ಶೀರ್ಷಿಕೆ : ಜೀವ ರಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ
ಲಿಂಕ್ : ಜೀವ ರಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ
ಜೀವ ರಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ
ಕೊಪ್ಪಳ, ಜೂ. 15 (ಕರ್ನಾಟಕ ವಾರ್ತೆ): ಕರ್ನಾಟಕ ಸರಕಾರವು ಆರೋಗ್ಯ ಮತ್ತು ಕುಂಟುಂಬ ಕಲ್ಯಾಣ ಇಲಾಖೆ ಹಾಗೂ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮುಖಾಂತರ ಅಪಘಾತದ ಸಂದರ್ಭದಲ್ಲಿ ಗಾಯಾಳುವಿಗೆ ನೆರವು ನೀಡಿದವರಿಗೆ “ಜೀವ ರಕ್ಷಕ” ಪ್ರಶಸ್ತಿ ನೀಡಲಾಗುತ್ತಿದ್ದು, ನೆರವು ನೀಡಿದವರಿಂದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯದಲ್ಲಿ ಸಂಭವಿಸುವ ರಸ್ತೆ ಅಪಘಾತದ ಗಾಯಾಳುವಿಗೆ ರಾಜ್ಯ ಸರಕಾರವು ಜಾರಿಗೊಳಿಸಿರುವ ಮುಖ್ಯಮಂತ್ರಿಗಳ ಸಾಂತ್ವನ ಹರೀಶ್ ಯೋಜನೆಯಡಿ 48 ಗಂಟೆಗಳ ವರೆಗೆ ಗರಿಷ್ಠ 25,000/- ರೂಪಾಯಿಗಳ ವರೆಗೆ ಎಲ್ಲಾ ಸರಕಾರಿ ಮತ್ತು ಖಾಸಗಿ ನೋಂದಾಯಿತ ಸಂಪರ್ಕ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಒದಗಿಸಲಾಗುತ್ತಿದೆ. ಅಪಘಾತದಂತಹ ಸಂಕಷ್ಟದ ಸಂದರ್ಭದಲ್ಲಿ ತಕ್ಷಣ ಚಿಕಿತ್ಸೆ ಹಾಗೂ ಜೀವ ಉಳಿಸಲು ನೆರವಾಗುವವರಿಗೆ ಜೀವ ರಕ್ಷಕ ಪ್ರಶಸ್ತಿ ನೀಡುವ ಮೂಲಕ ಅವರನ್ನು ಗೌರವಿಸಲಾಗುತ್ತಿದೆ.
ಕೊಪ್ಪಳ ಜಿಲ್ಲೆಯಲ್ಲಿ ಅಪಘಾತಕ್ಕೆ ಒಳಗಾದವರನ್ನು ರಕ್ಷಿಸಲು ನೆರವಾದವರು ಜೀವ ರಕ್ಷಕ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಬೇಕಿರುತ್ತದೆ. ಅರ್ಜಿಯನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಸಂಯೋಜಕರಲ್ಲಿ ಪಡೆದು ಜುಲೈ. 08 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, ಜಿಲ್ಲಾ ಸಂಯೋಜಕರು, ಜಿಲ್ಲಾ ಆಸ್ಪತ್ರೆ ಕೊಪ್ಪಳ ಮೊಬೈಲ್ 7760999114 ಅಥವಾ 7760999098 ಸಂಖ್ಯೆಗಳಿಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ಆರೋಗ್ಯ ಮತ್ತು ಕುಂಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಜೀವ ರಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಜೀವ ರಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಜೀವ ರಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/06/blog-post_37.html
0 Response to "ಜೀವ ರಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ