ಶೀರ್ಷಿಕೆ : NI 19-06-2017
ಲಿಂಕ್ : NI 19-06-2017
NI 19-06-2017
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮಹಿಳಾ ನಿವಾಸಿ
ಕಲಬುರಗಿ ನಗರದ ಬ್ರಹ್ಮಪುರದ ಹಿಂದು ಲಿಂಗಾಯತ ಕುಟುಂಬದ ವಿರುಪಾಕ್ಷಯ್ಯ ಅವರ ಮಗ
ಶಿವಲಿಂಗಯ್ಯ 27 ವರ್ಷ ವಯೋಮಿತಿ ಹೊಂದಿದ್ದಾನೆ. ಹತ್ತನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡಿದ್ದಾನೆ. ಕಲಬುರಗಿ ಸುಪರಮಾರ್ಕೆಟ್ಟಿನ ಸಂಗಮ ಕಾಂಪ್ಲೆಕ್ಸಿನಲ್ಲಿ ಶಿವಲಿಂಗ ಬುಕ್ ಡಿಪೋ ವ್ಯವಸ್ಥಾಪಕನಾಗಿ ಕಾರ್ಯ ನಿರ್ವಹಿಸುತ್ತಿದ್ದು, ವಾರ್ಷಿಕ 1.50 ಲಕ್ಷ ರೂ. ವೇತನ ಪಡೆಯುತ್ತಿದ್ದಾನೆ.
ಮದುವೆ ಸಮಾರಂಭಕ್ಕೆ ಬಂದಿರುವ ಜಿಲ್ಲಾಧಿಕಾರಿ ಉಜ್ವಲಕುಮಾರ ಘೋಷ್ ಮಾತನಾಡಿ, ಜಾತಿ ಮತ ಪಂಥಗಳನ್ನು ಹೊರತುಪಡಿಸಿ ವಿವಾಹವಾದ ನವ ದಂಪತಿಗಳು ಸಮಾಜಕ್ಕೆ ಮಾದರಿಯಾಗಿದ್ದಾರಲ್ಲದೆ ಸಮಾಜಕ್ಕೆ ಮಾನವೀಯತೆಯ ಸಂದೇಶ ನೀಡಿದ್ದಾರೆ ಎಂದರು. ಅಪರೂಪದ ಈ ಮದುವೆ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಆರ್.ಮಾಣಿಕ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಶ್ರೀಕಾಂತ ಕುಲಕರ್ಣಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಧುತ್ತರಗಾಂವ, ಸದಸ್ಯರಾದ ಶಿವಾನಂದ ಅಣಜಗಿ, ವಿಠ್ಠಲ ಚಿಕಣಿ, ಜಿಲ್ಲಾ ಮಕ್ಕಳ ಹಕ್ಕುಗಳ ಸಂರಕ್ಷಣಾಧಿಕಾರಿ ಸಿ.ವಿ.ರಾಮನ್, ಕಾನೂನು ಮತ್ತು ಪರಿವೀಕ್ಷಣಾಧಿಕಾರಿ ಭರತೇಶ ಶೀಲವಂತರ್, ಜೇವರ್ಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪಾಪಮ್ಮ ಹಾಬಾಳಕರ್, ಬಾಲಕರ ಮತ್ತು ಬಾಲಕಿಯರ ಬಾಲ ಮಂದಿರಗಳ ಅಧೀಕ್ಷಕರು ಮತ್ತಿತರ ಅಧಿಕಾರಿಗಳು ಮತ್ತು ನಿಲಯದ ಸಿಬ್ಬಂದಿಗಳು, ಶಿವಲಿಂಗಯ್ಯ ಮಠಪತಿ ಅವರ ಸಂಬಂಧಿಕರು ಈ ಸಂದರ್ಭದಲ್ಲಿ ಹಾಜರಿದ್ದು, ನವ ದಂಪತಿಗಳನ್ನು ಶುಭ ಹಾರೈಸಿದರು.
ರಕ್ತದಾನದಿಂದ ದೇಹದಲ್ಲಿ ಚೈತನ್ಯ
ಅವರು ಸೋಮವಾರ ಕಲಬುರಗಿ ಜಿಲ್ಲಾ ಪಂಚಾಯತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ, ಜಿಲ್ಲಾ ಸರ್ಕಾರಿ ಆಸ್ಪತ್ರೆ, ಸರ್ಕಾರಿ ನರ್ಸಿಂಗ್ ಶಾಲೆ ಮತ್ತು ಕಾಲೇಜು, ರೆಡ್ ಕ್ರಾಸ್ ಸಂಸ್ಥೆ ಮತ್ತು ರೆಡ್ ರಿಬ್ಬನ್ ಕ್ಲಬ್ ಹಾಗೂ ಬೆಂಗಳೂರಿನ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ವಿಶ್ವ ರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಲಬುರಗಿ ಜಿಲ್ಲೆಯ 27 ಲಕ್ಷ ಜನಸಂಖ್ಯೆಗೆ ಪ್ರತಿ ವರ್ಷ ಸುಮಾರು 25 ಸಾವಿರ ಯೂನಿಟ್ ರಕ್ತದ ಬೇಡಿಕೆ ಇದೆ. 10 ವರ್ಷಗಳ ಹಿಂದೆ ಜಿಲ್ಲೆಯಲ್ಲಿ ಕೇವಲ 10 ರಿಂದ 12 ಸಾವಿರ ಯೂನಿಟ್ ರಕ್ತ ದೊರೆಯುತ್ತಿತ್ತು. ಕಳೆದ ವರ್ಷ 21 ಸಾವಿರ ಯೂನಿಟ್ ರಕ್ತವನ್ನು ದಾನಿಗಳಿಂದ ಸಂಗ್ರಹಿಸಲಾಗಿದೆ. ಜಿಲ್ಲೆಯಲ್ಲಿ ರಕ್ತ ಬಾಂಕುಗಳ ಸಂಖ್ಯೆಯನ್ನು 5ಕ್ಕೆ ಹೆಚ್ಚಿಸಲಾಗಿದೆ ಹಾಗೂ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ರಕ್ತ ಸಂಗ್ರಹಣಾ ಘಟಕಗಳನ್ನು ಪ್ರಾರಂಭಿಸಲಾಗಿದೆ ಎಂದರು.
ಜಿಲ್ಲಾ ಆಸ್ಪತ್ರೆ ಶಸ್ತ್ರಜ್ಞ ಡಾ|| ಬಾಲಚಂದ್ರ ಜೋಶಿ ಮಾತನಾಡಿ, ರಕ್ತದಾನ ಮಾಡಿದಷ್ಟು ರಕ್ತವು ದೇಹದಲ್ಲಿ ಉತ್ಪತ್ತಿಯಾಗುತ್ತದೆ. ರಕ್ತದಾನ ಮಾಡಿದವರು ತಮಗರಿಯದಂತೆ ಸುಮಾರು ಜನರ ಜೀವದಾನ ಮಾಡುವರು. ಅಪಘಾತದಲ್ಲಿ ರಕ್ತಸ್ರಾವವಾದಾಗ 12 ಗಂಟೆಗಳಲ್ಲಿ ಅವಶ್ಯಕ ರಕ್ತ ರೋಗಿಗೆ ನೀಡದಿದ್ದರೆ ಜೀವ ಹಾನಿಯಾಗುವ ಸಂಭವ ಹೆಚ್ಚಾಗಿರುತ್ತದೆ. ಆರೋಗ್ಯವಂತರಾಗಿರುವ ಎಲ್ಲ ಜನರು ವಿಶೇಷವಾಗಿ ಯುವ ವಿದ್ಯಾರ್ಥಿ ಸಮುದಾಯ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಜೀವಗಳನ್ನು ಉಳಿಸಬೇಕು. ರಕ್ತದಾನದ ಬಗ್ಗೆ ಇರುವ ಮಾಢನಂಬಿಕೆಗಳನ್ನು ಹೋಗಲಾಡಿಸಬೇಕು ಎಂದರು.
ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ||ಶರಣಬಸಪ್ಪ ಗಣಜಲಖೇಡ ಮಾತನಾಡಿ, ಒಬ್ಬರ ರಕ್ತದಿಂದ ಸುಮಾರು ನಾಲ್ಕು ಜನರ ಜೀವ ಉಳಿಸಬಹುದು. ರಕ್ತದಲ್ಲಿರುವ ಅಂಶಗಳನ್ನು ವಿಭಜಿಸುವುದರಿಂದ ನಾಲ್ಕು ಜನರಿಗೆ ಉಪಯುಕ್ತವಾಗುವುದು. ಜಿಲ್ಲಾ ಆಸ್ಪತ್ರೆಯಲ್ಲಿ ರಕ್ತ ವಿಭಜಿಸುವ ಘಟಕ ಪ್ರಾರಂಭಿಸಲಾಗುತ್ತಿದೆ. ಎಲ್ಲರೂ ರಕ್ತದಾನ ಮಾಡುವ ನಿಟ್ಟಿನಲ್ಲಿ ಮನ ಪರಿವರ್ತಿಸಬೇಕು. ಯಾವುದೇ ವ್ಯಕ್ತಿಯು 18 ವರ್ಷಗಳ ನಂತರ ಎಷ್ಟು ಬಾರಿಯಾದರೂ ರಕ್ತದಾನ ಮಾಡಬಹುದು. ರಕ್ತ ದಾನದಿಂದ ದೇಹದಲ್ಲಿರುವ ಕೊಬ್ಬು ಕಡಿಮೆಯಾಗಿ ಹೃದಯ ರೋಗದ ಸಂಭವ ಕಡಿಮೆಯಾಗುವುದು ಎಂದರು.
ಇದಕ್ಕೂ ಮುನ್ನ ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ ಅವರು ಜಿಲ್ಲಾ ಆಸ್ಪತ್ರೆಯಿಂದ ಜಗತ್ ವೃತ್ತದ ಮಾರ್ಗವಾಗಿ ಸರ್ಕಾರಿ ನರ್ಸಿಂಗ್ ಕಾಲೇಜಿನವರೆಗೆ ಹಮ್ಮಿಕೊಂಡಿದ್ದ ಜಾಥಾಕ್ಕೆ ಚಾಲನೆ ನೀಡಿದರು.
ಹೀಗಾಗಿ ಲೇಖನಗಳು NI 19-06-2017
ಎಲ್ಲಾ ಲೇಖನಗಳು ಆಗಿದೆ NI 19-06-2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ NI 19-06-2017 ಲಿಂಕ್ ವಿಳಾಸ https://dekalungi.blogspot.com/2017/06/ni-19-06-2017.html
0 Response to "NI 19-06-2017"
ಕಾಮೆಂಟ್ ಪೋಸ್ಟ್ ಮಾಡಿ