ಶೀರ್ಷಿಕೆ : ಜೂ. 27 ರಂದು ಕೆಂಪೇಗೌಡ ಜಯಂತಿ ಅದ್ದೂರಿ ಆಚರಣೆ : ಡಾ. ರುದ್ರೇಶ ಘಾಳಿ
ಲಿಂಕ್ : ಜೂ. 27 ರಂದು ಕೆಂಪೇಗೌಡ ಜಯಂತಿ ಅದ್ದೂರಿ ಆಚರಣೆ : ಡಾ. ರುದ್ರೇಶ ಘಾಳಿ
ಜೂ. 27 ರಂದು ಕೆಂಪೇಗೌಡ ಜಯಂತಿ ಅದ್ದೂರಿ ಆಚರಣೆ : ಡಾ. ರುದ್ರೇಶ ಘಾಳಿ
ಕೊಪ್ಪಳ ಜೂ. 20 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಜೂ. 27 ರಂದು ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಜಿಲ್ಲಾಡಳಿತದಿಂದ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ ಅವರು ಹೇಳಿದರು.
ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಜಿಲ್ಲಾ ಕೇಂದ್ರದಲ್ಲಿ ಆಚರಿಸುವ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರದಂದು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೆಂಪೇಗೌಡರ ಜಯಂತಿಯನ್ನು ಕಳೆದ ವರ್ಷದಂತೆ ಈ ವರ್ಷವೂ ಸಹ ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಲಾಗುತ್ತಿದೆ. ಕೆಂಪೇಗೌಡರ ಜಯಂತಿ ಸಮಾರಂಭ ಜೂ. 27 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಕೆಂಪೇಗೌಡರ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕೊಪ್ಪಳ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಡಾ. ಸಿ.ಬಿ. ಚಿಲ್ಕರಾಗಿ ಅವರಿಂದ ವಿಶೇಷ ಉಪನ್ಯಾಸ ಜರುಗಲಿದೆ. ಜಿಲ್ಲೆಯ ಎಲ್ಲ ಶಾಲಾ, ಕಾಲೇಜುಗಳಲ್ಲಿ ಕಡ್ಡಾಯವಾಗಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಆಚರಿಸುವಂತೆ ಹಾಗೂ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವಂತೆ ಶಿಕ್ಷಣ ಇಲಾಖೆ ಕ್ರಮ ಕೈಗೊಳ್ಳಬೇಕು. ಕಾರ್ಯಕ್ರಮಕ್ಕೆ ಎಲ್ಲ ಸಮಾಜದ ಮುಖಂಡರು, ಸಾರ್ವಜನಿಕರು ಆಗಮಿಸುವಂತೆ ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ ಅವರು ಮನವಿ ಮಾಡಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಯು. ನಾಗರಾಜ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ ಹೆಚ್., ಗಣ್ಯರಾದ ಮಹಾಂತೇಶ ಮಲ್ಲನಗೌಡರ, ಶಿವಾನಂದ ಹೊದ್ಲೂರ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಹಲವು ಗಣ್ಯರು ಉಪಸ್ಥಿತರಿದ್ದರು.
ಹೀಗಾಗಿ ಲೇಖನಗಳು ಜೂ. 27 ರಂದು ಕೆಂಪೇಗೌಡ ಜಯಂತಿ ಅದ್ದೂರಿ ಆಚರಣೆ : ಡಾ. ರುದ್ರೇಶ ಘಾಳಿ
ಎಲ್ಲಾ ಲೇಖನಗಳು ಆಗಿದೆ ಜೂ. 27 ರಂದು ಕೆಂಪೇಗೌಡ ಜಯಂತಿ ಅದ್ದೂರಿ ಆಚರಣೆ : ಡಾ. ರುದ್ರೇಶ ಘಾಳಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಜೂ. 27 ರಂದು ಕೆಂಪೇಗೌಡ ಜಯಂತಿ ಅದ್ದೂರಿ ಆಚರಣೆ : ಡಾ. ರುದ್ರೇಶ ಘಾಳಿ ಲಿಂಕ್ ವಿಳಾಸ https://dekalungi.blogspot.com/2018/06/27_20.html
0 Response to "ಜೂ. 27 ರಂದು ಕೆಂಪೇಗೌಡ ಜಯಂತಿ ಅದ್ದೂರಿ ಆಚರಣೆ : ಡಾ. ರುದ್ರೇಶ ಘಾಳಿ"
ಕಾಮೆಂಟ್ ಪೋಸ್ಟ್ ಮಾಡಿ