ಶೀರ್ಷಿಕೆ : ತುಂಗಭದ್ರ ನೀರಿನ ಸಮರ್ಪಕ ನಿರ್ವಹಣೆ : ಪೊಲೀಸ್ ಸಿಬ್ಬಂದಿಗಳ ನೇಮಕ
ಲಿಂಕ್ : ತುಂಗಭದ್ರ ನೀರಿನ ಸಮರ್ಪಕ ನಿರ್ವಹಣೆ : ಪೊಲೀಸ್ ಸಿಬ್ಬಂದಿಗಳ ನೇಮಕ
ತುಂಗಭದ್ರ ನೀರಿನ ಸಮರ್ಪಕ ನಿರ್ವಹಣೆ : ಪೊಲೀಸ್ ಸಿಬ್ಬಂದಿಗಳ ನೇಮಕ
ಕೊಪ್ಪಳ ಡಿ. 21 (ಕರ್ನಾಟಕ ವಾರ್ತೆ): ತಂಗಭದ್ರಾ ಜಲಾಶದ ಎಡದಂಡೆ ನಾಲೆಯಲ್ಲಿ ಕುಡಿಯುವ ನೀರನ್ನು ಸಮರ್ಪಕವಾಗಿ ನಿರ್ವಹಿಸಲು ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ತಿಳಿಸಿದ್ದಾರೆ.
ಅಭಿಯಂತರು, ಕ.ನೀ.ನಿ.ನಿ ನೀರಾವರಿ ಕೇಂದ್ರ ವಲಯ ಮುನಿರಾಬಾದ್ ಇವರು ರಾಯಚೂರು ಜಿಲ್ಲೆಗೆ ತುಂಗಭದ್ರ ಜಲಾಶಯದಿಂದ ಜನ/ ಜಾನುವಾರುಗಳಿಗೆ ಕುಡಿಯುವ ಸಲುವಾಗಿ ತುಂಗಭದ್ರ ಎಡದಂಡೆ ನಾಲೆಗೆ ಡಿ. 16 ರಿಂದ 2018 ರ ಫೆಬ್ರವರಿ. 28 ರವರೆಗೆ ಸುಮಾರು 2000 ಕ್ಯೂಸೆಕ್ಸ್ ನೀರು ಹರಿಸಬೇಕಾಗಿರುವ ಹಿನ್ನಲೆಯಲ್ಲಿ ನೀರನ್ನು ರೈತರು ಅನಧಿಕೃತವಾಗಿ ಬಳಸದಂತೆ ಮತ್ತು ವಿತರಣಾ ಕಾಲುವೆಗಳ ಗೇಟಗಳನ್ನು ಆಪರೇಟ ಮಾಡದಂತೆ ಕಾರ್ಯ ನಿರ್ವಹಿಸಲು, ಅಗತ್ಯ ಪೊಲೀಸ್ ಬಂದೋಬಸ್ತ್ಗಾಗಿ ಪೊಲೀಸ್ ಸಿಬ್ಬಂದಿಯನ್ನು ತಂಗಭದ್ರಾ ಎಡದಂಡೆ ನಾಲೆಯ 0 ಮೈಲು ನಿಂದ 47 ರ ಮೈಲಿಗೆ ನಿಯೋಜಿಸಲಾಗಿದೆ. ತುಂಗಭದ್ರಾ ವಿತರಣಾ ಉಪ ಕಾಲುವೆ ಸಂಖ್ಯೆಗಳಿಗೆ ಅನುಗುಣವಾಗಿ ಆಯಾ ಪೊಲೀಸ್ ಠಾಣಾ ವ್ಯಾಪ್ತಿ, ಪೊಲೀಸ್ ಸಿಬ್ಬಂದಿಗಳು ಹಾಗೂ ನೀರಾವರಿ ಅಧಿಕಾರಿಗಳ ಕಾರ್ಯ ವ್ಯಾಪ್ತಿಯನ್ನು ನಿಗದಿಪಡಿಸಲಾಗಿದ್ದು, ಸಂಬಂಧಪಟ್ಟ ಪೊಲೀಸ್ ಠಾಣೆ ಅಧಿಕಾರಿ, ಸಿಬ್ಬಂದಿಗಳು ಹಾಗೂ ನೀರಾವರಿ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ನೀರಿನ ನಿರ್ವಹಣೆಯ ಸಂಪೂರ್ಣ ಹೊಣೆಗಾರಿಕೆ ವಹಿಸಿಕೊಂಡು, ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ತುಂಗಭದ್ರ ನೀರಿನ ಸಮರ್ಪಕ ನಿರ್ವಹಣೆ : ಪೊಲೀಸ್ ಸಿಬ್ಬಂದಿಗಳ ನೇಮಕ
ಎಲ್ಲಾ ಲೇಖನಗಳು ಆಗಿದೆ ತುಂಗಭದ್ರ ನೀರಿನ ಸಮರ್ಪಕ ನಿರ್ವಹಣೆ : ಪೊಲೀಸ್ ಸಿಬ್ಬಂದಿಗಳ ನೇಮಕ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ತುಂಗಭದ್ರ ನೀರಿನ ಸಮರ್ಪಕ ನಿರ್ವಹಣೆ : ಪೊಲೀಸ್ ಸಿಬ್ಬಂದಿಗಳ ನೇಮಕ ಲಿಂಕ್ ವಿಳಾಸ https://dekalungi.blogspot.com/2017/12/blog-post_93.html
0 Response to "ತುಂಗಭದ್ರ ನೀರಿನ ಸಮರ್ಪಕ ನಿರ್ವಹಣೆ : ಪೊಲೀಸ್ ಸಿಬ್ಬಂದಿಗಳ ನೇಮಕ"
ಕಾಮೆಂಟ್ ಪೋಸ್ಟ್ ಮಾಡಿ