2nd Round news and photos 19-09-2017

2nd Round news and photos 19-09-2017 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು 2nd Round news and photos 19-09-2017, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : 2nd Round news and photos 19-09-2017
ಲಿಂಕ್ : 2nd Round news and photos 19-09-2017

ಓದಿ


2nd Round news and photos 19-09-2017

ಕಾಯಕ ಸಂಸ್ಕøತಿ ವಿಶ್ವಕರ್ಮ ಸಮುದಾಯದ ಒಳಿತಿಗೆ ಶ್ರಮಿಸಲಾಗುವುದು
ಕಲಬುರಗಿ,ಸೆ.17.(ಕ.ವಾ.)-ಕಾಯಕ ಸಂಸ್ಕøತಿಗೆ ಹೆಸರುವಾಸಿಯಾದ ವಿಶ್ವಕರ್ಮ ಜನಾಂಗದವರ ಶ್ರೇಯೋಭಿವೃದ್ಧಿಗೆ ವಿಶ್ವಕರ್ಮ ಅಭಿವೃದ್ಧಿ ನಿಗಮ ಸ್ಥಾಪಿಸಲಾಗಿದ್ದು, ಸಮಾಜದ ಬೇಡಿಕೆಯಂತೆ ನಿಗಮಕ್ಕೆ ಇನ್ನಷ್ಟು ಬಲ ನೀಡುವ ಮೂಲಕ ಈ ಜನಾಂಗದ ಒಳಿತಿಗೆ ಶ್ರಮಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದರು.
ಅವರು ರವಿವಾರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ವಿಶ್ವಕರ್ಮ ಪೂಜಾ ಮಹೋತ್ಸವ ಸಮನ್ವಯ ಸಮಿತಿ ಇವುಗಳ ಸಂಯುಕ್ತಾಶ್ರಯದಲ್ಲಿ ನಗರದ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಆಯೋಜಿಸಲಾದ ವಿಶ್ವಕರ್ಮ ಜಯಂತಿ ಕಾರ್ಯಕ್ರಮವನ್ನು ವಿಶ್ವಕರ್ಮರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಸರ್ಕಾರ ಎಲ್ಲ ಸಮಾಜದ ಮಹಾನ್ ಪುರುಷರನ್ನು ಗುರುತಿಸಿ ಅವರನ್ನು ಗೌರವಿಸುವುದರೊಂದಿಗೆ ಆಯಾ ಸಮಾಜದ ಸ್ವಾಭಿಮಾನ ಬದುಕಿಗೆ ನೆರವು ನೀಡಲು ಈ ರೀತಿಯ ಜಯಂತಿಯನ್ನು ಆಚರಿಸುತ್ತಿದೆ. ವಿಶ್ವಕರ್ಮ ಸಮುದಾಯವು ತನ್ನ ಕುಲ ಕಸುಬು ಕಲೆಯನ್ನು ಕಾಯಕವೇ ಕೈಲಾಸ ತತ್ವದಡಿ ನಿರ್ವಹಿಸುತ್ತ ಬಂದಿದಲ್ಲದೆ ತನ್ನ ಮುಂದಿನ ಪೀಳಿಗೆಗೂ ಪರಿಚಯಿಸುತ್ತಿರುವುದು ಸಂತೋಷದ ವಿಚಾರ. ಈ ಭಾಗದ ಖ್ಯಾತ ಕಲಾವಿದರಾಗಿದ್ದ ಶಿಲ್ಪಿ ಡಾ.ಎಸ್.ಎಂ.ಪಂಡಿತ್ ಅವರ ನೆನಪಿನಲ್ಲಿ ಇಲ್ಲಿನ ರಂಗಮಂದಿರಕ್ಕೆ ಅವರ ಹೆಸರಿಡಲಾಗಿದೆ. ಇದೀಗ ರಂಗಮಂದಿರ ಆವರಣದಲ್ಲಿ ಡಾ.ಎಸ್.ಎಂ.ಪಂಡಿತ ಅವರ ಪುತ್ಥಳಿ ನಿರ್ಮಾಣ ಮಾಡಬೇಕೆಂಬ ಬೇಡಿಕೆಯಿದ್ದು, ಈ ಕುರಿತು ಸಂಬಂಧಿಸಿದ ಅಧಿಕಾರಿಗಳು-ಸಚಿವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಆಗಮಿಸಿದ ವಿಶ್ವಕರ್ಮ ಮಹಾಸಭೆಯ ಅಧ್ಯಕ್ಷ ಅಶೋಕ ಪೋದ್ದಾರ ಹರಸೂರ ಮಾತನಾಡಿ ರಾಜ್ಯದಾದ್ಯಂತ ಸುಮಾರು 45 ಲಕ್ಷ ಜನಸಂಖ್ಯೆಯಿರುವ ವಿಶ್ವಕರ್ಮ ಸಮುದಾಯವು ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಅಭಿವೃದ್ಧಿಗೆ ಸರ್ಕಾರ ಸೂಕ್ತವಾಗಿ ಪರಿಗಣಿಸಬೇಕು. ಕುಲಕಸುಬನ್ನೇ ನಂಬಿರುವ ಸಮುದಾಯದ ಕುಶಲಕರ್ಮಿಗಳಿಗೆ ಹೆಚ್ಚಿನ ಸವಲತ್ತುಗಳನ್ನು ನೀಡುವುದಲ್ಲದೆ ವಿಶ್ವಕರ್ಮ ನಿಗಮಕ್ಕೆ ಒದಗಿಸುತ್ತಿರುವ ಅನುದಾನ ಹೆಚ್ಚಿಸಬೇಕು. ಸರ್ವಧರ್ಮ ಸಮನ್ವಯ ಕ್ಷೇತ್ರವಾದ ಸುರಪುರ ತಾಲೂಕಿನ ತಿಂಥಣಿ ಮೌನೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಪ್ರಾಧಿಕಾರ ರಚಿಸಿ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಬೇಕು ಎಂದರು.
ಆನೇಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠಾಧೀಶರು ಹಾಗೂ ಯಾದಗಿರಿ ಮತ್ತು ಕಲಬುರಗಿ ವಿಶ್ವಕರ್ಮ ಏಕದಂಡಿಗಿ ಮಠದ ಪೂಜ್ಯ ಗುರುನಾಥೇಂದ್ರ ಸರಸ್ವತಿ ಮಹಾಸ್ವಾಮಿಗಳು ಸಾನಿಧ್ಯವಹಿಸಿ ಆಶೀರ್ವಚನ ನೀಡಿದರು. ಕಲಬುರಗಿ ದಕ್ಷಿಣ ವಿಧಾನಸಭಾ ಶಾಸಕ ದತ್ತಾತ್ರೇಯ ಸಿ. ಪಾಟೀಲ್ ರೇವೂರ, ಕಲಬುರಗಿ  ವಿಶ್ವಕರ್ಮ ಪೂಜಾ ಮಹೋತ್ಸವ ಸಮನ್ವಯ ಸಮಿತಿ ಅಧ್ಯಕ್ಷ ಮೋಹನ ಎಸ್.ಪಂಡಿತ ಮಾತನಾಡಿದ್ದರು.
ಸಮಾರಂಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ್ ತೆಗ್ಗೆಳ್ಳಿ, ಶಿಷ್ಠಚಾರ ತಹಶೀಲ್ದಾರ ಪ್ರಕಾಶ್ ಚಿಂಚೋಳಿಕರ್ ಸೇರಿದಂತೆ ವಿಶ್ವಕರ್ಮ ಸಮಾಜದ ಗಣ್ಯರು, ಮುಖಂಡರು ಉಪಸ್ಥಿತರಿದ್ದರು. ಶಿವಾನಂದ ಅಣಜಗಿ ಸ್ವಾಗತಿಸಿ ನಿರೂಪಿಸಿದರು.
ಇದಕ್ಕೂ ಮುನ್ನ ಕಲಬುರಗಿ ನಗರದ ಸಂತ್ರಾಸವಾಡಿ ಕಾಳಿಕಾ ಮಂದಿರದಿಂದ ಸರಾಫ ಬಜಾರ, ಕಪಡಾ ಬಜಾರ, ಚೌಕ್ ಪೊಲೀಸ್ ಸ್ಟೇಶನ್, ಸುಪರ ಮಾರ್ಕೇಟ್, ಜಗತ್ ವೃತ್ತದಿಂದ ಡಾ. ಎಸ್.ಎಂ.ಪಂಡಿತ ರಂಗಮಂದಿರದವರೆಗೆ ವಿಶ್ವಕರ್ಮ ಭಾವಚಿತ್ರದ ಮತ್ತು ವಿವಿಧ ಜಾನಪದ ಕಲಾ ತಂಡಗಳ ಭವ್ಯ ಮೆರವಣಿಗೆ ಜರುಗಿತು.
ಹೈದ್ರಾಬಾದ ಕರ್ನಾಟಕ ಭಾಗದ ಅಭಿವೃದ್ಧಿಗೆ ಸರ್ಕಾರ ಬದ್ಧ
                                                 -ಡಾ.ಶರಣಪ್ರಕಾಶ್ ಪಾಟೀಲ್
ಕಲಬುರಗಿ,ಸೆ.17.(ಕ.ವಾ.)-ಹೈದ್ರಾಬಾದ್ ಕರ್ನಾಟಕ ವ್ಯಾಪ್ತಿಯ ಆರು ಜಿಲ್ಲೆಗಳ ಸರ್ವಾಂಗೀಣ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಶರಣಪ್ರಕಾಶ ಪಾಟೀಲ್ ಹೇಳಿದರು.
ಅವರು ರವಿವಾರ ಕಲಬುರಗಿಯ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲಾಡಳಿತ ಹಾಗೂ ಹೈದ್ರಾಬಾದ ಕರ್ನಾಟಕ ವಿಮೋಚನಾ ದಿನಾಚರಣೆ ಸಮಿತಿಯಿಂದ ಆಯೋಜಿಸಿದ 70ನೇ ಹೈದ್ರಾಬಾದ ಕರ್ನಾಟಕ ವಿಮೋಚನಾ ದಿನಾಚರಣೆಯ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಹೈದ್ರಾಬಾದ್ ಕರ್ನಾಟಕ ಪ್ರದೇಶದಲ್ಲಿ ಸಂವಿಧಾನದ 371(ಜೆ) ಜಾರಿಗೊಂಡ ಪ್ರಯುಕ್ತ ಈ ಭಾಗದ ಶೈಕ್ಷಣಿಕ, ಉದ್ಯೋಗ ಮತ್ತು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ವೇಗ ಬಂದಂತಾಗಿದೆ. ಕಳೆದ ಮೂರು ವರ್ಷಗಳಿಂದ ಮಂಡಳಿಗೆ 1000 ರೂ. ಕೋಟಿ ಅನುದಾನ ನೀಡಲಾಗಿತ್ತು. ಪ್ರಸಕ್ತ 2017-18ನೇ ಸಾಲಿಗೆ 1500 ಕೋಟಿ ರೂ. ಅನುದಾನ ನೀಡುವ ಮೂಲಕ ಸರ್ಕಾರ ಹಿಂದುಳಿದ ಈ ಭಾಗವನ್ನು ಅಭಿವೃದ್ಧಿಗೊಳಿಸುವಲ್ಲಿ ತನ್ನ ಬದ್ಧತೆ ಪ್ರದರ್ಶಿಸಿದೆ ಎಂದರು.
371ಜೆ ಸಂವಿಧಾನ ತಿದ್ದುಪಡಿ ಜಾರಿಗೆ ಅಗ್ರಹಿಸಿದ ಅನೇಕ ಜನಪರ ಹೋರಾಟಗಾರರ ಮೇಲೆ ದಾಖಲಿಸಿರುವ ಪ್ರಕರಣಗಳನ್ನು ವಾಪಸ್ ತೆಗೆದುಕೊಳ್ಳಲಾಗುವುದು ಹಾಗೂ ಹೈದ್ರಾಬಾದ ಕರ್ನಾಟಕದ ಇತಿಹಾಸವನ್ನು ಮುಂದಿನ ಪೀಳಿಗೆಗೆ ಪರಿಚಯಿಸಲು ಇತಿಹಾಸ ಸಮಿತಿಗೆ ಚುರುಕುಗೊಳಿಸಿ ಶೀಘ್ರ ಕಾರ್ಯಗತಗೊಳಿಸಲಾಗುವುದು. ಜಿಲ್ಲೆಯಲ್ಲಿ ಭ್ರಷ್ಟಾಚಾರ ಮುಕ್ತ ಮತ್ತು ಪಾರದರ್ಶಕ ಆಡಳಿತ ನೀಡುವುದೆ ಸರ್ಕಾರದ ಪ್ರಥಮಾದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಸಚಿವರು ಹೇಳಿದರು.
ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 371ಜೆ ಮೀಸಲಾತಿಯನ್ವಯ ಈಭಾಗದಲ್ಲಿರುವ ಸುಮಾರು 30 ಸಾವಿರಕ್ಕೂ ಹೆಚ್ಚು ಖಾಲಿಯಿರುವ ಹುದ್ದೆಗಳನ್ನು ನೇಮಕ ಮಾಡಲು ಅನುಮೋದನೆ ನೀಡಲಾಗಿದೆ. ಈಗಾಗಲೆ 20 ಸಾವಿರಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಲಾಗಿದ್ದು, ಮುಂಬರುವ ದಿನಗಳಲ್ಲಿ ಉಳಿದ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. 371ಜೆ ಜಾರಿಯ ಪರಿಣಾಮ ಪ್ರತಿ ವರ್ಷ ಸುಮಾರು 750 ವಿದ್ಯಾರ್ಥಿಗಳಿಗೆ ವೈದ್ಯಕೀಯ ಮತ್ತು 6000 ವಿದ್ಯಾರ್ಥಿಗಳಿಗೆ ಇಂಜಿನಿಯರ್ ಕೋರ್ಸ್ ವ್ಯಾಸಂಗ ಮಾಡಲು ಸಾಧ್ಯವಾಗಿದೆ ಎಂದರು.
ಹೈ.ಕ. ಭಾಗವು ಭವ್ಯ ಇತಿಹಾಸ, ಪರಂಪರೆ ಹೊಂದಿದ್ದು ತನ್ನದೆಯಾದ ಕೊಡುಗೆಯನ್ನು ನಾಡಿಗೆ ನೀಡಿದೆ. ಬಸವಾದಿ ಶರಣರ ಬೀಡಾಗಿರುವ ಈ ನೆಲವು ಸ್ವಾತಂತ್ರ್ಯ ಪೂರ್ವ ರಾಷ್ಟ್ರಕೂಟರ, ಬಹಮನಿ ಆಡಳಿತದ ರಾಜಧಾನಿಯಾಗಿತ್ತು. ಹಿಂದುಳಿದ ಈ ಭಾಗಕ್ಕೆ ವಿಶೇಷ ಸ್ಥಾನಮಾನ ನೀಡಬೇಕೆಂಬ ದಶಕಗಳ ಅನೇಕ ಹೋರಾಟಗಾರರ ಹೋರಾಟದ ಫಲವಾಗಿ 371ಜೆ ಅನುಷ್ಟಾನಕ್ಕೆ ಬಂದಿದೆ.  12ನೇ ಶತಮಾನದಲ್ಲಿ ಬಸವಣ್ಣನವರು ಮತ್ತು ಬಸವಾದಿ ಶರಣರು ವಚನÀ ಸಾಹಿತ್ಯ ನೀಡಿದ ಪುಣ್ಯ ಭೂಮಿ ಇದಾಗಿದೆ. ಕಾಯಕವೆ ಕೈಲಾಸ ತತ್ವವನ್ನು ಹೇಳಿಕೊಟ್ಟಿರುವ ಬಸವಾದಿ ಶರಣರ ಆದರ್ಶಗಳನ್ನು ಮೈಗೂಡಿಸಿಕೊಂಡು ಇಂದಿನ ಯುವ ಪೀಳಿಗೆಯೂ ವೈಚಾರಿಕತೆ, ಸತ್ಯ, ನ್ಯಾಯಪರ ಧೋರಣೆಯಿಂದ ನಡೆದುಕೊಳ್ಳುವ ಮೂಲಕ ಬೌದ್ಧಿಕ ಅಭಿವೃದ್ಧಿ ಹೊಂದುವುದಲ್ಲದೇ ನಾಡಿನ ಅಭಿವೃದ್ಧಿಗೆ ಶ್ರಮಿಸಬೇಕು. ಸರ್ವ ಜನಾಂಗಕ್ಕು ಸಿಗುವ ಈ ವಿಶೇಷ ಮೀಸಲಾತಿಯ ಸವಲತ್ತು ಪಡೆಯಲು ಎಲ್ಲಾ ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಸಚಿವರು ಹೇಳಿದರು.
ಇಲ್ಲಿನ ಜನರು ಹೃದ್ರೋಗದ ಸಮಸ್ಯೆಗೆ ತುತ್ತಾದರೆ ದೂರದ ರಾಜಧಾನಿ ಬೆಂಗಳೂರಿಗೆ ಚಿಕಿತ್ಸೆಗೆ ಹೋಗಬೇಕಾಗುವ ಕಾಲವಿತ್ತು. ಇದೀಗ ಜಯದೇವ ಹೃದ್ರೋಗ ಸಂಸ್ಥೆಯ ಶಾಖೆಯನ್ನು ಕಲಬುರಗಿಯಲ್ಲಿ ಸ್ಥಾಪನೆ ಮಾಡುವ ಮೂಲಕ ಜನರ ಬಳಿಗೆ ಆರೋಗ್ಯ ಸೇವೆಯನ್ನು ನೀಡಲಾಗಿದೆ. ಇದಲ್ಲದೇ ಸುಮಾರು 50 ಕೋಟಿ ರೂ. ವೆಚ್ಚದಲ್ಲಿ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯನ್ನು ಸಹ ಆರಂಭಿಸಿದ್ದು, ಸಾವಿರಾರು ಜನರಿಗೆ ಉಪಯೋಗವಾಗಿದೆ. ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ಅಪಘಾತದ ನಂತರ ಸೂಕ್ಷ್ಮ ಅವಧಿಯೊಳಗೆ ಚಿಕಿತ್ಸೆ ನೀಡುವ ಟ್ರಾಮಾ ಸೆಂಟರ್ ಸಹ ಡಿಸೆಂಬರ್ ಅಂತ್ಯದೊಳಗೆ ಕಲಬುರಗಿಯಲ್ಲಿ ಸ್ಥಾಪಿಸಲಾಗುವುದು. ಇದಲ್ಲದೇ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೂ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಸಚಿವರು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ  ಸುವರ್ಣಾ ಹಣಮಂತರಾಯ ಮಲಾಜಿ, ವಿಧಾನ ಪರಿಷತ್ ಶಾಸಕರುಗಳಾದ ಅಮರನಾಥ ಪಾಟೀಲ, ಇಕ್ಬಾಲ್ ಅಹ್ಮದ್ ಸರಡಗಿ, ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ಶರಣಕುಮಾರ್ ಮೋದಿ, ಕರ್ನಾಟಕ ತೊಗರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಭಾಗಣ್ಣಗೌಡ ಸಂಕನೂರ, ವಿಧಾನ ಪರಿಷತ್ತಿನ ಮಾಜಿ ಶಾಸಕ ಶಶೀಲ್ ಜಿ.ನಮೋಶಿ, ಪ್ರಾದೇಶಿಕ ಆಯುಕ್ತ ಹರ್ಷ ಗುಪ್ತಾ, ಈಶಾನ್ಯ ಪೊಲೀಸ್ ಮಹಾನಿರೀಕ್ಷಕ ಅಲೋಕ ಕುಮಾರ, ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಶಶಿಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾ ರಾಣಿ ಕೋರ್ಲಪಾಟಿ, ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ಸಹಾಯಕ ಆಯುಕ್ತ ರಾಚಪ್ಪಾ, ಲಕ್ಷ್ಮಣ ದಸ್ತಿ, ಪ್ರೊ. ವಸಂತ ಕುಷ್ಟಗಿ ಸೇರಿದಂತೆ ಅನೇಕÀ ಮುಖಂಡರು, ಜನಪ್ರತಿನಿಧಿಗಳು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಹೈ.ಕ.ವಿಮೋಚನಾ ದಿನಾಚರಣೆಯ ಸಮಾರಂಭದಲ್ಲಿ ಪರೇಡ್ ಕಮಾಂಡರ್ ಆರ್.ಪಿ.ಐ. ಚನ್ನಬಸವ ಅವರ ನೇತೃತ್ವದಲ್ಲಿ ನಡೆದ ಪರೇಡಿನಲ್ಲಿ ಡಿ.ಎ.ಆರ್., ಕೆ.ಎಸ್.ಆರ್.ಪಿ., ಸಿವಿಲ್ ಪೊಲೀಸ್, ಮಹಿಳಾ ಪೊಲೀಸ್, ಗೃಹರಕ್ಷಕ ದಳ, ಅಗ್ನಿಶಾಮಕ ದಳ, ಅರಣ್ಯ ಮತ್ತು ಅಬಕಾರಿ ಇಲಾಖೆ, ಎನ್.ಸಿ.ಸಿ., ಭಾರತ ಸೇವಾ ದಳ, ಸ್ಕೌಟ್ಸ್ ಮತ್ತು ಗೈಡ್ಸ್, ಅಂಧ ಬಾಲಕರ ವಸತಿ ಶಾಲೆ, ಕೆ.ಸಿ.ಇ.ಡಿ.ಟಿ. ಬಾಲಕೀಯರ ಪ್ರೌಢ ಶಾಲಾ ಮಕ್ಕಳು, ಪೊಲೀಸ್ ವಾದ್ಯ ವೃಂದ ಸೇರಿದಂತೆ ಒಟ್ಟು 15 ತುಕಡಿಗಳಿಂದ ಸಚಿವರು ಪರೇಡ್ ವಂದನೆ ಸ್ವೀಕರಿಸಿದರು. ಸಮಾರಂಭದ ಅಂಗವಾಗಿ ಸ್ವಾತಂತ್ರ್ಯ ಹೋರಾಟಗಾರರಾದ ಬಾಬುರಾವ ದೇಶಮಾನೆ ಹಾಗೂ ಬುಡ್ಡಪ್ಪ ಅಂಬಾದಾಸ ವಿಸ್ಕಿನ್ ಅವರನ್ನು ಸನ್ಮಾನಿಸಲಾಯಿತು. ನಂತರ ವಿವಿಧ ಶಾಲಾ ಮಕ್ಕಳಿಂದ ಆಕರ್ಷಕ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಿದವು.
ಇದಕ್ಕೂ ಮುನ್ನ ಸಚಿವರು ಕಲಬುರಗಿ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿರುವ ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ
ಕಲಬುರಗಿ,ಸೆ.17.(ಕ.ವಾ.)-ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದಿಂದ 2017-18ನೇ ಸಾಲಿಗೆ ಲಂಬಾಣಿ ಜನಾಂಗದ ನಿರುದ್ಯೋಗಿ ಯುವಕ/ಯುವತಿಯರಿಗೆ ಉದ್ಯೋಗ ಪಡೆಯಲು ಹಾಗೂ ಸ್ವಯಂ ಉದ್ಯೋಗ ಕೈಗೊಳ್ಳಲು ಕೆಳಕಂಡ ವಿವಿಧ ಕೋರ್ಸುಗಳಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುತ್ತಿದೆ. ಇದಕ್ಕಾಗಿ ಕಲಬುರಗಿ ಜಿಲ್ಲೆಯ ಅರ್ಹ ಲಂಬಾಣಿ ಯುವಕ/ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ನಿಗಮದ ಕಲಬುರಗಿ ವಲಯ ಕಚೇರಿಯ ಅಭಿವೃದ್ಧಿ ಅಧಿಕಾರಿಗಳು ತಿಳಿಸಿದ್ದಾರೆ.
  ಗಣಕಯಂತ್ರ ಮತ್ತು ಡಿ.ಟಿ.ಪಿ. ತರಬೇತಿ, ಗಣಕಯಂತ್ರ ಮತ್ತು ಟ್ಯಾಲಿ ತರಬೇತಿ, ಲಘು ವಾಹನ ತರಬೇತಿ,  ಸಭೆ-ಸಮಾರಂಭದಲ್ಲಿ ಪುಷ್ಪ ಅಲಂಕಾರ ತರಬೇತಿ, ಹೌಸ್ ಕೀಪಿಂಗ್ ತರಬೇತಿ,  ಮಿಲಿಟರಿಗೆ ಸೇರಲು ದೈಹಿಕ ಮತ್ತು ಮಾನಸಿಕ ಸಾಮಥ್ರ್ಯ ತರಬೇತಿ, ಸ್ಪರ್ಧಾತ್ಮಕ ವೃತ್ತಿ ವಿಕಸನ ಉನ್ನತೀಕರಣ ತರಬೇತಿ, ಟ್ರ್ಯಾಕ್ಟರ್/ಮೋಟಾರ ಸೈಕಲ್ ದುರಸ್ತಿ ತರಬೇತಿ, ಗೃಹಪಯೋಗಿ ಮತ್ತು ವಿದ್ಯುತ್ ಉಪಕರಣಗಳ ದುರಸ್ತಿ ತರಬೇತಿ,  ಎಲೆಕ್ಟ್ರಿಶಿಯನ್ ತರಬೇತಿ, ಲಂಬಾಣಿ ಕಸೂತಿ ಕಲೆ ತರಬೇತಿ, ಮೋಟಾರ್ ರಿವೈಡಿಂಗ್ ತರಬೇತಿ, ಎಲೆಕ್ಟ್ರಾನಿಕ್ಸ್ (ಮೊಬೈಲ್, ಲ್ಯಾಪ್‍ಟಾಪ್ ದುರಸ್ತಿ) ತರಬೇತಿ,  ಕಾರ್ಯಕ್ರಮ ಸಂಯೋಜನಾ ನಿರ್ವಹಣಾ ತರಬೇತಿ ಹಾಗೂ  ಬ್ಯೂಟಿ ಪಾರ್ಲರ್ ತರಬೇತಿಗಳನ್ನು ನೀಡಲಾಗುತ್ತದೆ. ಈ ತರಬೇತಿಯನ್ನು ರಾಜ್ಯ ಮಟ್ಟ, ತಾಲೂಕು ಮಟ್ಟ ಹಾಗೂ ಹೋಬಳಿ ಮಟ್ಟದಲ್ಲಿ ನೀಡಲಾಗುತ್ತದೆ.
ಲಂಬಾಣಿ ಯುವಕ/ ಯುವತಿಯರು ಮೇಲ್ಕಂಡ ತರಬೇತಿ ಪಡೆಯಲು ವಯೋಮಿತಿ 18 ರಿಂದ 40 ವರ್ಷದೊಳಗಿರಬೇಕು. ಭರ್ತಿ ಮಾಡಿದ ಅರ್ಜಿಗಳೊಂದಿಗೆ ಅವಶ್ಯಕ ದಾಖಲೆಗಳನ್ನು ಲಗತ್ತಿಸಿ ಸೆಪ್ಟೆಂಬರ್ 22ರೊಳಗಾಗಿ ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ನಿಯಮಿತ, ನಂ. 6, ಜಿಪಿಆರ್ ಟವರ್, 1ನೇ ಮಹಡಿ, ಪಾರ್ಕ್ ರಸ್ತೆ, ಟಸ್ಕರ್ ಟೌನ್, ಶಿವಾಜಿನಗರ ಬೆಂಗಳೂರು ವಿಳಾಸಕ್ಕೆ ಅಥವಾ ಇಮೇಲ್ ಞಣಜಛಿಟiಣ@gmಚಿiಟ.ಛಿom ವಿಳಾಸಕ್ಕೆ ಸಲ್ಲಿಸಬೇಕು.
ಅರ್ಹ ಯುವಕ/ಯುವತಿಯರು ವಿದ್ಯಾರ್ಹತೆ, ತರಬೇತಿ ಅವಧಿ, ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಅಭಿವೃದ್ಧಿ ಅಧಿಕಾರಿಗಳು, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ನಿಯಮಿತ ಪ್ಲಾಟ್ ನಂ. 90, ಬಂಜಾರಾ ರೋಡ, ಎನ್.ಜಿ.ಓ. ಕಾಲೋನಿ, ಹೊಸ ಜೇವರ್ಗಿ ರಸ್ತೆ ಕಲಬುರಗಿ ವಲಯ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ 08472-257045ನ್ನು ಅಥವಾ ವ್ಯವಸ್ಥಾಪಕ ನಿರ್ದೇಶಕರು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ನಿಯಮಿತ ಕಚೇರಿ ಬೆಂಗಳೂರು ದೂರವಾಣಿ ಸಂಖ್ಯೆ 080-22865561, 22865562, 22865563ಗಳನ್ನು ಸಂಪರ್ಕಿಸಲು ಕೋರಲಾಗಿದೆ.
ಮಂಜುಳಾಗೆÉ ಪಿಹೆಚ್.ಡಿ. ಪದವಿ
ಕಲಬುರಗಿ,ಸೆ.17.(ಕ.ವಾ.)-ಇತಿಹಾಸ ವಿಷಯದಲ್ಲಿ “ಹೈದ್ರಾಬಾದ್ ಕರ್ನಾಟಕಕ್ಕೆ ನಿಜಾಮರ ಕೊಡುಗೆಗಳು ಕುರಿತು ಒಂದು ಐತಿಹಾಸಿಕ ಅಧ್ಯಯನ (ಕ್ರಿ.ಶ. 1124-1908)” ಎಂಬ ವಿಷಯದ ಪ್ರಬಂಧ ಮಂಡನೆಗೆ ಗುಲಬರ್ಗಾ ವಿಶ್ವವಿದ್ಯಾಲಯವು ಮಂಜುಳಾ ಭೀಮರಾಯ ಅವರಿಗೆ ಪಿಹೆಚ್.ಡಿ. ಪದವಿ ಪ್ರಕಟಿಸಿದೆ.
ಗುಲಬರ್ಗಾ ವಿಶ್ವವಿದ್ಯಾಲಯದ ಇತಿಹಾಸ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಡಾ. ಇಂಧುಮತಿ ಪಿ. ಪಾಟೀಲ ಅವರ ಮಾರ್ಗದರ್ಶನದಲ್ಲಿ  ಮಂಜುಳಾ ಅವರು ಪ್ರಬಂಧ ಮಂಡಿಸಿದ್ದರು.
ಪೀಠೋಪಕರಣ ಸರಬರಾಜಿಗಾಗಿ ಅರ್ಜಿ ಆಹ್ವಾನ
ಕಲಬುರಗಿ,ಸೆ.17.(ಕ.ವಾ.)-ಕಲಬುರಗಿಯ ಜಿಲ್ಲೆಯ ಅಫಜಲಪುರ ಹಾಗೂ ಜೇವರ್ಗಿ ಜೆ.ಎಂ.ಎಫ್.ಸಿ. ಹಿರಿಯ ಸಿವಿಲ್ ನ್ಯಾಯಾಧೀಶರ ಕಚೇರಿಗಳ ಉಪಯೋಗಕ್ಕಾಗಿ ವಿವಿಧ 14 ಮಾದರಿಯ ಫೀಠೋಪಕರಣಗಳನ್ನು ಸರಬರಾಜು ಮಾಡಲು ಕೆ.ಟಿ.ಪಿ.ಪಿ. ಕಾಯ್ದೆ 1999 ನಿಯಮ 2000ರನ್ವಯ ಅರ್ಹ ತಯಾರಕರು, ಡೀಲರ್ ಮತ್ತು ಸರಬರಾಜುದಾರರಿಂದ ಟೆಂಡರ್ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿಯ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ತಿಳಿಸಿದ್ದಾರೆ.
ಸರಬರಾಜು ಮಾಡುವ ಪೀಠೋಪಕರಣಗಳ ವಿವರ ಇಂತಿದೆ. ಸಾಗುವಾನಿ ಹಾರ್ಸ್ ಶೋ ಟೇಬಲ್, ಡಯಾಸ್ ಟೇಬಲ್, ಸೈಡ್ ರ್ಯಾಕ್,  ಬೆಂಚ್ ವಿಥ್ ಬ್ಯಾಕ್, ವುಡನ್ ಟೇಬಲ್ ದೊಡ್ಡ ಸೈಜ್, ವುಡನ್ ಚಿಕ್ಕ  ಟೇಬಲ್, ವುಡನ್ ಈಜಿ ಚೇರ್, ವುಡನ್ ಚೇರ್, ಸಾಗುವಾನಿ ಪಾರ್ಟೇಶನ್ ಸ್ಕ್ರೀನ್ ವಿಥ್ ಕ್ಲಾಥ್, ಸ್ಟೂಲ್, ಸ್ಟೀಲ್ ಅಲಮಾರಿ, ರಿವಾಲ್ವಿಂಗ್ ಕುಷನ್ ಚೇರ್, ಕಂಪ್ಯೂಟರ್ ಟೇಬಲ್, ಸ್ಟೀಲ್ ಸ್ಲೋಟೆಡ್ ಆ್ಯಂಗಲ್ ರ್ಯಾಕ್ ದೊಡ್ಡದ್ದು.
ಟೆಂಡರ್ ಅರ್ಜಿಗಳನ್ನು ಕಲಬುರಗಿ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯದ ಕಚೇರಿಯಿಂದ ಕಾರ್ಯದಿನದ ಬೆಳಿಗ್ಗೆ 10.30 ರಿಂದ ಸಾಯಂಕಾಲ 5 ಗಂಟೆಯವರೆಗೆ ಪಡೆದು ಭರ್ತಿ ಮಾಡಿ ಅದರೊಂದಿಗೆ ಇ.ಎಂ.ಡಿ 20,000 ರೂ. ಡಿ.ಡಿ./ಎಫ್‍ಡಿಆರ್ ಯನ್ನು ಲಗತ್ತಿಸಿದ ಭದ್ರಪಡಿಸಿದ ಅರ್ಜಿಯ  ಎರಡು ಲಕೋಟೆಗಳನ್ನು ಅಕ್ಟೋಬರ್ 12ರ ಸಾಯಂಕಾಲ 4ಗಂಟೆಯೊಳಗಾಗಿ ಕಲಬುರಗಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಕಚೇರಿಗೆ ಸಲ್ಲಿಸಬೇಕು. ಲಕೋಟೆ ಒಂದರಲ್ಲಿ ಡಿ.ಡಿ./ಎಫ್‍ಡಿಆರ್ ಮತ್ತು ಲಕೋಟೆ ಎರಡರಲ್ಲಿ ಟೆಂಡರ್ ಸಂಬಂಧಪಟ್ಟ ಅರ್ಜಿ, ಪ್ರಮಾಣ ಪತ್ರಗಳು, ಜಿ.ಎಸ್.ಟಿ. ನೋಂದಣಿ ಪತ್ರ ಸೇರಿದಂತೆ ಅಗತ್ಯ ದಾಖಲಾತಿಗಳು ಇರಬೇಕು.
ಅರ್ಜಿದಾರರ ಸಮಕ್ಷಮದಲ್ಲಿ ಭದ್ರಪಡಿಸಿದ ಅರ್ಜಿ ಲಕೋಟೆಗಳನ್ನು ಅಕ್ಟೋಬರ್ 13ರಂದು ಸಂಜೆ 5 ಗಂಟೆಗೆ ತೆರೆಯಲಾಗುವುದು.  ಪೀಠೋಪಕರಣಗಳ ವಿವರ, ಷರತ್ತು, ನಿಬಂಧನೆ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿಯ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಕಚೇರಿಯನ್ನು ಸಂಪರ್ಕಿಸಲು ಕೋರಿದೆ.
ಕಲಬುರಗಿ ಪುರುಷರ ಫುಟಬಾಲ ತಂಡ ರಾಜ್ಯಮಟ್ಟಕ್ಕೆ ಆಯ್ಕೆ
ಕಲಬುರಗಿ,ಸೆ.17.(ಕ.ವಾ.)-ಕಲಬುರಗಿ ವಿಭಾಗ ಮಟ್ಟದ 2017-18ನೇ ಸಾಲಿನ ದಸರಾ ಕ್ರೀಡಾ ಕೂಟದ ಅಂಗವಾಗಿ ಬಳ್ಳಾರಿಯಲ್ಲಿ ಸೆಪ್ಟೆಂಬರ್ 16ರಂದು ನಡೆದ ಫುಟಬಾಲ್ ಸ್ಪರ್ಧೆಯಲ್ಲಿ ಕಲಬುರಗಿ ಪುರುಷರ ತಂಡವು ಬಳ್ಳಾರಿ ತಂಡದ ವಿರುದ್ಧ 1-0 ಗೋಲಗಳ ಮುನ್ನಡೆಯಲ್ಲಿ ವಿಜೇತರಾಗುವ ಮೂಲಕ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದೆ. ಕಲಬುರಗಿ ತಂಡದ ಈ ಸಾಧನೆಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಲಬುರಗಿ ಸಹಾಯಕ ನಿರ್ದೇಶಕ ಆರ್.ಜಿ.ಬಡಿಗೇರ್ ಹಾಗೂ ಸಿಬ್ಬಂದಿಗಳು ಹರ್ಷ ವ್ಯಕ್ತಪಡಿಸಿರುತ್ತಾರೆ.
ಸೆ.19ಕ್ಕೆ ರಂಗ ಭೀಷ್ಮ ಬಿ.ವಿ.ಕಾರಂತರ ಜನ್ಮಶತಮಾನೋತ್ಸವ
ಕಲಬುರಗಿ,ಸೆ.17.(ಕ.ವಾ.)-ಕಲಬುರಗಿ ರಂಗಾಯಣದಿಂದ ಸೆಪ್ಟೆಂಬರ್ 19 ರಂದು ರಂಗಭೀಷ್ಮ ಬಿ.ವಿ. ಕಾರಂತರ ಅವರ ಜನ್ಮಶತಮಾನೋತ್ಸವ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದು ರಂಗಾಯಣದ ನಿರ್ದೇಶಕ ಮಹೇಶ್ ವಿ.ಪಾಟೀಲ್ ತಿಳಿಸಿದ್ದಾರೆ.
ಅಂದು ಸಾಯಂಕಾಲ 4 ಗಂಟೆಗೆ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಶತಮಾನೋತ್ಸವ ದಿನಾಚರಣೆಯ ಉದ್ಘಾಟನಾ ಸಮಾರಂಭ ನಡೆಯಲಿದೆ. ನಂತರ ಬಿ.ವಿ. ಕಾರಂತರವರ ಕುರಿತು ರಂಗ ಗೀತೆಗಳ ಕಾರ್ಯಕ್ರಮ, ಸಾಕ್ಷ್ಯಚಿತ್ರ ಪ್ರದರ್ಶನ ಹಾಗೂ ಸಾಯಂಕಾಲ 6.30 ಗಂಟೆಗೆ ರಂಗಾಯಣದ ಕಲಾವಿದರಿಂದ ಗುರು ನಮನ ನಾಟಕ ಪ್ರದರ್ಶನಗೊಳ್ಳಲಿದೆ.
ಸೆಪ್ಟೆಂಬರ್ 20ರಂದು ಬೆಳಿಗ್ಗೆ 10 ರಿಂದ ಸಾಯಂಕಾಲ 6 ಗಂಟೆಯವರೆಗೆ ರಂಗಾಯಣದ ಆವರಣದಲ್ಲಿರುವ ರಂಗಾಯಣದ ನಟರಂಗದಲ್ಲಿ ರಂಗಭೀಷ್ಮ ಬಿ.ವಿ. ಕಾರಂತರ ಶಿಷ್ಯರಾದ ಚಂದ್ರಕಾಂತ ಆಚಾರ್ಯ ಅವರಿಂದ ಸಂಗೀತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶತಮಾನೋತ್ಸವ ಹಾಗೂ ಸಂಗೀತ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ಸಂಗೀತಗಾರರು ಮತ್ತು ನಾಟಕದ ಹಿನ್ನಲೆ ಗಾಯಕರು ಭಾಗವಹಿಸಲು ಕೋರಲಾಗಿದೆ.







ಹೀಗಾಗಿ ಲೇಖನಗಳು 2nd Round news and photos 19-09-2017

ಎಲ್ಲಾ ಲೇಖನಗಳು ಆಗಿದೆ 2nd Round news and photos 19-09-2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ 2nd Round news and photos 19-09-2017 ಲಿಂಕ್ ವಿಳಾಸ https://dekalungi.blogspot.com/2017/09/2nd-round-news-and-photos-19-09-2017.html

Subscribe to receive free email updates:

0 Response to "2nd Round news and photos 19-09-2017"

ಕಾಮೆಂಟ್‌‌ ಪೋಸ್ಟ್‌ ಮಾಡಿ