ಶೀರ್ಷಿಕೆ : ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ : ನಿಷೇದಾಜ್ಞೆ ಜಾರಿ
ಲಿಂಕ್ : ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ : ನಿಷೇದಾಜ್ಞೆ ಜಾರಿ
ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ : ನಿಷೇದಾಜ್ಞೆ ಜಾರಿ
ಕೊಪ್ಪಳ, ಜು. 19(ಕರ್ನಾಟಕ ವಾರ್ತೆ): ತುಂಗಭದ್ರಾ ಜಲಾಶಯದ ಎಡದಂಡೆ ಕಾಲುವೆ ಮೈಲು:0 ರಿಂದ 47 ರವರೆಗೆ ಮುಖ್ಯಕಾಲುವೆ ಎಡ ಮತ್ತು ಬಲದಡದಿಂದ 100 ಮೀಟರ ಅಂತರದ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ತಿಳಿಸಿದ್ದಾರೆ.
ಅಧೀಕ್ಷಕ ಅಭಿಯಂತರು, ತುಂಗಭದ್ರಾ ಯೋಜನಾ ವೃತ್ತ, ಮುನಿರಾಬಾದ್ ಇವರು ರಾಯಚೂರು ಜಿಲ್ಲೆಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ, ಜಲಾಶಯದಿಂದ ತುಂಗಭದ್ರಾ ಎಡದಂಡೆ ನಾಲೆಗೆ ಜುಲೈ. 17 ರಿಂದ 27 ರವರೆಗೆ ಸುಮಾರು 1000 ಕ್ಯೂಸೆಕ್ ನಂತೆ 10 ದಿನಗಳವರೆಗೆ ಮಾತ್ರ, ನೀರು ಹರಿಸಬೇಕಾಗಿರುವ ಹಿನ್ನಲೆಯಲ್ಲಿ ನೀರು ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸಲು ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ ಮೈಲು:0 ರಿಂದ 47 ರವರೆಗೆ ಮುಖ್ಯ ಕಾಲುವೆ ಎಡ ಮತ್ತು ಬಲದಡದಿಂದ 100 ಮೀಟರ ಅಂತರದ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.
ತುಂಗಭದ್ರಾ ಎಡದಂಡೆ ಕಾಲುವೆಯ ನಿಷೇದಾಜ್ಞೆ ಜಾರಿಗೊಳಿಸಿದ ಪ್ರದೇಶದ 100 ಮೀಟರ ಅಂತರದ ವ್ಯಾಪ್ತಿಯಲ್ಲಿ ದಡದ ಸುತ್ತಮುತ್ತಲಿನ ಪ್ರದೇಶದಲ್ಲಿ ಸಾರ್ವಜನಿಕರು ಎರಡು ಜನಕ್ಕಿಂತ ಹೆಚ್ಚಾಗಿ ಒಡಾಡುವುದನ್ನು, ಕಾಲುವೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದನ್ನು ನಿಷೇಧಿಸಲಾಗಿದೆ. ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ. ಈ ಆದೇಶವು ಜುಲೈ. 27 ರವರೆಗೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ : ನಿಷೇದಾಜ್ಞೆ ಜಾರಿ
ಎಲ್ಲಾ ಲೇಖನಗಳು ಆಗಿದೆ ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ : ನಿಷೇದಾಜ್ಞೆ ಜಾರಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ : ನಿಷೇದಾಜ್ಞೆ ಜಾರಿ ಲಿಂಕ್ ವಿಳಾಸ https://dekalungi.blogspot.com/2017/07/blog-post_28.html
0 Response to "ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ : ನಿಷೇದಾಜ್ಞೆ ಜಾರಿ"
ಕಾಮೆಂಟ್ ಪೋಸ್ಟ್ ಮಾಡಿ