ಶೀರ್ಷಿಕೆ : ಪ್ರಧಾನಮಂತ್ರಿ ಫಸಲ್ ಭೀಮಾ ಹಾಗೂ ಹವಮಾನ ಆಧಾರಿತ ಬೆಳೆ ವಿಮಾ ಯೋಜನೆ : ಅರ್ಜಿ ಆಹ್ವಾನ
ಲಿಂಕ್ : ಪ್ರಧಾನಮಂತ್ರಿ ಫಸಲ್ ಭೀಮಾ ಹಾಗೂ ಹವಮಾನ ಆಧಾರಿತ ಬೆಳೆ ವಿಮಾ ಯೋಜನೆ : ಅರ್ಜಿ ಆಹ್ವಾನ
ಪ್ರಧಾನಮಂತ್ರಿ ಫಸಲ್ ಭೀಮಾ ಹಾಗೂ ಹವಮಾನ ಆಧಾರಿತ ಬೆಳೆ ವಿಮಾ ಯೋಜನೆ : ಅರ್ಜಿ ಆಹ್ವಾನ
ಕೊಪ್ಪಳ, ಜೂ. 15 (ಕರ್ನಾಟಕ ವಾರ್ತೆ): ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಮತ್ತು ಹವಮಾನಾಧಾರಿತ ಬೆಳೆ ವಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಆಸಕ್ತ ರೈತರು ಸೌಲಭ್ಯ ಪಡೆದುಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಕೊಪ್ಪಳ ತಾಲೂಕಿನ ಅಳವಂಡಿ, ಹಿಟ್ನಾಳ, ಇರಕಲ್ಲಗಡ ಹಾಗೂ ಕೊಪ್ಪಳ ಹೋಬಳಿಗಳಲ್ಲಿ ದ್ರಾಕ್ಷಿ, ದಾಳಿಂಬೆ, ಮಾವು, ಹಸಿಮೆಣಸಿನಕಾಯಿ(ನೀರಾವರಿ), ಪಪ್ಪಾಯ, ಈರುಳ್ಳಿ(ನೀರಾವರಿ), ಟೋಮೆಟೊ ಮತ್ತು ಬದನೆ. ಗಂಗಾವತಿ ತಾಲೂಕಿನ ಹುಲಿಹೈದರ್, ಕನಕಗಿರಿ, ನವಲಿ, ವೆಂಕಟಗಿರಿ, ಸಂಗಾಪೂರ, ಮರಳಿ, ಕಾರಟಗಿ ಹಾಗೂ ಸಿದ್ದಾಪುರ ಹೋಬಳಿಗಳಲ್ಲಿ ದ್ರಾಕ್ಷಿ, ದಾಳಿಂಬೆ, ಮಾವು, ಹಸಿಮೆಣಸಿನಕಾಯಿ, ಪಪ್ಪಾಯ, ಈರುಳ್ಳಿ (ನೀರಾವರಿ), ಟೋಮೆಟೊ, ಈರುಳ್ಳಿ (ಮಳೆಆಶ್ರಿತ), ಮತ್ತು ಬದನೆ. ಕುಷ್ಟಗಿ ತಾಲೂಕಿನ ಹನುಮನಾಳ, ಹನುಮಸಾಗರ, ಕುಷ್ಟಗಿ ಹಾಗೂ ತಾವರಗೇರಾ ಹೋಬಳಿಗಳಲ್ಲಿ ದ್ರಾಕ್ಷಿ, ದಾಳಿಂಬೆ, ಮಾವು, ಹಸಿಮೆಣಸಿನಕಾಯಿ (ನೀರಾವರಿ), ಪಪ್ಪಾಯ, ಈರುಳ್ಳಿ(ನೀರಾವರಿ), ಮತ್ತು ಟೋಮೆಟೊ. ಯಲಬುರ್ಗಾ ತಾಲೂಕಿನ ಕುಕನೂರು, ಮಂಗಳೂರು, ಯಲಬುರ್ಗಾ ಹಾಗೂ ಹಿರೇವಂಕಲಕುಂಟಾ ಹೋಬಳಿಗಳಲ್ಲಿ ದ್ರಾಕ್ಷಿ, ದಾಳಿಂಬೆ, ಮಾವು, ಹಸಿಮೆಣಸಿನಕಾಯಿ(ನೀರಾವರಿ), ಪಪ್ಪಾಯ, ಈರುಳ್ಳಿ(ಮಳೆಆಶ್ರಿತ), ಟೋಮೆಟೊ ಮತ್ತು ಬದನೆ. ಬೆಳೆಗಳಿಗೆ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ (ಪಿ.ಎಂ.ಎಫ್.ಬಿ.ವೈ) ಮತ್ತು ಹವಮಾನಾಧಾರಿತ ಬೆಳೆ ವಿಮಾ ಯೋಜನೆಯಡಿಯಲ್ಲಿ ರೂಪರೇಷಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ಹವಮಾನಾಧಾರಿತ ಬೆಳೆ ವಿಮಾ ಯೋಜನೆ :
************* ಹಸಿಮೆಣಸಿನಕಾಯಿ (ನೀ) ಬೆಳೆಗೆ ಪ್ರತಿ ಹೆಕ್ಟೇರ್ಗೆ ವಿಮಾ ಮೊತ್ತ 69821-00 ರೂ ಆಗಿದ್ದು, ರೈತರು ಪಾವತಿಸಬೇಕಾದ ವಿಮಾ ಕಂತಿನ ಮೊತ್ತ 3491-05 ರೂಗಳು. ದಾಳಿಂಬೆ ಬೆಳೆಗೆ ಪ್ರತಿ ಹೆಕ್ಟೇರ್ಗೆ ವಿಮಾ ಮೊತ್ತ 126471-00 ರೂ ಆಗಿದ್ದು, ರೈತರು ಪಾವತಿಸಬೇಕಾದ ವಿಮಾ ಕಂತಿನ ಮೊತ್ತ 6323-55 ರೂಗಳು. ಮಾವು ಬೆಳೆಗೆ ಪ್ರತಿ ಹೆಕ್ಟೇರ್ಗೆ ವಿಮಾ ಮೊತ್ತ 73820-00 ರೂ ಆಗಿದ್ದು, ರೈತರು ಪಾವತಿಸಬೇಕಾದ ವಿಮಾ ಕಂತಿನ ಮೊತ್ತ 3691-00 ರೂಗಳು. ದ್ರಾಕ್ಷಿ ಬೆಳೆಗೆ ಪ್ರತಿ ಹೆಕ್ಟೇರ್ಗೆ ವಿಮಾ ಮೊತ್ತ 261941-00 ರೂ ಆಗಿದ್ದು, ರೈತರು ಪಾವತಿಸಬೇಕಾದ ವಿಮಾ ಕಂತಿನ ಮೊತ್ತ 13097-05 ರೂಗಳು. ಪಪ್ಪಾಯ ಬೆಳೆಗೆ ಪ್ರತಿ ಹೆಕ್ಟೇರ್ಗೆ ವಿಮಾ ಮೊತ್ತ 133625-00 ರೂ ಆಗಿದ್ದು, ರೈತರು ಪಾವತಿಸಬೇಕಾದ ವಿಮಾ ಕಂತಿನ ಮೊತ್ತ 6681-25 ರೂಗಳು. ಹವಮಾನ ಆಧಾರಿತ ಬೆಳೆ ವಿಮಾ ಯೋಜನೆಯಲ್ಲಿ ಅರ್ಜಿ ಸಲ್ಲಿಸಲು ಜೂ. 30 ಕೊನೆಯ ದಿನವಾಗಿದೆ.
ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ :
*********** ಟೋಮ್ಯಾಟೊ (ನೀ) ಬೆಳೆಗೆ ಪ್ರತಿ ಹೆಕ್ಟೇರ್ಗೆ ವಿಮಾ ಮೊತ್ತ 115000-00 ರೂ ಆಗಿದ್ದು, ರೈತರು ಪಾವತಿಸಬೇಕಾದ ವಿಮಾ ಕಂತಿನ ಮೊತ್ತ 5750-00 ರೂಗಳು. ಈರುಳ್ಳಿ (ನೀ) ಬೆಳೆಗೆ ಪ್ರತಿ ಹೆಕ್ಟೇರ್ಗೆ ವಿಮಾ ಮೊತ್ತ 74000-00 ರೂ ಆಗಿದ್ದು, ರೈತರು ಪಾವತಿಸಬೇಕಾದ ವಿಮಾ ಕಂತಿನ ಮೊತ್ತ 3700-00 ರೂಗಳು. ಈರುಳ್ಳಿ (ಮ.ಆ) ಬೆಳೆಗೆ ಪ್ರತಿ ಹೆಕ್ಟೇರ್ಗೆ ವಿಮಾ ಮೊತ್ತ 74000-00 ರೂ ಆಗಿದ್ದು, ರೈತರು ಪಾವತಿಸಬೇಕಾದ ವಿಮಾ ಕಂತಿನ ಮೊತ್ತ 3700-00 ರೂಗಳು. ಬದನೆ ಬೆಳೆಗೆ ಪ್ರತಿ ಹೆಕ್ಟೇರ್ಗೆ ವಿಮಾ ಮೊತ್ತ 56000-00 ರೂ ಆಗಿದ್ದು, ರೈತರು ಪಾವತಿಸಬೇಕಾದ ವಿಮಾ ಕಂತಿನ ಮೊತ್ತ 2800-00 ರೂಗಳು. ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಅರ್ಜಿ ಸಲ್ಲಿಸಲು ಜುಲೈ. 31 ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸಲು ವಿಮಾ ಮೊತ್ತವು ಬೆಳೆ ಸಾಲ ಪಡೆದ ಮತ್ತು ಬೆಳೆ ಸಾಲ ಪಡೆಯದ ರೈತರಿಗೆ ಒಂದೇ ಆಗಿರುತ್ತದೆ. ಬೆಳೆ ಸಾಲ ಪಡೆಯದ ರೈತರು ವಿಮೆ ಕಟ್ಟಲು ಹತ್ತಿರದ ರಾಷ್ಟ್ರೀಕೃತ ಬ್ಯಾಂಕ್ಗಳಿಗೆ ನಿಗದಿತ ಅರ್ಜಿಗಳೊಂದಿಗೆ ಭೂಮಿ ಹಿಂದಿರಲು ದಾಖಲೆಗಳಾದ ಪಹಣಿ, ಬ್ಯಾಂಕ್ ಪಾಸ್ ಪುಸ್ತಕ, ಆಧಾರ ಕಾರ್ಡ ಮತ್ತು ಸ್ವಯಂ ಘೋಷಿತ ಬೆಳೆ ವಿವರಗಳೊಂದಿಗೆ ಸಂಪರ್ಕಿಸಬೇಕು. ಹೆಚ್ಚಿನ ಮಾಹಿತಿಗಾಗಿ ತಮ್ಮ ಸಮೀಪದ ಕೃಷಿ ಅಧಿಕಾರಿಗಳು, ತೋಟಗಾರಿಕೆ ಅಧಿಕಾರಿಗಳು ಹಾಗೂ ಸಮೀಪದ ಯಾವುದೇ ಬ್ಯಾಂಕ್ಗಳಿಗೆ ಭೇಟಿ ನೀಡಿ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ರೈತ ಬಾಂಧವರಿಗೆ ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಪ್ರಧಾನಮಂತ್ರಿ ಫಸಲ್ ಭೀಮಾ ಹಾಗೂ ಹವಮಾನ ಆಧಾರಿತ ಬೆಳೆ ವಿಮಾ ಯೋಜನೆ : ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಪ್ರಧಾನಮಂತ್ರಿ ಫಸಲ್ ಭೀಮಾ ಹಾಗೂ ಹವಮಾನ ಆಧಾರಿತ ಬೆಳೆ ವಿಮಾ ಯೋಜನೆ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಪ್ರಧಾನಮಂತ್ರಿ ಫಸಲ್ ಭೀಮಾ ಹಾಗೂ ಹವಮಾನ ಆಧಾರಿತ ಬೆಳೆ ವಿಮಾ ಯೋಜನೆ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/06/blog-post_92.html
0 Response to "ಪ್ರಧಾನಮಂತ್ರಿ ಫಸಲ್ ಭೀಮಾ ಹಾಗೂ ಹವಮಾನ ಆಧಾರಿತ ಬೆಳೆ ವಿಮಾ ಯೋಜನೆ : ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ