ಶೀರ್ಷಿಕೆ : ಮಾದಕ-ಮಾರಕ : ಜು. 31 ರಂದು ಕೊಪ್ಪಳದಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮ
ಲಿಂಕ್ : ಮಾದಕ-ಮಾರಕ : ಜು. 31 ರಂದು ಕೊಪ್ಪಳದಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮ
ಮಾದಕ-ಮಾರಕ : ಜು. 31 ರಂದು ಕೊಪ್ಪಳದಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮ
ಕೊಪ್ಪಳ, ಜು. 29 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾವಾದಿಗಳ ಸಂಘ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಹಯೋಗದಲ್ಲಿ ಮಾದಕ ವಸ್ತುಗಳಿಂದ ಬಾಧಿತರಾದವರಿಗೆ ಕಾನೂನು ಅರಿವು-ನೆರವು ಕಾರ್ಯಕ್ರಮ ಜುಲೈ. 31 ರಂದು ಬೆಳಿಗ್ಗೆ 10-00 ಗಂಟೆಗೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಟಿ. ಶ್ರೀನಿವಾಸ ಅವರು ಉದ್ಘಾಟನೆ ನೆರೆವೇರಿಸುವರು. ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಶುಂಪಾಲ ತಿಮ್ಮಾರೆಡ್ಡಿ ಮೇಟಿ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಿವಿಲ್ ನ್ಯಾಯಾಧೀಶ ವಿಜಯ ಕುಮಾರ ಕನ್ನೂರು, ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ದಾನರೆಡ್ಡಿ, ಜಿಲ್ಲಾ ಸರ್ಕಾರಿ ವಕೀಲ ಆಸೀಫ್ ಅಲಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ದೊಡ್ಡಬಸಪ್ಪ ಎಸ್. ಕಂಪ್ಲಿ, ಕಾರ್ಯದರ್ಶಿ ಕೊಟ್ರೇಶ ಯು. ಪೋಚಗುಂಡಿ ಅವರು ಪಾಲ್ಗೊಳ್ಳುವರು.
ಕಾರ್ಯಕ್ರಮದ ಅಂಗವಾಗಿ ಕೊಪ್ಪಳ ಜಿಲ್ಲಾ ಆಸ್ಪತ್ರೆಯ ಮಾನಸಿಕ ರೋಗ ತಜ್ಞ ಡಾ. ಕೃಷ್ಣ ಓಂಕಾರ ಅವರು ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ಮಾನಸಿಕ ಅವ್ಯವಸ್ಥೆ ಹಾಗೂ ದುಷ್ಟಪರಿಣಾಮಗಳ ಕುರಿತು, ಹಾಗೂ ವಕೀಲರಾದ ಎಂ.ಎ. ಹನುಮಂತರಾವ್ ಅವರು ರಾಷ್ಟ್ರ ಕಟ್ಟುವಲ್ಲಿ ಯುವಕರ ಪಾತ್ರ ಹಾಗೂ ರ್ಯಾಗಿಂಗ್ ತಡೆಗಟ್ಟುವ ಕುರಿತು ವಿಶೇಷ ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಮಾದಕ-ಮಾರಕ : ಜು. 31 ರಂದು ಕೊಪ್ಪಳದಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮ
ಎಲ್ಲಾ ಲೇಖನಗಳು ಆಗಿದೆ ಮಾದಕ-ಮಾರಕ : ಜು. 31 ರಂದು ಕೊಪ್ಪಳದಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಮಾದಕ-ಮಾರಕ : ಜು. 31 ರಂದು ಕೊಪ್ಪಳದಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮ ಲಿಂಕ್ ವಿಳಾಸ https://dekalungi.blogspot.com/2017/07/31.html
0 Response to "ಮಾದಕ-ಮಾರಕ : ಜು. 31 ರಂದು ಕೊಪ್ಪಳದಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮ"
ಕಾಮೆಂಟ್ ಪೋಸ್ಟ್ ಮಾಡಿ