ಮುಖ್ಯಮಂತ್ರಿಗಳ ಉದ್ಯೋಗ ಸೃಜನ ಯೋಜನೆ : ಸ್ವಯಂ ಉದ್ಯೋಗಕ್ಕಾಗಿ ಅರ್ಜಿ ಆಹ್ವಾನ

ಮುಖ್ಯಮಂತ್ರಿಗಳ ಉದ್ಯೋಗ ಸೃಜನ ಯೋಜನೆ : ಸ್ವಯಂ ಉದ್ಯೋಗಕ್ಕಾಗಿ ಅರ್ಜಿ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಮುಖ್ಯಮಂತ್ರಿಗಳ ಉದ್ಯೋಗ ಸೃಜನ ಯೋಜನೆ : ಸ್ವಯಂ ಉದ್ಯೋಗಕ್ಕಾಗಿ ಅರ್ಜಿ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಮುಖ್ಯಮಂತ್ರಿಗಳ ಉದ್ಯೋಗ ಸೃಜನ ಯೋಜನೆ : ಸ್ವಯಂ ಉದ್ಯೋಗಕ್ಕಾಗಿ ಅರ್ಜಿ ಆಹ್ವಾನ
ಲಿಂಕ್ : ಮುಖ್ಯಮಂತ್ರಿಗಳ ಉದ್ಯೋಗ ಸೃಜನ ಯೋಜನೆ : ಸ್ವಯಂ ಉದ್ಯೋಗಕ್ಕಾಗಿ ಅರ್ಜಿ ಆಹ್ವಾನ

ಓದಿ


ಮುಖ್ಯಮಂತ್ರಿಗಳ ಉದ್ಯೋಗ ಸೃಜನ ಯೋಜನೆ : ಸ್ವಯಂ ಉದ್ಯೋಗಕ್ಕಾಗಿ ಅರ್ಜಿ ಆಹ್ವಾನ


ಕೊಪ್ಪಳ ಜೂ. 06 (ಕರ್ನಾಟಕ ವಾರ್ತೆ): ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯಿಂದ ಮುಖ್ಯಮಂತ್ರಿಗಳ ಉದ್ಯೋಗ ಸೃಜನ ಯೋಜನೆಯಡಿ ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ನೆರವು ಮಂಜೂರಿಸಲು ಅರ್ಜಿ ಆಹ್ವಾನಿಸಲಾಗಿದೆ.
    ಗ್ರಾಮೀಣ ನಿರುದ್ಯೋಗ ವಿದ್ಯಾವಂತ ಯುವಕ/ ಯುವತಿಯರಿಗೆ ಸ್ವಯಂ ಉದ್ಯೋಗ ಕಲ್ಪಿಸಲು ಮುಖ್ಯಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಸಿಎಂಎಸ್‍ಇಜಿಪಿ) ಯನ್ನು ಜಾರಿಗೊಳಿಸಿದ್ದು, ಈ ಯೋಜನೆಯಡಿ ಸೌಲಭ್ಯ ಪಡೆಯಲಿಚ್ಛಿಸುವ ಆಸಕ್ತ ಅರ್ಹ ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
    ಯೋಜನೆಯ ಗರಿಷ್ಠ ವೆಚ್ಚ ರೂ.10 ಲಕ್ಷ ಇರುವ ಉತ್ಪಾದನೆ ಮತ್ತು ಸೇವಾ ಚಟುವಟಿಕೆಗಳಿಗೆ, ಬ್ಯಾಂಕುಗಳು ನೀಡುವ ಸಾಲದ ಮೊತ್ತದ ಮೇಲೆ ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ. 25% (ಗರಿಷ್ಠ ಮೊತ್ತ ರೂ.2.50 ಲಕ್ಷ) ಮತ್ತು ವಿಶೇಷ ವರ್ಗದ (ಪ.ಜಾತಿ/ ಪ.ಪಂಗಡ/ ಹಿಂದುಳಿದ ವರ್ಗ/ ಅಲ್ಪಸಂಖ್ಯಾತರು/ ಅಂಗವಿಕಲರು/ ಮಾಜಿ ಸೈನಿಕ/ ಮಹಿಳೆ) ಫಲಾನುಭವಿಗಳಿಗೆ ಶೇ. 35% (ಗರಿಷ್ಠ ಮೊತ್ತ ರೂ.3.50 ಲಕ್ಷ) ಸಹಾಯಧನ ಸೌಲಭ್ಯ ಇರುತ್ತದೆ.  ಉದ್ದಿಮೆಯನ್ನು ಪ್ರಾರಂಭ ಮಾಡುವ ಸಾಮಾನ್ಯ ವರ್ಗದವರು ಯೋಜನಾ ವೆಚ್ಚದ ಶೇ. 10% ಮತ್ತು ವಿಶೇಷ ವರ್ಗದವರು ಶೇ. 5% ರಷ್ಟು ಸ್ವಂತ ಬಂಡವಾಳ ಹೂಡಬೇಕಾಗಿರುತ್ತದೆ.
    ಅರ್ಜಿ ಸಲ್ಲಿಸಲು ಫಲಾನುಭವಿಗೆ 21 ವರ್ಷ ಪೂರ್ಣಗೊಂಡಿರಬೇಕು.  ಸಾಮಾನ್ಯ ವರ್ಗದವರಿಗೆ ಗರಿಷ್ಠ 35 ವರ್ಷ, ವಿಶೇಷ ವರ್ಗದವರಿಗೆ (ಪ.ಜಾತಿ/ ಪ.ಪಂಗಡ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರು, ಮಾಜಿ ಸೈನಿಕ ಮತ್ತು ಮಹಿಳೆಯರು) ಗರಿಷ್ಠ 45 ವರ್ಷ ವಯೋಮಿತಿಯಲ್ಲಿರಬೇಕು.  ಯೋಜನೆಯು ಹೊಸದಾಗಿ ಪ್ರಾರಂಭಿಸುವ ಘಟಕಗಳಿಗೆ ಮಾತ್ರ ಅನ್ವಯಿಸುತ್ತದೆ.  ವಿದ್ಯಾರ್ಹತೆ 8ನೇ ತರಗತಿ ಪಾಸಾಗಿರಬೇಕು.  ಅಥವಾ ಗುರುತಿಸಿದ ಶಿಕ್ಷಣ ಸಂಸ್ಥೆಗಳಿಂದ ವೃತ್ತಿಪರ ತರಬೇತಿ ಸಂಸ್ಥೆಯಿಂದ ವೃತ್ತಿಪರ ತರಬೇತಿ, ಐಟಿಐ, ಡಿಪೆÇ್ಲೀಮಾ ಪದವಿ ಹೊಂದಿರಬೇಕು.  ಯೊಜನೆಯನ್ನು ಕೊಪ್ಪಳ ಜಿಲ್ಲಾ ಕೈಗಾರಿಕ ಕೇಂದ್ರ ಮತ್ತು ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಮುಖಾಂತರ ಅನುಷ್ಠಾನಗೊಳಿಸಲಾಗುತ್ತಿದ್ದು, ರಾಜ್ಯ ಖಾದಿ ಮಂಡಳಿ ಮುಖಾಂತರ ಯೋಜನೆಯ ಸೌಲಭ್ಯ ಪಡೆಯಲು ಅಪೇಕ್ಷಿಸುವ ಆಸಕ್ತ ಅಭ್ಯರ್ಥಿಗಳು ವೆಬ್‍ಸೈಟ್   http://cmegp.kar.nic.in ನಲ್ಲಿ ಅರ್ಜಿ ಸಲ್ಲಿಸಿ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಜಿಲ್ಲಾ ಕಛೇರಿ ಕೊಪ್ಪಳ ಇವರಿಗೆ, ಅರ್ಜಿಯ ಪ್ರತಿ ಅಗತ್ಯ ದಾಖಲಾತಿಗಳ ಯಥಾ ಪ್ರತಿಯೊಂದಿಗೆ ದ್ವಿಪ್ರತಿಯಲ್ಲಿ ಜೂ. 30 ರೊಳಗಾಗಿ ಸಲ್ಲಿಸಬೇಕು.  ಹೆಚ್ಚಿನ ವಿವರಗಳನ್ನು ದೂರವಾಣಿ ಸಂಖ್ಯೆ 08539-231473 ಕ್ಕೆ ಸಂಪರ್ಕಿಸಬಹುದು ಎಂದು ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ಮುಖ್ಯಮಂತ್ರಿಗಳ ಉದ್ಯೋಗ ಸೃಜನ ಯೋಜನೆ : ಸ್ವಯಂ ಉದ್ಯೋಗಕ್ಕಾಗಿ ಅರ್ಜಿ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ಮುಖ್ಯಮಂತ್ರಿಗಳ ಉದ್ಯೋಗ ಸೃಜನ ಯೋಜನೆ : ಸ್ವಯಂ ಉದ್ಯೋಗಕ್ಕಾಗಿ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಮುಖ್ಯಮಂತ್ರಿಗಳ ಉದ್ಯೋಗ ಸೃಜನ ಯೋಜನೆ : ಸ್ವಯಂ ಉದ್ಯೋಗಕ್ಕಾಗಿ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/06/blog-post_6.html

Subscribe to receive free email updates:

0 Response to "ಮುಖ್ಯಮಂತ್ರಿಗಳ ಉದ್ಯೋಗ ಸೃಜನ ಯೋಜನೆ : ಸ್ವಯಂ ಉದ್ಯೋಗಕ್ಕಾಗಿ ಅರ್ಜಿ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ