್ : ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ವಿವಿಧ ಯೋಜನೆ : ಅರ್ಜಿ ಆಹ್ವಾನ
ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ವಿವಿಧ ಯೋಜನೆ : ಅರ್ಜಿ ಆಹ್ವಾನ
ಕೊಪ್ಪಳ, ಏ. 28 (ಕರ್ನಾಟಕ ವಾರ್ತೆ): ಡಾ. ಬಿ.ಆರ್. ಅಂಬೇಡ್ಕರ್ ನಿಗಮ ವತಿಯಿಂದ 2017-18ನೇ ಸಾಲಿಗಾಗಿ ಸ್ವಯಂ ಉದ್ಯೋಗ, ಉದ್ಯಮ ಶೀಲತಾ, ಭೂ ಒಡೆತನ, ಕಿರುಸಾಲ ಯೋಜನೆ, ಮಹಿಳಾ ಸಮೃದ್ಧಿ, ವಿಕಲ ಚೇತನ ನೆರವು, ಗಂಗಾ ಕಲ್ಯಾಣ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಕೊಪ್ಪಳ ಜಿಲ್ಲೆಯ ಪರಿಶಿಷ್ಟ ಜಾತಿಗೆ ಸೇರಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ಕೈಗೊಳ್ಳಲು- ಸ್ವಯಂ ಉದ್ಯೋಗ ಯೋಜನೆ, ಉದ್ಯಮ ಶೀಲತಾ ಯೋಜನೆ, ಭೂ ಒಡೆತನ ಯೋಜನೆ, ಮೈಕ್ರೋ ಕ್ರೆಡಿಟ ಕಿರುಸಾಲ ಯೋಜನೆ, ಮೈಕ್ರೋ ಕ್ರೆಡಿಟ ಯೋಜನೆ/ ಮಹಿಳಾ ಸಮೃದ್ಧಿ ಯೋಜನೆ, ವಿಕಲ ಚೇತನ ನೆರವು ಯೋಜನೆ, ಗಂಗಾ ಕಲ್ಯಾಣ ಯೋಜನೆ, ಏತ ನೀರಾವರಿ ಯೋಜನೆ, ನೇರ ಸಾಲ ಯೋಜನೆ, ಹಾಗೂ ಕೌಶಲ್ಯ ತರಬೇತಿ ಹೊಂದಿದ ನಿರುದ್ಯೋಗಿಗಳಿಗೆ ಘಟಕ ವೆಚ್ಚ 5 ಲಕ್ಷಗಳ ವರೆಗಿನ ಸಹಾಯಧನ 2.55 ಲಕ್ಷ ಅಥವಾ ಶೇ% 50 ರಷ್ಟು ಯೋಜನಾ ವೆಚ್ಚ ಯಾವುದು ಕಡಿಮೆಯೋ ಅಷ್ಟು ಸಹಾಯಧನ ನೀಡಲಾಗುವುದು. ಸೌಲಭ್ಯ ಪಡೆಯಲು ಆಯಾ ಯೋಜನೆಗೆ ಅನುಗುಣವಾಗಿ ಅರ್ಜಿ ಸಲ್ಲಿಸಲು ಮಾಹಿತಿ ಇಂತಿದೆ.
ಪರಿಶಿಷ್ಟ ಜಾತಿಯವರಾಗಿರಬೇಕು, ಹಾಗೂ ಕಳೆದ 15 ವರ್ಷದಿಂದ ಜಿಲ್ಲೆಯ ನಿವಾಸಿಯಾಗಿರಬೇಕು. 18 ರಿಂದ 60 ವರ್ಷ ವಯೋಮಿತಿಯಲ್ಲಿರಬೇಕು. ವಾರ್ಷಿಕ ಆದಾಯ ಗ್ರಾಮೀಣ 150000 ರೂ, ನಗರ ಪ್ರದೇಶ 200000 ರೂ, ಮಿತಿಯಲ್ಲಿರಬೇಕು. ಅರ್ಜಿದಾರರು ಅಥವಾ ಕುಟುಂಬದವರು ಈ ಹಿಂದೆ ನಿಗಮದಿಂದ ಯಾವುದೇ ಯೋಜನೆಯಡಿ ಸಾಲ ಸೌಲಭ್ಯ ಪಡೆದಿರಬಾರದು. ಜಾತಿ, ಆದಾಯ ಪತ್ರ, ವಾಸಸ್ಥಳದ ದೃಡೀಕರಣ, ರೇಶನಕಾರ್ಡ ಅಥವಾ ಚುನಾವಣೆ ಗುರುತಿನ ಚೀಟಿ, 2 ಭಾವಚಿತ್ರ ಲಗತ್ತಿಸಬೇಕು. ಈ ಹಿಂದೆ ಅರ್ಜಿಸಲ್ಲಿಸಿ ಸೌಲಭ್ಯ ಪಡೆಯದೆ ಇದ್ದಲ್ಲಿ ಪುನಃ ಅರ್ಜಿ ಸಲ್ಲಿಸಬಹುದು. ಭೂ ಒಡೆತನ ಯೋಜನೆಯಡಿ ಈಗಾಲೇ ಅರ್ಜಿಗಳನ್ನು ಸ್ವೀಕರಿಸಿದ್ದು, ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ. ಅಪೂರ್ಣ ದಾಖಲಾತಿಗಳನ್ನು ಸಲ್ಲಿಸಿದ್ದಲ್ಲಿ, ಪರಿಗಣಿಸಲಾಗುವುದಿಲ್ಲ. ಗಂಗಾ ಕಲ್ಯಾಣ ಕೊಳವೆ ಬಾವಿ ಯೋಜನೆಯಡಿ ಅರ್ಜಿಸಲ್ಲಿಸಲು, 1-20 ಎಕರೆ ಯಿಂದ 5-00 ಎಕರೆ ವರೆಗೂ ಸ್ವಂತ ಭೂ ಹಿಡುವಳಿ ಹೊಂದಿರಬೇಕು. ಚಾಲ್ತಿ ವರ್ಷದ ಪಹಣಿ, ಪಟ್ಟ, ಉತ್ತಾರ, ಭೂಮಿಯ ಚೆಕಬಂದಿ, ಸಣ್ಣ ಭೂ ಹಿಡುವಳಿ ಧೃಡಿಕರಣ, ವಂಶ ವೃಕ್ಷ, ಎಲ್ಲಾ ಯೋಜನೆಗಳ ಅರ್ಜಿಗಳನ್ನು ಜಿಲ್ಲಾ ಕಛೇರಿಯಲ್ಲಿ ಪಡೆಯಬಹುದು. ವಾಹನ ಸೌಲಭ್ಯಗಳಿಗೆ ಸಾಲ ಸೌಲಭ್ಯ ಪಡೆಯಲು ಡ್ರೈವಿಂಗ್ ಲೈಸನ್ಸ್ನೊಂದಿಗೆ ಬ್ಯಾಡ್ಜ್ ಹೊಂದಿರಬೇಕು. ಮಧ್ಯವರ್ತಿಗಳಿಂದ ಪಡೆದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ವಾಹನ ಚಾಲನಾ ಪರವಾನಿಗೆ ಹಾಗೂ ಬ್ಯಾಡ್ಜ್ ಹೊಂದಿದ ಪರಿಶಿಷ್ಟ ಜಾತಿಯ ನಿರುದ್ಯೋಗಿ ಯುವಕರಿಗೆ ಪ್ರವಾಸಿ (ಟೂರಿಸ್ಟ್) ಟ್ಯಾಕ್ಸಿಗಳನ್ನು ಖರೀದಿಸಲು ರೂ. 3 ಲಕ್ಷ ಅಥವಾ ಶೇ% 50 ರಷ್ಟು ಸಹಾಯಧನವನ್ನು ನೀಡಲಾಗುವುದು. ಅರ್ಜಿಯನ್ನು ಮೇ. 31 ರೊಳಗಾಗಿ ಸಲ್ಲಿಸಲುಬೇಕು. ಹೆಚ್ಚಿನ ಮಾಹಿತಿಗಾಗಿ ಡಾ. ಬಿ.ಆರ್. ಅಂಬೇಡ್ಕರ್ ನಿಗಮ ಕೊಪ್ಪಳ, ಕಛೇರಿ ದೂರವಾಣಿ ಸಂಖ್ಯೆ 08539-221176 ಗೆ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ವಿವಿಧ ಯೋಜನೆ : ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ವಿವಿಧ ಯೋಜನೆ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ವಿವಿಧ ಯೋಜನೆ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/04/blog-post_76.html
0 Response to "ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ವಿವಿಧ ಯೋಜನೆ : ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ