ಶೀರ್ಷಿಕೆ : ಮಳೆಗಾಲ ಪ್ರಾರಂಭ : ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ
ಲಿಂಕ್ : ಮಳೆಗಾಲ ಪ್ರಾರಂಭ : ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ
ಮಳೆಗಾಲ ಪ್ರಾರಂಭ : ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ
ಕೊಪ್ಪಳ ಜೂ. 09 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಸದ್ಯ ಮಳೆಗಾಲ ಪ್ರಾರಂಭವಾಗುತ್ತಿದ್ದು, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿಗಳು, ಗ್ರಾಮ ಪಂಚಾಯತಿಗಳು, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ ಹೀಗೆ ಸಂಬಂಧಪಟ್ಟ ಇಲಾಖೆಗಳು ಈಗಿನಿಂದಲೇ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಪ್ರಸಕ್ತ ಮುಂಗಾರು ಹಂಗಾಮಿನ ಸಿದ್ಧತೆ ಹಾಗೂ ಮಳೆಗಾಲದಲ್ಲಿ ವಿವಿಧ ಇಲಾಖೆಗಳು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರದಂದು ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಳೆಗಾಲದ ಸಂದರ್ಭದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಬಣವಾಗುವುದರಿಂದ, ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ತೆಗ್ಗು ಪ್ರದೇಶಗಳಲ್ಲಿ ನೀರು ನಿಲ್ಲದಂತೆ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಇಂದಿನಿಂದಲೇ ಎಲ್ಲ ಚರಂಡಿಗಳನ್ನು ಸ್ವಚ್ಛಗೊಳಿಸುವ ಕಾರ್ಯವನ್ನು ಸಮರೋಪಾದಿಯಲ್ಲಿ ಕೈಗೊಳ್ಳಬೇಕು. ಕಳೆದ ವರ್ಷ ಹೆಚ್ಚು ಮಳೆ ಸುರಿದ ಸಂದರ್ಭದಲ್ಲಿ ಉಂಟಾದ ತೊಂದರೆಗಳು, ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಸಾರ್ವಜನಿಕರು ಕಷ್ಟ ಅನುಭವಿಸಿರುವ ಪ್ರಕರಣಗಳನ್ನು ಗಮನದಲ್ಲಿರಿಸಿಕೊಂಡು, ಅಂತಹ ಪ್ರದೇಶಗಳನ್ನು ಗುರುತಿಸಬೇಕು. ಅಲ್ಲದೆ ಈ ಬಾರಿಯ ಮಳೆಗಾಲದಲ್ಲಿ ಸಾರ್ವಜನಿಕರು ಅಂತಹ ತೊಂದರೆ ಅನುಭವಿಸದಂತೆ, ಅಗತ್ಯ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ತಹಸಿಲ್ದಾರರು, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿಗಳ ಮುಖ್ಯಾಧಿಕಾರಿಗಳು ಹಾಗೂ ಗ್ರಾ.ಪಂ. ಪಿಡಿಒ ಗಳು ಕೂಡಲೆ ಈ ಕುರಿತು ಆದ್ಯತೆಯಾಗಿ ಪರಿಗಣಿಸಿ ಚರಂಡಿ ಸ್ವಚ್ಛತೆ, ತೆಗ್ಗು ಪ್ರದೇಶಗಳನ್ನು ಮುಚ್ಚುವ ಕಾರ್ಯ ಮುಂತಾದ ಮುಂಜಾಗ್ರತಾ ಕ್ರಮಗಳನ್ನು ತಕ್ಷಣವೇ ಪ್ರಾರಂಭಿಸಬೇಕು. ತೀವ್ರ ಮಳೆಯ ಸಂದರ್ಭದಲ್ಲಿ ಸಾರ್ವಜನಿಕರ ಯಾವುದೇ ತೊಂದರೆಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೆ ಸ್ಪಂದಿಸುವಂತಾಗಬೇಕು. ಯಾವುದೇ ಅಧಿಕಾರಿಗಳು ಜಿಲ್ಲಾಧಿಕಾರಿಗಳ ಅನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡುವುದು ಅಥವಾ ರಜೆ ಮೇಲೆ ತೆರಳುವಂತಿಲ್ಲ ಎಂದು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಶಿಕ್ಷಕರು ಎಚ್ಚರಿಕೆ ವಹಿಸಿ :
************* ಮಳೆಗಾಲದಲ್ಲಿ ಶಾಲೆಗಳಲ್ಲಿನ ವಿದ್ಯುತ್ ಸಂಪರ್ಕ, ವೈರಿಂಗ್, ಕಟ್ಟಡದ ಸ್ಥಿತಿ-ಗತಿ ಕುರಿತಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಶಾಲೆಯ ಕಂಪೌಂಡ್ಗೆ ಹೊಂದಿಕೊಂಡಂತೆ ವಿದ್ಯುತ್ ಪರಿವರ್ತಕಗಳಿದ್ದಲ್ಲಿ, ಅದನ್ನು ಸ್ಥಳಾಂತರಿಸಿಕೊಳ್ಳಬೇಕು. ಶಾಲೆಗಳಲ್ಲಿನ ವಿದ್ಯುತ್ ವೈರಿಂಗ್, ಅರ್ಥಿಂಗ್ ವ್ಯವಸ್ಥೆ ಪರಿಶೀಲಿಸಬೇಕು. ಯಾವುದೇ ವೈರ್ಗಳನ್ನು ಮುಟ್ಟದಂತೆ ಹಾಗೂ ಮಳೆಗಾಲದಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ, ಉಪವಿಭಾಗಾಧಿಕಾರಿ ಗುರುದತ್ ಹೆಗ್ಡೆ, ಜಿ.ಪಂ. ಉಪಕಾರ್ಯದರ್ಶಿ ಎನ್.ಕೆ. ತೊರವಿ, ತೋಟಗಾರಿಕೆ ಉಪನಿರ್ದೇಶಕ ಕೃಷ್ಣ ಉಕ್ಕುಂದ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ವಿಜಯಕುಮಾರ ಸೇರಿದಂತೆ ಎಲ್ಲ ತಹಸಿಲ್ದಾರರು, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು, ನಗರಸಭೆ, ಪುರಸಭೆ, ಪ.ಪಂ. ಗಳ ಮುಖ್ಯಾಧಿಕಾರಿಗಳು ಪಾಲ್ಗೊಂಡಿದ್ದರು.
ಹೀಗಾಗಿ ಲೇಖನಗಳು ಮಳೆಗಾಲ ಪ್ರಾರಂಭ : ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ
ಎಲ್ಲಾ ಲೇಖನಗಳು ಆಗಿದೆ ಮಳೆಗಾಲ ಪ್ರಾರಂಭ : ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಮಳೆಗಾಲ ಪ್ರಾರಂಭ : ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ ಲಿಂಕ್ ವಿಳಾಸ https://dekalungi.blogspot.com/2017/06/blog-post_52.html
0 Response to "ಮಳೆಗಾಲ ಪ್ರಾರಂಭ : ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ"
ಕಾಮೆಂಟ್ ಪೋಸ್ಟ್ ಮಾಡಿ