NEWS AND PHOTO DATE; 8-5-2017

NEWS AND PHOTO DATE; 8-5-2017 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು NEWS AND PHOTO DATE; 8-5-2017, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : NEWS AND PHOTO DATE; 8-5-2017
ಲಿಂಕ್ : NEWS AND PHOTO DATE; 8-5-2017

ಓದಿ


NEWS AND PHOTO DATE; 8-5-2017

ಕಲಬುರಗಿಗೆ ಆದಷ್ಟು ಬೇಗ ಪೊಲೀಸ್ ಕಮೀಷನರೇಟ್ ಕಚೇರಿ
ಕಲಬುರಗಿ,ಮೇ.08.(ಕ.ವಾ.)-ಕಲಬುರಗಿ ಜಿಲ್ಲೆಯಲ್ಲಿ ಪೊಲೀಸ್ ಕಮೀಷನರೇಟ್ ಕಚೇರಿಯನ್ನು ಪ್ರಾರಂಭಿಸುವ ಪ್ರಸ್ತಾವನೆ ಸರ್ಕಾರದ ಮುಂದಿದ್ದು, ಆದಷ್ಟು ಬೇಗ ಪ್ರಾರಂಭವಾಗುವ ನಿರೀಕ್ಷೆಗಳಿವೆ ಎಂದು ಕರ್ನಾಟಕ ರಾಜ್ಯ ಮಹಾ ನಿರ್ದೇಶಕ ಹಾಗೂ ಪೊಲೀಸ್ ಮಹಾ ನಿರೀಕ್ಷಕ ರೂಪಕ್ ಕುಮಾರ್ ದತ್ತಾ ತಿಳಿಸಿದರು.  
ಅವರು ಸೋಮವಾರ ಕಲಬುರಗಿ ಪೊಲೀಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಲಬುರಗಿಯಲ್ಲಿ ಪೊಲೀಸ್ ಕಮೀಷನರೇಟ್ ಕಚೇರಿ ಪ್ರಾರಂಭವಾದ ನಂತರ ಪೆಟ್ರೋಲಿಂಗ್ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಸಿಗಲಿವೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸಿದಾಗ ಕಂಟ್ರೋಲ್ ರೂಂಗೆ ಮಾಹಿತಿ ದೊರೆತ ತಕ್ಷಣ ಕಂಟ್ರೋಲ್ ರೂಂ ಸಮೀಪದ ಪೆಟ್ರೋಲಿಂಗ್ ವಾಹನಕ್ಕೆ ಮಾಹಿತಿ ರವಾನಿಸುವ ಮೂಲಕ ಘಟನಾ ಸ್ಥಳಕ್ಕೆ ತಕ್ಷಣ ಪೊಲೀಸರು ಹಾಜರಿರುವಂತೆ ನೋಡಿಕೊಳ್ಳಲಾಗುವುದು. ತುರ್ತು ಸಂದರ್ಭಗಳಲ್ಲಿ ಪೊಲೀಸ್ ಠಾಣೆಗಳ ಗಡಿಭಾಗಗಳಲ್ಲಿ ಅಪರಾಧಗಳು ನಡೆದಾಗ ಗಡಿಭಾಗದ ಸಮೀಪವಿರುವ ಯಾವುದೇ ಠಾಣೆಯ ಪೊಲೀಸರು ಶೀಘ್ರ ಘಟನಾ ಸ್ಥಳಕ್ಕೆ ಹಾಜರಾಗಿ ವಿಚಾರಿಸಬೇಕೆಂದು ತಿಳಿಸಿದರು. 
ಸಮಾಜದಲ್ಲಿ ಯಾವುದೇ ಅಹಿತಕರ ಘಟನೆ ನಡೆಯಲು ಅವಕಾಶ ನೀಡದಂತೆ ಸಕ್ರಿಯ ಪೊಲೀಸಿಂಗ್ ಮಾಡುವ ಅವಶ್ಯಕತೆಯಿದೆ. ಇದು ಈಗ ಜಾರಿಗೆ ತಂದಿರುವ ಸುಧಾರಿತ ಗಸ್ತು ವ್ಯವಸ್ಥೆಯಿಂದ ಸಾಧ್ಯವಿದೆ. ಗಸ್ತು ಸಿಬ್ಬಂದಿಗಳು ಸ್ಥಳಗಳಿಗೆ ಭೇಟಿ ನೀಡಿದಾಗ ಅಲ್ಲಿ ನಡೆಯಬಹುದಾದ ಜಗಳ, ಅಪರಾಧ, ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಠಾಣೆಗಳಿಗೆ ವಿವರವನ್ನು ಸಲ್ಲಿಸಿದಲ್ಲಿ ಆ ಪ್ರದೇಶದಲ್ಲಿ ಮುಂದೆ ನಡೆಯಬಹುದಾದಂತಹ ಘಟನೆಗಳನ್ನು ತಪ್ಪಿಸಬಹುದಾಗಿದೆ. ಇದರಿಂದ ಅಪರಾಧಗಳು ಕಡಿಮೆಯಾಗುತ್ತವೆ ಎಂದರು. 
ರಾಜ್ಯದಲ್ಲಿ ಏಕರೂಪ ಪೊಲೀಸ್ ನೇಮಕಾತಿಗಾಗಿ ಗೃಹಸಚಿವರ ಆದೇಶದ ಮೇರೆಗೆ ಸಮಿತಿಯೊಂದನ್ನು ರಚಿಸಲಾಗಿದೆ. ಈ ಸಮಿತಿಯು ಬೇರೆ ರಾಜ್ಯಗಳಲ್ಲಿ ಕೈಗೊಂಡಿರುವ ಏಕರೂಪ ಪೊಲೀಸ್ ನೇಮಕಾತಿ ಬಗ್ಗೆ ಅಧ್ಯಯನ ಕೈಗೊಂಡು ವರದಿ ನೀಡಲಿದೆ. ಅದನ್ನು ಆಧರಿಸಿ ಮುಂದಿನ ಕ್ರಮ ಜರುಗಿಸಲಾಗುವುದು. ಸೈಬರ್ ಕ್ರೈಂ ಮತ್ತು ಎಕನಾಮಿಕ್ ಅಫೆನ್ಸ್ ದೂರುಗಳನ್ನು ಸ್ವೀಕರಿಸಲು ಪ್ರತ್ಯೇಕ ಠಾಣೆಗಳನ್ನು ಪ್ರತಿ ಜಿಲ್ಲೆಗಳಲ್ಲಿ ಪ್ರಾರಂಭಿಸಲಾಗಿದೆ. ಅವರು ಖುದ್ದಾಗಿ ಸೈಬರ್ ಕ್ರೈಂ ಮತ್ತು ಎಕನಾಮಿಕ್ ಅಫೆನ್ಸ್ ದೂರುಗಳನ್ನು ಸ್ವೀಕರಿಸುವರು ಹಾಗೂ  ಶೀಘ್ರ ಗತಿಯಲ್ಲಿ ಪ್ರಕರಣಗಳನ್ನು ವಿಲೇವಾರಿ ಮಾಡುವರು ಎಂದರು. 
ಈ ಸಂದರ್ಭದಲ್ಲಿ ಈಶಾನ್ಯ ವಲಯದ ಆರಕ್ಷಕ ಮಹಾನಿರೀಕ್ಷಕ ಅಲೋಕ ಕುಮಾರ, ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಶಶಿಕುಮಾರ, ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಹಾಗೂ ಬೀದರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಕಮ್ ಪ್ರಕಾಶ ಅಮೃತ ಉಪಸ್ಥಿತರಿದ್ದರು. 
ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿ
ಕಲಬುರಗಿ,ಮೇ.08.(ಕ.ವಾ.)-ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಸುಮಾರು 2 ಲಕ್ಷ ಮಕ್ಕಳು ಇರುತ್ತಾರೆ. ಈ ಮಕ್ಕಳಿಗೆ ಕಡ್ಡಾಯವಾಗಿ ಎಲ್ಲ ಲಸಿಕೆ ಮತ್ತು ಚುಚ್ಚುಮದ್ದುಗಳನ್ನು ಕೊಡಿಸುವುದು ಅಂಗನವಾಡಿ ಕಾರ್ಯಕರ್ತೆಯರ ಮತ್ತು ಪಾಲಕರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಉಜ್ವಲ್‍ಕುಮಾರ ಘೋಷ್ ತಿಳಿಸಿದರು. 
ಅವರು ಸೋಮವಾರ ಖಾದ್ರಿ ಚೌಕ್ ಪ್ರದೇಶದ ಜಾನಿ ರಜಾಕ್ ನಗರದ ಅಂಗನವಾಡಿ ಕೇಂದ್ರ-2ರಲ್ಲಿ ನಾಲ್ಕನೇ ಹಂತದ ಇಂದ್ರಧನುಷ ವಿಶೇಷ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಗರ್ಭಿಣಿಯರಿಗೆ ಮತ್ತು ಮಕ್ಕಳಿಗೆ ಹಲವಾರು ಬಾರಿ ಲಸಿಕೆ ಮತ್ತು ಚುಚ್ಚುಮದ್ದುಗಳನ್ನು ನೀಡಲಾಗುವುದು. ಆದರೂ ಸುಮಾರು ಮಕ್ಕಳು ಲಸಿಕೆಯಿಂದ ವಂಚಿತರಾಗುವರು. ಅಂಥವರನ್ನು ಗುರುತಿಸಿ ಇಂದ್ರಧನುಷ ವಿಶೇಷ ಲಸಿಕಾ ಕಾರ್ಯಕ್ರಮದಲ್ಲಿ ಲಸಿಕೆ ನೀಡಲಾಗುವುದು. ಈ ವಿಶೇಷ ಲಸಿಕಾ ಕಾರ್ಯಕ್ರಮದಲ್ಲಿಯೂ ಮಕ್ಕಳು ಮತ್ತು ಗರ್ಭಿಣಿಯರು ಲಸಿಕೆಯಿಂದ ವಂಚಿತರಾಗದಂತೆ ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯವರು ಜಾಗೃತಿವಹಿಸಬೇಕೆಂದು ಸೂಚಿಸಿದರು. 
ಜಿಲ್ಲೆಯಲ್ಲಿ ಒಂದು ಮತ್ತು ಮೂರನೇ ಹಂತದ ಇಂದ್ರಧನುಷ ಲಸಿಕೆ ಕಾರ್ಯಕ್ರಮ ಕೈಗೊಂಡಿದ್ದು, ಸಧ್ಯ ನಾಲ್ಕನೇ ಹಂತದ ಲಸಿಕಾ ಕಾರ್ಯಕ್ರಮ ಜರುಗುತ್ತಿದೆ. ಎರಡೂ ವರ್ಷದೊಳಗಿನ 12,839 ಮಕ್ಕಳಿಗೆ ಮತ್ತು 2834 ಲಸಿಕೆ ವಂಚಿತ ಗರ್ಭಿಣಿಯರಿಗೆ ಗುರುತಿಸಿ ಲಸಿಕೆ ನೀಡಲಾಗುತ್ತಿದೆ. ಮುಂದಿನ ನಾಲ್ಕು ತಿಂಗಳು ಕಾಲ ಪ್ರತಿ ತಿಂಗಳು 7ನೇ ತಾರೀಖಿನಿಂದ ಒಂದು ವಾರಗಳ ಕಾಲ ಲಸಿಕೆ ನೀಡಲಾಗುವುದು ಎಂದು ತಿಳಿಸಿದ ಅವರು ಭವಿಷ್ಯದಲ್ಲಿ ಮಕ್ಕಳಿಗೆ ಕಾಡುವ ಮಾರಕ ರೋಗಗಳನ್ನು ತಡೆಯಲು ಮಗು  ಹುಟ್ಟಿದಾಗಿನಿಂದಲೇ ನಿಗದಿಪಡಿಸಿರುವ ಎಲ್ಲ ಲಸಿಕೆಗಳನ್ನು ಕೊಡಿಸಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|| ಶಿವರಾಜ ಸಜ್ಜನಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಇಂದ್ರಧನುಷ ಕಾರ್ಯಕ್ರಮದಡಿ ಧನುರ್ವಾಯ, ದಢಾರ, ನಾಯಿಕೆಮ್ಮು, ಗಳಗಂಡ, ಕ್ಷಯ, ಕಾಮಾಲೆ ಮತ್ತು ಪೋಲಿಯೋ ರೋಗಗಳ ವಿರುದ್ಧ ಲಸಿಕೆ ಹಾಕಲಾಗುವುದು. ಇಂದ್ರಧನುಷ ಲಸಿಕಾ ಕಾರ್ಯಕ್ರಮಕ್ಕಾಗಿ ಒಟ್ಟು 1295 ಇಂದ್ರಧನುಷ್ ಪ್ರದೇಶಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಈ ಅಭಿಯಾನಕ್ಕಾಗಿ ಜಿಲ್ಲೆಯಾದ್ಯಂತ 1030 ಇಂದ್ರಧನುಷ ಲಸಿಕಾ ಕೇಂದ್ರಗಳನ್ನು ಹಾಗೂ 50 ಲಸಿಕಾ ಸಂಚಾರಿ ತಂಡಗಳನ್ನು ರಚಿಸಲಾಗಿದೆ. ಇಂದ್ರಧನುಷ್ ಮಿಷನ್ ಅಭಿಯಾನಕ್ಕಾಗಿ ಆಯ್ಕೆ ಮಾಡಲಾದ ಮಕ್ಕಳ ಮತ್ತು ಗರ್ಭಿಣಿಯರ ಪೈಕಿ ಶೇ. 60ರಷ್ಟು ಕಲಬುರಗಿ ನಗರದಲ್ಲಿರುವುದರಿಂದ ನಗರದಲ್ಲಿ ಲಸಿಕಾಕರಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದರು. 
ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ಮಹಾನಗರ ಪಾಲಿಕೆ ಸದಸ್ಯ ಶಂಕರಸಿಂಗ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಜಿಲ್ಲಾ ಸರ್ವೇಲೆನ್ಸ್ ಅಧಿಕಾರಿ ಡಾ|| ಅನಿಲಕುಮಾರ ತಾಳಿಕೋಟಿ, ಇಂದ್ರಧನುಷ ನೋಡಲ್ ಅಧಿಕಾರಿ ಡಾ|| ಎಂ.ಕೆ. ಪಾಟೀಲ, ಜಿಲ್ಲಾ ಲಸಿಕಾಧಿಕಾರಿ ಡಾ|| ರುಧ್ರವಾಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶ್ರೀಕಾಂತ ಕುಲಕರ್ಣಿ, ತಾಲೂಕು ಆರೋಗ್ಯಾಧಿಕಾರಿಗಳು ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು. 
ವಾಹನ ಬಾಡಿಗೆಗಾಗಿ ದರಪಟ್ಟಿ ಆಹ್ವಾನ 
ಕಲಬುರಗಿ,ಮೇ.08.(ಕ.ವಾ.)-ಕಲಬುರಗಿ ವಿಭಾಗೀಯ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಗೆ ಸುಸಜ್ಜಿತ ಎಲ್ಲೋ ಬೋರ್ಡುವುಳ್ಳ ಇಂಡಿಗೊ ಸಿ.ಎಸ್./ ಸ್ವೀಫ್ಟ್ ಡಿಸೈರ್/ ಲೋಗೊನ್/ ಹೊಂಡಾಯಿ ವರುಣ ಕಾರನ್ನು ಮಾಸಿಕ ಬಾಡಿಗೆ ಆಧಾರದ ಮೇಲೆ ಪಡೆಯಲು ವಿವಿಧ ಟ್ರಾವೆಲ್ ಏಜೆನ್ಸಿಯವರಿಂದ ದರಪಟ್ಟಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ. 
ಇಚ್ಛೆಯುಳ್ಳವÀರು ತಮ್ಮ ಕಡಿಮೆ ದರದ ಕೊಟೇಶನ್‍ದೊಂದಿಗೆ ಮೋಹರ್ ಬಂದ ಲಕೋಟೆಯನ್ನು ಮೇ 15 ರ ಮಧ್ಯಾಹ್ನ 1.30 ಗಂಟೆಯೊಳಗಾಗಿ ಸದರಿ ಕಚೇರಿಯಲ್ಲಿ ಸಲ್ಲಿಸಬೇಕು. ಅರ್ಹತೆ, ನಿಬಂಧನೆ ಮುಂತಾದ ವಿವರಗಳಿಗಾಗಿ ಕಲಬುರಗಿ ವಿಭಾಗದ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆ ಜಂಟಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಕೋರಿದೆ.
ಮೇ 9ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
ಕಲಬುರಗಿ,ಮೇ.08.(ಕ.ವಾ.)-ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯ ಕಲಬುರಗಿ ಕಾರ್ಯ ಮತ್ತು ಪಾಲನೆ ನಗರ ವಿಭಾಗದಿಂದ 11 ಕೆ.ವಿ. ಮಹಾವೀರ ನಗರ ಪೀಡರ ವ್ಯಾಪ್ತಿಯ ಮೋಹನ ಲಾಡ್ಜ್‍ದಿಂದ ಅಂಡರ್ ಬ್ರಿಡ್ಜ್  ವರೆಗೆ ರಸ್ತೆ ಅಗಲಿಕರಣ ಕಾರ್ಯ ಹಾಗೂ 11 ಕೆ.ವಿ. ರಾಘವೇಂದ್ರ ಕಾಲೋನಿ ಫೀಡರ್ ವ್ಯಾಪ್ತಿಯ ಅನ್ನಪೂರ್ಣ ಕ್ರಾಸಿನಿಂದ ಜಯದೇವ ಆಸ್ಪತ್ರೆವರೆಗಿನ ರಸ್ತೆ ಅಗಲೀಕರಣ ಮತ್ತು ಹೆಚ್.ಟಿ./ಎಲ್.ಟಿ. ಮಾರ್ಗ/ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾರ್ಯ ಕೈಗೊಳ್ಳುವ ಪ್ರಯುಕ್ತ ಮೇ 9ರಂದು ಬೆಳಗಿನ 8 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಸದರಿ ಫೀಡರುಗಳ ವ್ಯಾಪ್ತಿಯ ಬಡಾವಣೆಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ. ವಿದ್ಯುತ್ ಗ್ರಾಹಕರು ಜೆಸ್ಕಾಂದೊಂದಿಗೆ ಸಹಕರಿಸಬೇಕೆಂದು ಈ ಮೂಲಕ ಕೋರಲಾಗಿದೆ. ವಿದ್ಯುತ್ ವ್ಯತ್ಯಯದ ಬಡಾವಣೆಗಳ ವಿವರ ಇಂತಿದೆ. 
11 ಕೆ.ವಿ ಮಹಾವೀರನಗರ ಫೀಡರ್: ಮಹಾವೀರನಗರ, ಶಾಸ್ತ್ರಿನಗರ, ಹನುಮಾನ ನಗರ, ಪಂಚಶೀಲ ನಗರ, ವೆಂಕಟೇಶ ನಗರ. ಕೆ.ಇ.ಬಿ.ಸ್ಟೋರ್, ಕೆ.ಇ.ಬಿ. ಕ್ವಾರ್ಟರ್ಸ್, ಪಿ.ಡಬ್ಲ್ಯೂಡಿ. ಕಚೇರಿ, ಅಮಲ್‍ವಾಡಿ ಸ್ಟೇಶನ್ ಬಜಾರ್ ಅಪ್ಪÀರ ಲೆನ್ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು.
11 ಕೆ.ವಿ. ರಾಘವೇಂದ್ರ ಕಾಲೋನಿ ಫೀಡರ್: ಪಿ.ಎಲ್.ಡಿ. ಬ್ಯಾಂಕ್, ಗೊಲ್ಲರಗಲ್ಲಿ, ಜಗತ್, ಜಗತ್ ಅಪ್ಪರ್ ಮತ್ತು ಲೋವರ್ ಲೆನ್, ಮಹಾನಗರ ಪಾಲಿಕೆಯ ಆಯುಕ್ತರ ವಸತಿ ಗೃಹ, ತಿರಂದಾಜ್ ಟಾಕೀಸ್ ಎದುರುಗಡೆ ಮೈಲಾರಲಿಂಗ ದೇವಸ್ಥಾನ, ಆದಿತ್ಯ ಹೋಟೆಲ್, ಎಸ್.ಪಿ. ಕಚೇರಿ ಪ್ರದೇಶ, ಏಷಿಯನ್ ಮಾಲ್, ಆಮಂತ್ರಣ ಹೋಟೆಲ್, ಕಕ್ಕೇರಿ ಕಾಂಪ್ಲೆಕ್ಸ್, ಪಶು ವೈದ್ಯಕೀಯ ಆಸ್ಪತ್ರೆ ಟ್ರೈನಿಂಗ್ ಸೆಂಟರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು.



ಹೀಗಾಗಿ ಲೇಖನಗಳು NEWS AND PHOTO DATE; 8-5-2017

ಎಲ್ಲಾ ಲೇಖನಗಳು ಆಗಿದೆ NEWS AND PHOTO DATE; 8-5-2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ NEWS AND PHOTO DATE; 8-5-2017 ಲಿಂಕ್ ವಿಳಾಸ https://dekalungi.blogspot.com/2017/05/news-and-photo-date-8-5-2017.html

Subscribe to receive free email updates:

0 Response to "NEWS AND PHOTO DATE; 8-5-2017"

ಕಾಮೆಂಟ್‌‌ ಪೋಸ್ಟ್‌ ಮಾಡಿ