ಶೀರ್ಷಿಕೆ : ಉದ್ಯೋಗಖಾತ್ರಿಯಡಿ ಕಲ್ಲೂರಿನಲ್ಲಿ ಹೊಸ ಕೆರೆ ನಿರ್ಮಾಣ ಕಾಮಗಾರಿ ಪ್ರಾರಂಭ
ಲಿಂಕ್ : ಉದ್ಯೋಗಖಾತ್ರಿಯಡಿ ಕಲ್ಲೂರಿನಲ್ಲಿ ಹೊಸ ಕೆರೆ ನಿರ್ಮಾಣ ಕಾಮಗಾರಿ ಪ್ರಾರಂಭ
ಉದ್ಯೋಗಖಾತ್ರಿಯಡಿ ಕಲ್ಲೂರಿನಲ್ಲಿ ಹೊಸ ಕೆರೆ ನಿರ್ಮಾಣ ಕಾಮಗಾರಿ ಪ್ರಾರಂಭ
ಕೊಪ್ಪಳ ಜೂ. 08 (ಕರ್ನಾಟಕ ವಾರ್ತೆ): ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆಯಡಿ ಯಲಬುರ್ಗಾ ತಾಲೂಕು ಕಲ್ಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಸಾರ್ವಜನಿಕ ಹೊಸ ಕೆರೆ ನಿರ್ಮಾಣ ಕಾಮಗಾರಿಗೆ ಇತ್ತೀಚೆಗೆ ಚಾಲನೆ ನೀಡಲಾಯಿತು.
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕಲ್ಲೂರು ಗ್ರಾಮದ ಸಾರ್ವಜನಿಕ ಹೊಸ ಕೆರೆ ನಿರ್ಮಾಣ ಕಾಮಗಾರಿಯನ್ನು ಗ್ರಾಮ ಪಂಚಾಯತಿ ಅಧ್ಯಕ್ಷ ರಾಮಪ್ಪ ಬಂಗಾಳಿಗಿಡ ಚಾಲನೆ ನೀಡಿದರು. ಸುಮಾರು 285 ಕ್ಕೂ ಹೆಚ್ಚು ಕೂಲಿಕಾರರು ಕಾಮಗಾರಿಯಲ್ಲಿ ತೊಡಗಿಕೊಂಡಿದ್ದಾರೆ.
ಕಾಮಗಾರಿ ಸ್ಥಳದಲ್ಲಿ ಜಿಲ್ಲಾ ಪಂಚಾಯತಿಯ ಎಮ್. ಐ.ಎಸ್ ಸಂಯೋಜಕ ಮೈನುದ್ದಿನ್ ಮಾತನಾಡಿ ಕೂಲಿಕಾರ್ಮಿಕರು ಕೂಲಿ ಕೆಲಸ ಮಾಡಲು ಪ್ರತ್ಯೇಕ ಖಾತೆ ಹೊಂದುವುದು ಕಡ್ಡಾಯವಾದ್ದರಿಂದ ಬ್ಯಾಂಕ್ ಖಾತೆ ಮತ್ತು ಆಧಾರ ಸಂಖ್ಯೆಗಳನ್ನು ಗ್ರಾಮ ಪಂಚಾಯತಿಯಲ್ಲಿ ನೊಂದಣಿ ಮಾಡಬೇಕು. ಕೂಲಿಕಾರರ ಹಾಜರಾತಿಯನ್ನು ಪ್ರತಿ ದಿನ ಎರಡು ಸಾರಿ ತೆಗೆದುಕೊಳ್ಳುವುದರ ಜೊತೆಗೆ ಮಾರ್ಗಸೂಚಿ ಪ್ರಕಾರ ಕೆಲಸ ನಿರ್ವಹಿಸಲು ಕೂಲಿಕಾರರಿಗೆ ತಿಳಿಸಬೇಕು ಎಂದರು. ಕಾಮಗಾರಿಯ ಸ್ಥಳದಲ್ಲಿ ಕನಿಷ್ಟ ಸೌಲಭ್ಯಗಳಾದ ಕುಡಿಯುವ ನೀರು ಮತ್ತು ಪ್ರಥಮ ಚಿಕಿತ್ಸಾ ಪೆಟ್ಟಿಗೆ ಇಡಲು ಗ್ರಾಮ ಕೂಲಿ ಸಹಾಯಕರಿಗೆ ತಿಳಿಸಿದರು.
ಹಲವಾರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಕೆರೆ ಹೂಳೆತ್ತುವ, ಕೃಷಿ ಹೊಂಡ ನಿರ್ಮಾಣ, ಚೆಕ್ ಡ್ಯಾಂ ಹೂಳೆತ್ತುವುದು ಸೇರಿದಂತೆ ವೈಯಕ್ತಿಕ ಮತ್ತು ಸಮುದಾಯ ಕಾಮಗಾರಿಗಳು ಚಾಲನೆಯಲ್ಲಿದ್ದು ಕೂಲಿಕಾರ್ಮಿಕರು ಇದರ ಸದುಪಯೋಗ ಪಡಿಸಿಕೊಂಡು ಕಾಮಗಾರಿಗಳಲ್ಲಿ ಕೂಲಿ ಕೆಲಸ ಮಾಡಲು ಕರೆ ನೀಡಲಾಯಿತು.
ಕಾಮಗಾರಿ ಸ್ಥಳದಲ್ಲಿ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿ ಆದಿಬಸಯ್ಯ ಹಿರೇಮಠ, ತಾಂತ್ರಿಕ ಸಹಾಯಕ ಈರಮ್ಮ, ತಾಲೂಕ ಐ.ಇ.ಸಿ ಸಂಯೋಜಕ ಲಕ್ಷ್ಮಣ ಕೆರಳ್ಳಿ ಮತ್ತು ಸಮುದಾಯ ತಾಂತ್ರಿಕ ಸಹಾಯಕ ಶಿವಪ್ಪ ಸೂಡಿ ಉಪಸ್ಥಿತರಿದ್ದರು.
ಹೀಗಾಗಿ ಲೇಖನಗಳು ಉದ್ಯೋಗಖಾತ್ರಿಯಡಿ ಕಲ್ಲೂರಿನಲ್ಲಿ ಹೊಸ ಕೆರೆ ನಿರ್ಮಾಣ ಕಾಮಗಾರಿ ಪ್ರಾರಂಭ
ಎಲ್ಲಾ ಲೇಖನಗಳು ಆಗಿದೆ ಉದ್ಯೋಗಖಾತ್ರಿಯಡಿ ಕಲ್ಲೂರಿನಲ್ಲಿ ಹೊಸ ಕೆರೆ ನಿರ್ಮಾಣ ಕಾಮಗಾರಿ ಪ್ರಾರಂಭ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಉದ್ಯೋಗಖಾತ್ರಿಯಡಿ ಕಲ್ಲೂರಿನಲ್ಲಿ ಹೊಸ ಕೆರೆ ನಿರ್ಮಾಣ ಕಾಮಗಾರಿ ಪ್ರಾರಂಭ ಲಿಂಕ್ ವಿಳಾಸ https://dekalungi.blogspot.com/2017/06/blog-post_23.html
0 Response to "ಉದ್ಯೋಗಖಾತ್ರಿಯಡಿ ಕಲ್ಲೂರಿನಲ್ಲಿ ಹೊಸ ಕೆರೆ ನಿರ್ಮಾಣ ಕಾಮಗಾರಿ ಪ್ರಾರಂಭ"
ಕಾಮೆಂಟ್ ಪೋಸ್ಟ್ ಮಾಡಿ