ವಿಶ್ವಕರ್ಮ ಸಮುದಾಯದವರಿಗೆ ಸಾಲ ಸೌಲಭ್ಯ : ಅರ್ಜಿ ಆಹ್ವಾನ

ವಿಶ್ವಕರ್ಮ ಸಮುದಾಯದವರಿಗೆ ಸಾಲ ಸೌಲಭ್ಯ : ಅರ್ಜಿ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ವಿಶ್ವಕರ್ಮ ಸಮುದಾಯದವರಿಗೆ ಸಾಲ ಸೌಲಭ್ಯ : ಅರ್ಜಿ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ವಿಶ್ವಕರ್ಮ ಸಮುದಾಯದವರಿಗೆ ಸಾಲ ಸೌಲಭ್ಯ : ಅರ್ಜಿ ಆಹ್ವಾನ
ಲಿಂಕ್ : ವಿಶ್ವಕರ್ಮ ಸಮುದಾಯದವರಿಗೆ ಸಾಲ ಸೌಲಭ್ಯ : ಅರ್ಜಿ ಆಹ್ವಾನ

ಓದಿ


ವಿಶ್ವಕರ್ಮ ಸಮುದಾಯದವರಿಗೆ ಸಾಲ ಸೌಲಭ್ಯ : ಅರ್ಜಿ ಆಹ್ವಾನ


ಕೊಪ್ಪಳ ಜೂ. 23 (ಕರ್ನಾಟಕ ವಾರ್ತೆ): ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿಗೆ ರಾಜ್ಯ ಸರ್ಕಾರದ ಹಾಗೂ ಎನ್.ಬಿ.ಸಿ.ಎಫ್.ಡಿ..ಸಿಯ ಯೋಜನೆಗಳಲ್ಲಿ ಸಾಲ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ.
    ಅರ್ಜಿ ಸಲ್ಲಿಸಲು ವಿಶ್ವಕರ್ಮ ಸಮುದಾಯ ಹಾಗೂ ಅದರ ಉಪ ಜಾತಿಗಳಿಗೆ ಸೇರಿದವರಾಗಿರಬೇಕು.  ಗಂಗಾಕಲ್ಯಾಣ ಯೋಜನೆಯಲ್ಲಿ ನೀರಾವರಿ ಸೌಲಭ್ಯ ಪಡೆಯಲು ಅರ್ಜಿದಾರರು ಸಣ್ಣ ಮತ್ತು ಅತಿಸಣ್ಣ ರೈತರಾಗಿರಬೇಕು ಹಾಗೂ ಒಂದೇ ಕಡೆ ಹೊಂದಿಕೊಂಡಂತಿರುವ ಕನಿಷ್ಠ 2 ಎಕರೆ ಗರಿಷ್ಠ 5 ಎಕರೆ ಜಮೀನು ಹೊಂದಿರಬೇಕು.  18 ರಿಂದ 35 ವರ್ಷ ವಯೋಮಿತಿಯಲ್ಲಿರಬೇಕು.  .
ರಾಜ್ಯ ಸರ್ಕಾರದ ಯೋಜನೆ :
*********** ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು.  ಸ್ವಯಂ ಉದ್ಯೋಗ ನೇರಸಾಲ ಯೋಜನೆ.  ಬ್ಯಾಂಕ್‍ಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ.  ಅರಿವು-ಶೈಕ್ಷಣಿಕ ಸಾಲ ಯೋಜನೆ.  ಗಂಗಾ ಕಲ್ಯಾಣ ವೈಯಕ್ತಿಕ ನೀರಾವರಿ ಯೋಜನೆ.  ಮಹಿಳೆಯರ ಮೈಕ್ರೋ ಕ್ರೆಡಿಟ್ ಸಾಲ ಯೋಜನೆ.  ಕಮ್ಮಾರಿಕೆ, ಅಕ್ಕಸಾಲಿ ಮತ್ತು ಬಡಗಿ ಉದ್ಯಮಿಗಳಿಗೆ ತರಬೇತಿ ಮತ್ತು ಸಾಲ ಯೋಜನೆಗಳಡಿ ಅರ್ಜಿ ಆಹ್ವಾನಿಸಲಾಗಿದ್ದು,  ರಾಜ್ಯ ಸರ್ಕಾರದ ಯೋಜನೆಗಳಲ್ಲಿ ಸಾಲ ಪಡೆಯುವವರ ಕುಟುಂಬದ ವಾರ್ಷಿಕ ವರಮಾನವು ಗ್ರಾಮಾಂತರ ಪ್ರದೇಶದವರಿಗೆ ರೂ. 40,000/-ಗಳಿಗಿಂತ ಹಾಗೂ ಪಟ್ಟಣ ಪ್ರದೇಶದವರಿಗೆ ರೂ.55,000/- ಗಳಿಗಿಂತ ಕಡಿಮೆ ಇರಬೇಕು.  ಅರಿವು ಯೋಜನೆಗೆ ವಾರ್ಷಿಕ ವರಮಾನ ರೂ. 3.50 ಲಕ್ಷಗಳ ಮಿತಿಯಲ್ಲಿರಬೇಕು. 
ಎನ್.ಬಿ.ಸಿ.ಎಫ್.ಡಿ.ಸಿ ಯೋಜನೆ :
************ ಅವಧಿ ಸಾಲ ಯೋಜನೆಯಲ್ಲಿ ಕೃಷಿವಲಯ, ಸಣ್ಣ ವ್ಯಾಪಾರ, ಸೇವಾವಲಯ, ಸಾರಿಗೆ ವಲಯ.  ಶೈಕ್ಷಣಿಕ ಸಾಲ ಯೋಜನೆಯಡಿ ದೇಶ ಹಾಗೂ ವಿದೇಶದಲ್ಲಿ ವ್ಯಾಸಂಗ.  ನ್ಯೂಸ್ವರ್ಣಿಮಾ ಸಾಲ (ಮಹಿಳಾ ಯೋಜನೆ).  ಶಿಲ್ಪಸಂಪದ. ಸ್ವಯಂ ಸಕ್ಷಮ ಸಾಲ.  ಮೈಕ್ರೋಫೈನಾನ್ಸ್.  ಕೃಷಿಸಂಪದ.  ಮಹಿಳಾ ಸಮೃದ್ಧಿ ಯೋಜನೆ (ಮಹಿಳಾ ಸ್ವಸಹಾಯ ಗುಂಪುಗಳಿಗೆ ಮತ್ತು ವೈಯಕ್ತಿಕ ಸಾಲ) ಯೋಜನೆಗಳಿಗೆ ಅರ್ಜಿ ಆಹ್ವಾನಿಸಿದೆ.  ಎನ್.ಬಿ.ಸಿ.ಎಫ್.ಡಿ..ಸಿಯ ಯೋಜನೆಗಳಲ್ಲಿ ಸಾಲ ಪಡೆಯುವವರ ಕುಟುಂಬದ ವಾರ್ಷಿಕ ವರಮಾನವು ಗ್ರಾಮಾಂತರ ಹಾಗೂ ಪಟ್ಟಣ ಪ್ರದೇಶದವರಿಗೆ ರೂ.3 ಲಕ್ಷಗಳಿಗಿಂತ ಕಡಿಮೆ ಇರಬೇಕು. 
ಅರ್ಜಿ ನಮೂನೆಯನ್ನು ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಕೊಪ್ಪಳ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಆಯಾ ತಾಲೂಕ ಹಿಂದುಳಿದ ವರ್ಗಗಳ ಕಲ್ಯಾಣ ವಿಸ್ತರಣಾಧಿಕಾರಿಗಳ ಕಛೇರಿಯಲ್ಲಿ ಜುಲೈ. 16 ರೊಳಗೆ ಪಡೆಯಬೇಕು.  ಮತ್ತು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಲಗತ್ತಿಸಿ ಜುಲೈ. 25 ರೊಳಗಾಗಿ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ ಅಥವಾ ನಿಗಮದ ವೆಬ್‍ಸೈಟ್  https://ift.tt/2Kiv659  ರಲ್ಲಿ ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.


ಹೀಗಾಗಿ ಲೇಖನಗಳು ವಿಶ್ವಕರ್ಮ ಸಮುದಾಯದವರಿಗೆ ಸಾಲ ಸೌಲಭ್ಯ : ಅರ್ಜಿ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ವಿಶ್ವಕರ್ಮ ಸಮುದಾಯದವರಿಗೆ ಸಾಲ ಸೌಲಭ್ಯ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ವಿಶ್ವಕರ್ಮ ಸಮುದಾಯದವರಿಗೆ ಸಾಲ ಸೌಲಭ್ಯ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/06/blog-post_21.html

Subscribe to receive free email updates:

0 Response to "ವಿಶ್ವಕರ್ಮ ಸಮುದಾಯದವರಿಗೆ ಸಾಲ ಸೌಲಭ್ಯ : ಅರ್ಜಿ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ