ಶೀರ್ಷಿಕೆ : ಜೀವ ರಕ್ಷಕ ಪ್ರಶಸ್ತಿ : ಅರ್ಜಿ ಆಹ್ವಾನ
ಲಿಂಕ್ : ಜೀವ ರಕ್ಷಕ ಪ್ರಶಸ್ತಿ : ಅರ್ಜಿ ಆಹ್ವಾನ
ಜೀವ ರಕ್ಷಕ ಪ್ರಶಸ್ತಿ : ಅರ್ಜಿ ಆಹ್ವಾನ
ಕೊಪ್ಪಳ ಡಿ. 15 (ಕರ್ನಾಟಕ ವಾರ್ತೆ): ಕೊಪ್ಪಳ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಅಪಘಾತದ ಸಂದರ್ಭದಲ್ಲಿ ಗಾಯಾಳುವಿಗೆ ನೆರವು ನೀಡಿದವರಿಗೆ ಮುಖ್ಯಮಂತ್ರಿಗಳ ಸಾಂತ್ವನ ಹರೀಶ ಯೋಜನೆಯಡಿ ಜೀವ ರಕ್ಷಕ ಪ್ರಶಸ್ತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಸರ್ಕಾರವು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊಪ್ಪಳ ಹಾಗೂ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮುಖಾಂತರ ಅಪಘಾತದ ಸಂದರ್ಭದಲ್ಲಿ ಗಾಯಾಳುವಿಗೆ ನೆರವು ನೀಡಿದವರಿಗೆ “ಜೀವ ರಕ್ಷಕ ಪ್ರಶಸ್ತಿ” ನೀಡಲಾಗುತ್ತಿದೆ. ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಮುಖ್ಯಮಂತ್ರಿಗಳ ಸಾಂತ್ವನ ಹರೀಶ ಯೋಜನೆಯಡಿ ರಾಜ್ಯದಲ್ಲಿ ಸಂಭವಿಸುವ ರಸ್ತೆ ಅಪಘಾತದ ಗಾಯಾಳುವಿಗೆ 48 ಗಂಟೆಗಳವರೆಗೆ ಗರಿಷ್ಠ 25,000/- ರೂ. ಗಳವರೆಗೆ ಎಲ್ಲಾ ಸರ್ಕಾರಿ ಹಾಗೂ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಒದಗಿಸಲಾಗುತ್ತಿದೆ. ಅಪಘಾತದಂತಹ ಸಂಕಷ್ಟದ ಸಂದರ್ಭದಲ್ಲಿ ತಕ್ಷಣದ ಚಿಕಿತ್ಸೆ ಹಾಗೂ ಜೀವ ಉಳಿಸಲು ನೆರವಾಗುವವರಿಗೆ ಜೀವ ರಕ್ಷಕ ಪ್ರಶಸ್ತಿ ನೀಡುವ ಮೂಲಕ ಅವರನ್ನು ಗೌರವಿಸಲಾಗುವುದು.
ಅರ್ಜಿ ಸಲ್ಲಿಸಲು ಡಿ. 31 ಕೊನೆಯ ದಿನವಾಗಿದ್ದು, ಅರ್ಜಿಗಳಿಗಾಗಿ ಜಿಲ್ಲಾ ಸಂಯೋಜಕರು ಹಾಗೂ ಆರೋಗ್ಯ ಮಿತ್ರರು, ಜಿಲ್ಲಾ ಆಸ್ಪತ್ರೆ ಹಾಗೂ ತಾಲೂಕ ಆಸ್ಪತ್ರೆಗಳಲ್ಲಿ ಸಂಪರ್ಕಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ ಕೊಪ್ಪಳ – 7760999114, 7619649168, 7760999098, ಗಂಗಾವತಿ – 7760999100, ಯಲಬುರ್ಗಾ – 7760999103, ಹಾಗೂ ಕುಷ್ಟಗಿ – 7760999095, 7760999105 ಕ್ಕೆ ಸಂಪರ್ಕಿಸಬಹುದು ಎಂದು ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ ಹೆಚ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಜೀವ ರಕ್ಷಕ ಪ್ರಶಸ್ತಿ : ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಜೀವ ರಕ್ಷಕ ಪ್ರಶಸ್ತಿ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಜೀವ ರಕ್ಷಕ ಪ್ರಶಸ್ತಿ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/12/blog-post_77.html
0 Response to "ಜೀವ ರಕ್ಷಕ ಪ್ರಶಸ್ತಿ : ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ