ಶೀರ್ಷಿಕೆ : ತುಂಗಭದ್ರ ಎಡದಂಡೆ ಮುಖ್ಯ ಕಾಲುವೆ : ನಿಷೇಧಾಜ್ಞೆ ಜಾರಿ
ಲಿಂಕ್ : ತುಂಗಭದ್ರ ಎಡದಂಡೆ ಮುಖ್ಯ ಕಾಲುವೆ : ನಿಷೇಧಾಜ್ಞೆ ಜಾರಿ
ತುಂಗಭದ್ರ ಎಡದಂಡೆ ಮುಖ್ಯ ಕಾಲುವೆ : ನಿಷೇಧಾಜ್ಞೆ ಜಾರಿ
ಕೊಪ್ಪಳ ಮೇ. 02 (ಕರ್ನಾಟಕ ವಾರ್ತೆ): ತುಂಗಭದ್ರ ಎಡದಂಡೆ ಮುಖ್ಯ ಕಾಲುವೆಯ ಮೈಲ್ 0 ರಿಂದ 47 ರವರೆಗೆ ಸಿ.ಆರ್.ಪಿ.ಸಿ 1973 ಕಲಂ 144 ರಡಿ ಇದೇ ಮೇ. 12 ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಕೊಪ್ಪಳ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಆದೇಶ ಹೊರಡಿಸಿದ್ದಾರೆ.
ಪ್ರಾದೇಶಿಕ ಆಯುಕ್ತರು, ಕಲಬುರಗಿ ವಿಭಾಗ, ಕಲಬುರಗಿ ಇವರ ಸೂಚನೆಯಂತೆ ರಾಯಚೂರು ಜಿಲ್ಲೆಗೆ, ತುಂಗಭದ್ರಾ ಜಲಾಶಯದಿಂದ ಜನ/ ಜಾನುವಾರುಗಳಿಗೆ ಕುಡಿಯುವ ಸಲುವಾಗಿ ತುಂಗಭದ್ರ ಎಡದಂಡೆ ನಾಲೆಗೆ ನೀರು ಹರಿಸಬೇಕಾಗಿರುವ ಹಿನ್ನಲೆಯಲ್ಲಿ ನೀರು ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸಲು ಮೇ. 01 ರಿಂದ 12 ರವರೆಗೆ ತುಂಗಭದ್ರ ಎಡದಂಡೆ ಮುಖ್ಯ ಕಾಲುವೆ ಮೈಲು 0 ರಿಂದ 47 ರವರೆಗೆ ಮುಖ್ಯ ಕಾಲುವೆಯ ಎಡ ಮತ್ತು ಬಲದಂಡೆ ಯಿಂದ 100 ಮೀಟರ್ ಅಂತರದ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.
ಇದರನ್ವಯ ತುಂಗಭದ್ರ ಎಡದಂಡೆ ಕಾಲುವೆಯ ನಿಷೇದಾಜ್ಞೆ ಜಾರಿಗೊಳಿಸಿದ ಪ್ರದೇಶದ 100 ಮೀಟರ ಅಂತರದ ವ್ಯಾಪ್ತಿಯಲ್ಲಿ ದಡದ ಸುತ್ತಮುತ್ತಲಿನ ಪ್ರದೇಶದಲ್ಲಿ ಸಾರ್ವಜನಿಕರು ಎರಡು ಜನಕ್ಕಿಂತ ಹೆಚ್ಚಾಗಿ ಒಡಾಡುವುದನ್ನು, ಕಾಲುವೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದನ್ನು ನಿಷೇಧಿಸಲಾಗಿದೆ. ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ. ಈ ಆದೇಶವು ಮೇ. 12 ರವರೆಗೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ತುಂಗಭದ್ರ ಎಡದಂಡೆ ಮುಖ್ಯ ಕಾಲುವೆ : ನಿಷೇಧಾಜ್ಞೆ ಜಾರಿ
ಎಲ್ಲಾ ಲೇಖನಗಳು ಆಗಿದೆ ತುಂಗಭದ್ರ ಎಡದಂಡೆ ಮುಖ್ಯ ಕಾಲುವೆ : ನಿಷೇಧಾಜ್ಞೆ ಜಾರಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ತುಂಗಭದ್ರ ಎಡದಂಡೆ ಮುಖ್ಯ ಕಾಲುವೆ : ನಿಷೇಧಾಜ್ಞೆ ಜಾರಿ ಲಿಂಕ್ ವಿಳಾಸ https://dekalungi.blogspot.com/2018/05/blog-post_91.html
0 Response to "ತುಂಗಭದ್ರ ಎಡದಂಡೆ ಮುಖ್ಯ ಕಾಲುವೆ : ನಿಷೇಧಾಜ್ಞೆ ಜಾರಿ"
ಕಾಮೆಂಟ್ ಪೋಸ್ಟ್ ಮಾಡಿ