ಪುಸ್ತಕ ಬಹುಮಾನಕ್ಕಾಗಿ ಕೃತಿಗಳ ಆಹ್ವಾನ

ಪುಸ್ತಕ ಬಹುಮಾನಕ್ಕಾಗಿ ಕೃತಿಗಳ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಪುಸ್ತಕ ಬಹುಮಾನಕ್ಕಾಗಿ ಕೃತಿಗಳ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಪುಸ್ತಕ ಬಹುಮಾನಕ್ಕಾಗಿ ಕೃತಿಗಳ ಆಹ್ವಾನ
ಲಿಂಕ್ : ಪುಸ್ತಕ ಬಹುಮಾನಕ್ಕಾಗಿ ಕೃತಿಗಳ ಆಹ್ವಾನ

ಓದಿ


ಪುಸ್ತಕ ಬಹುಮಾನಕ್ಕಾಗಿ ಕೃತಿಗಳ ಆಹ್ವಾನ


ಕೊಪ್ಪಳ ಜೂ. 13 (ಕರ್ನಾಟಕ ವಾರ್ತೆ): ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಅತ್ಯುತ್ತಮ ಕೃತಿಗಳಿಗೆ ಕೊಡಮಾಡುವ 2017 ನೇ ವರ್ಷದ ಪುಸ್ತಕ ಬಹುಮಾನಕ್ಕಾಗಿ ವಿವಿಧ ಪ್ರಕಾರಗಳ ಕನ್ನಡ ಪುಸ್ತಕಗಳನ್ನು ಆಹ್ವಾನಿಸಲಾಗಿದೆ.
    ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪ್ರತಿ ವರ್ಷದಂತೆ 2017ನೇ ವರ್ಷದ ಪುಸ್ತಕ ಬಹುಮಾನ ಯೋಜನೆಗಾಗಿ ವಿವಿಧ ಪ್ರಕಾರಗಳ ಕನ್ನಡ ಪುಸ್ತಕಗಳನ್ನು ಆಯ್ಕೆ ಮಾಡಲಿದೆ.  ಪ್ರತಿ ಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುವುದು.  ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2017 ರ ಜನೆವರಿ 1 ರಿಂದ ಡಿಸೆಂಬರ್ 31 ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರಬೇಕು.  ಕೃತಿಯ ತಾಂತ್ರಿಕ ಪುಟದಲ್ಲಿ "ಪ್ರಥಮ ಮುದ್ರಣ 2017" ಎಂದು ಮುದ್ರಿತವಾಗಿರಬೇಕು.
ಕೃತಿಗಳ ವಿವರ :
******* ಪುಸ್ತಕ ಬಹುಮಾನಕ್ಕಾಗಿ ವಿವಿಧ ಪ್ರಕಾರಗಳ ಕೃತಿಗಳನ್ನು ಆಹ್ವಾನಿಸಲಾಗಿದ್ದು, ಅವುಗಳ ವಿವರ ಇಂತಿದೆ.  ಕಾವ್ಯ (ವಚನಗಳು ಮತ್ತು ಹನಿಗವನಗಳು ಸೇರಿ), ಯುವಕವಿಗಳ ಪ್ರಥಮ ಸಂಕಲನ (ದೃಢೀಕರಣ ಪತ್ರದೊಂದಿಗೆ), ಕಾವ್ಯ ಹಸ್ತಪ್ರತಿ – 30 ವರ್ಷ ಒಳಗಿರುವ ಯುವ ಕವಿಗಳು ತಮ್ಮ ಅಪ್ರಕಟಿತ ಪ್ರಥಮ ಕವನ ಸಂಕಲನದ ಹಸ್ತಪ್ರತಿಯನ್ನು ಕಳಿಸಿಕೊಡಬೇಕು.  ಕಾದಂಬರಿ, ಸಣ್ಣಕತೆ, ನಾಟಕ, ಲಲಿತ ಪ್ರಬಂಧ (ಹರಟೆ ಮತ್ತು ವಿನೋದ ಸಾಹಿತ್ಯ ಸೇರಿ), ಪ್ರವಾಸ ಸಾಹಿತ್ಯ, ಜೀವನಚರಿತ್ರೆ/ ಆತ್ಮಕಥೆ, ಗ್ರಂಥ ಸಂಪಾದನೆ (ಪ್ರಾಚೀನ ಕೃತಿಗಳ ಸಂಪಾದನೆ), ಮಕ್ಕಳ ಸಾಹಿತ್ಯ, ವಿಜ್ಞಾನ ಸಾಹಿತ್ಯ (ಭೌತ, ರಸಾಯನ, ಗಣಿತ, ಪ್ರಾಣಿ, ಸಸ್ಯ, ಇಂಜಿನಿಯರಿಂಗ್, ವೈದ್ಯ, ಭೂ, ಖಗೋಳ, ಗೃಹವಿಜ್ಞಾನ, ಪರಿಸರ ಇತ್ಯಾದಿ), ಮಾನವಿಕ (ಇತಿಹಾಸ, ರಾಜಕೀಯ ಶಾಸ್ತ್ರ, ಸಮಾಜಶಾಸ್ತ್ರ, ಮಾನವಶಾಸ್ತ್ರ, ಮನಃಶಾಸ್ತ್ರ, ಭಾಷಾಶಾಸ್ತ್ರ, ಶಿಕ್ಷಣ, ವಾಣಿಜ್ಯ, ಕಾನೂನು, ಗ್ರಂಥಭಂಡಾರ ವಿಜ್ಞಾನ, ಸಮೂಹ ಸಂವಹನ, ಧಾರ್ಮಿಕ, ದಾರ್ಶನಿಕ), ಸಂಶೋಧನೆ (ಕನ್ನಡ ಭಾಷೆ ಮತ್ತು ಸಂಸ್ಕøತಿಗಳಿಗೆ ಸಂಬಂಧಿಸಿದ ಸಂಶೋಧನೆ), ವೈಚಾರಿಕ/ ಅಂಕಣ ಬರಹ, ಅನುವಾದ- ಸೃಜನ- (ಕಾದಂಬರಿ, ಕಾವ್ಯ, ಸಣ್ಣಕತೆ, ನಾಟಕ, ಲಲಿತ ಪ್ರಬಂಧ, ಪ್ರವಾಸ ಸಾಹಿತ್ಯ, ಜೀವನ ಚರಿತ್ರೆ) ಸೃಜನೇತರ- (ಶಾಸ್ತ್ರಸಾಹಿತ್ಯ, ಸಾಹಿತ್ಯ ವಿಮರ್ಶೆ).  ಅನುವಾದ-2 (ಸೃಜನ/ ಸೃಜನೇತರ) ಕನ್ನಡದಿಂದ ಅನ್ಯಭಾಷೆಗೆ ಅನುವಾದ ಹೊಸ ಬರಹಗಾರರ ಮೊದಲ ಸ್ವತಂತ್ರ ಕೃತಿಯೆಂದು ಖಾತರಿಪಡಿಸುವ ದೃಢೀಕರಣ ಪತ್ರ ಲಗತ್ತಿಸಬೇಕು.  ಕನ್ನಡದಿಂದ ಇಂಗ್ಲೀಷಿಗೆ ಅನುವಾದ. 
ವಿಶೇಷ ಪುರಸ್ಕಾರಗಳು :
********* ಮುದ್ರಣ ಮಾಧ್ಯಮ ಪುರಸ್ಕಾರ (ದಿನಪತ್ರಿಕೆ/ ವಾರಪತ್ರಿಕೆ/ ಮಾಸಿಕ ಪತ್ರಿಕೆ/ ತ್ರೈಮಾಸಿಕ - ಸಾಹಿತ್ಯಕ್ಕೆ ನೀಡಿದ ಸ್ಥಾನ ಹಾಗೂ ಮೌಲ್ಯವನ್ನು ಅನುಲಕ್ಷ್ಮಿಸಿ).  ಡಿಜಿ ವಾಙ್ಞಯ ಪುರಸ್ಕಾರ (ಜಾಲ ತಾಣಗಳು/ ಬ್ಲಾಗ್‍ಗಳು/ ಸಾಮಾಜಿಕ ತಾಣ- ಟ್ವಿಟರ್/ ಫೇಸ್‍ಬುಕ್, ಯುಟ್ಯೂಬ್, ಇವುಗಳಲ್ಲಿ ಸಾಹಿತ್ಯಕ್ಕೆ ನೀಡಿದ ಸ್ಥಾನ ಹಾಗೂ ಮೌಲ್ಯವನ್ನು ಅನುಲಕ್ಷಿಸಿ).  ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ಸಂಪಾದಕರು ಈ ಪುರಸ್ಕಾರಗಳಿಗೆ ತಮ್ಮ ಮಾಧ್ಯಮಗಳಲ್ಲಿ ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಸ್ಥಾನ ಹಾಗೂ ಮೌಲ್ಯದ ಹಿನ್ನೆಲೆಯಲ್ಲಿ ವಿವರಣೆಗಳೊಂದಿಗೆ ಸಲ್ಲಿಕೆಯನ್ನು ನೀಡಬಹುದು. 
ಬಹುಮಾನಕ್ಕಾಗಿ ಪರಿಗಣಿಸದೇ ಇರುವ ಕೃತಿಗಳ ವಿವರ ಇಂತಿದೆ, ಮರುಮುದ್ರಣವಾದ ಪುಸ್ತಕಗಳು, ಜಾನಪದ ಕೃತಿಗಳು, ಪಿಹೆಚ್‍ಡಿ ಪದವಿಗಾಗಿ ಸಿದ್ದಪಡಿಸಿದ ಸಂಶೋಧನಾ ಗ್ರಂಥಗಳು, ಪಠ್ಯಪುಸ್ತಕಗಳು, ಅಕಾಡೆಮಿಯ ಗೌರವ ಪ್ರಶಸ್ತಿ ಪುರಸ್ಕøತ ಸಾಹಿತಿಗಳ ಕೃತಿಗಳು, ಈಗಾಗಲೇ ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಒಟ್ಟಾರೆ ಮೂರು ಬಾರಿ ಪುಸ್ತಕ ಬಹುಮಾನ ಪಡೆದವರ ಕೃತಿಗಳು, ಒಂದೇ ಪ್ರಕಾರದಲ್ಲಿ ಎರಡು ಬಾರಿ ಪುಸ್ತಕ ಬಹುಮಾನ ಪಡೆದವರ ಕೃತಿಗಳನ್ನು ಅದೇ ಪ್ರಕಾರದಲ್ಲಿ ಮತ್ತೆ ಪರಿಗಣಿಸಲಾಗುವುದಿಲ್ಲ.  ಒಬ್ಬ ಲೇಖಕರಿಗೆ ಮೂರು ಬಾರಿ ಬೇರೆ-ಬೇರೆ ಪ್ರಕಾರಗಳಲ್ಲಿ ಬಹುಮಾನ ಪಡೆಯುವ ಅವಕಾಶವಿದೆ. 
ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪುಸ್ತಕ ಬಹುಮಾನಕ್ಕಾಗಿ ಕಳುಹಿಸುವ ಪುಸ್ತಕಗಳು ನಿಗದಿತ ಅವಧಿಯಲ್ಲಿ ಪ್ರಕಟವಾಗಿರಬೇಕು.  ಪುಸ್ತಕಗಳ ತಲಾ 4 ಪ್ರತಿಗಳನ್ನು ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2 ನೇ ಮಹಡಿ, ಜೆಸಿ ರಸ್ತೆ, ಬೆಂಗಳೂರು-560002 ಇವರಿಗೆ ರಿಜಿಸ್ಟರ್ಡ್ ಅಂಚೆ/ ಕೋರಿಯರ್ ಮೂಲಕ ಅಥವಾ ಖುದ್ದಾಗಿ ಜೂ. 25 ರೊಳಗಾಗಿ ತಲುಪಿಸಬೇಕು. ಕಳುಹಿಸಲ್ಪಡುವ ಕೃತಿಯ ಮೇಲೆ ಯಾವ ಸಾಹಿತ್ಯದ ಪ್ರಕಾರಕ್ಕೆ ಸೇರಿರುತ್ತದೆ ಎಂದು ಸ್ಪಷ್ಟವಾಗಿ ಪುಸ್ತಕದ ಶೀರ್ಷಿಕೆ ಪುಟದಲ್ಲಿ ಬರೆಯಬೇಕು ಎಂದು ರಿಜಿಸ್ಟ್ರಾರ್ ಕರಿಯಪ್ಪ ಎನ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ಪುಸ್ತಕ ಬಹುಮಾನಕ್ಕಾಗಿ ಕೃತಿಗಳ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ಪುಸ್ತಕ ಬಹುಮಾನಕ್ಕಾಗಿ ಕೃತಿಗಳ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಪುಸ್ತಕ ಬಹುಮಾನಕ್ಕಾಗಿ ಕೃತಿಗಳ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/06/blog-post_14.html

Subscribe to receive free email updates:

0 Response to "ಪುಸ್ತಕ ಬಹುಮಾನಕ್ಕಾಗಿ ಕೃತಿಗಳ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ