ಜು. 18 ರಿಂದ ಜಿಲ್ಲೆಯಲ್ಲಿ 3ನೇ ಸುತ್ತಿನ ವಿಶೇಷ ಇಂದ್ರಧನುಷ್ ಅಭಿಯಾನ ಇಂದ್ರಧನುಷ್ ಲಸಿಕಾ ಕಾರ್ಯಕ್ರಮ ಅರ್ಹ ಎಲ್ಲ ಮಕ್ಕಳಿಗೆ ತಲುಪಲಿ : ಎಂ. ಕನಗವಲ್ಲಿ

ಜು. 18 ರಿಂದ ಜಿಲ್ಲೆಯಲ್ಲಿ 3ನೇ ಸುತ್ತಿನ ವಿಶೇಷ ಇಂದ್ರಧನುಷ್ ಅಭಿಯಾನ ಇಂದ್ರಧನುಷ್ ಲಸಿಕಾ ಕಾರ್ಯಕ್ರಮ ಅರ್ಹ ಎಲ್ಲ ಮಕ್ಕಳಿಗೆ ತಲುಪಲಿ : ಎಂ. ಕನಗವಲ್ಲಿ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಜು. 18 ರಿಂದ ಜಿಲ್ಲೆಯಲ್ಲಿ 3ನೇ ಸುತ್ತಿನ ವಿಶೇಷ ಇಂದ್ರಧನುಷ್ ಅಭಿಯಾನ ಇಂದ್ರಧನುಷ್ ಲಸಿಕಾ ಕಾರ್ಯಕ್ರಮ ಅರ್ಹ ಎಲ್ಲ ಮಕ್ಕಳಿಗೆ ತಲುಪಲಿ : ಎಂ. ಕನಗವಲ್ಲಿ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಜು. 18 ರಿಂದ ಜಿಲ್ಲೆಯಲ್ಲಿ 3ನೇ ಸುತ್ತಿನ ವಿಶೇಷ ಇಂದ್ರಧನುಷ್ ಅಭಿಯಾನ ಇಂದ್ರಧನುಷ್ ಲಸಿಕಾ ಕಾರ್ಯಕ್ರಮ ಅರ್ಹ ಎಲ್ಲ ಮಕ್ಕಳಿಗೆ ತಲುಪಲಿ : ಎಂ. ಕನಗವಲ್ಲಿ
ಲಿಂಕ್ : ಜು. 18 ರಿಂದ ಜಿಲ್ಲೆಯಲ್ಲಿ 3ನೇ ಸುತ್ತಿನ ವಿಶೇಷ ಇಂದ್ರಧನುಷ್ ಅಭಿಯಾನ ಇಂದ್ರಧನುಷ್ ಲಸಿಕಾ ಕಾರ್ಯಕ್ರಮ ಅರ್ಹ ಎಲ್ಲ ಮಕ್ಕಳಿಗೆ ತಲುಪಲಿ : ಎಂ. ಕನಗವಲ್ಲಿ

ಓದಿ


ಜು. 18 ರಿಂದ ಜಿಲ್ಲೆಯಲ್ಲಿ 3ನೇ ಸುತ್ತಿನ ವಿಶೇಷ ಇಂದ್ರಧನುಷ್ ಅಭಿಯಾನ ಇಂದ್ರಧನುಷ್ ಲಸಿಕಾ ಕಾರ್ಯಕ್ರಮ ಅರ್ಹ ಎಲ್ಲ ಮಕ್ಕಳಿಗೆ ತಲುಪಲಿ : ಎಂ. ಕನಗವಲ್ಲಿ

ಕೊಪ್ಪಳ ಜು. 10 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯಲ್ಲಿ 3ನೇ ಸುತ್ತಿನ ವಿಶೇಷ ತೀವ್ರತರ ಇಂದ್ರಧನುಷ್ ಅಭಿಯಾನವನ್ನು ಜು. 18 ರಿಂದ ವಿವಿಧ ಗ್ರಾಮಗಳಲ್ಲಿ ಹಮ್ಮಿಕೊಳ್ಳಲಾಗಿದ್ದು, 0-2 ಹಾಗೂ 5-6 ವರ್ಷದ ಎಲ್ಲ ಮಕ್ಕಳು ಹಾಗೂ ಗರ್ಭಿಣಿ ಮಹಿಳೆಯರಿಗೆ ಲಸಿಕೆ ಹಾಕಬೇಕಾಗಿದ್ದು, ಎಲ್ಲ ಅರ್ಹರಿಗೂ ತಪ್ಪದೆ ಲಸಿಕೆ ತಲುಪುವಂತಾಗಬೇಕು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಸೂಚನೆ ನೀಡಿದರು.

     ತೀವ್ರತರ ವಿಶೇಷ ಇಂದ್ರಧನುಷ್ ಲಸಿಕಾ ಅಭಿಯಾನ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರದಂದು ಏರ್ಪಡಿಸಿದ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


    ಕೊಪ್ಪಳ ಜಿಲ್ಲೆಯಲ್ಲಿ ಈಗಾಗಲೆ ಎರಡು ಸುತ್ತು ವಿಶೇಷ ಇಂದ್ರಧನುಷ್ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ.  ಇದೀಗ ಬಾಕಿ ಉಳಿದವರಿಗೆ ಲಸಿಕೆ ತಲುಪುವಂತಾಗಲು ಮೂರನೆ ಸುತ್ತಿನ ವಿಶೇಷ ತೀವ್ರತರ ಇಂದ್ರಧನುಷ್ ಅಭಿಯಾನವು ಜು. 18, 20 ಮತ್ತು 21 ರಂದು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ನಡೆಯಲಿದ್ದು, ಅಂಗನವಾಡಿ ಕೇಂದ್ರಗಳನ್ನು ತೆರೆಯುವಂತೆ ಹಾಗೂ ಮಕ್ಕಳು ಹಾಗೂ ಗರ್ಭಿಣಿ ಮಹಿಳೆಯರು ಲಸಿಕಾ ಕಾರ್ಯಕ್ರಮಕ್ಕೆ ಬರುವಂತೆ ನೋಡಿಕೊಳ್ಳಿ.  ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕೀಯರು ಲಸಿಕಾ ಟೀಮ್‍ನ ಒಂದು ಭಾಗವಾಗಿದ್ದು, ಕಾರ್ಯಕ್ರಮಕ್ಕೆ ಅವರು ತಪ್ಪದೇ ಹಾಜರಾಗುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು.  ಅಲ್ಲದೇ ಅಂಗನವಾಡಿ ಕೇಂದ್ರಗಳಲ್ಲಿ ಪ್ರಚಾರ ಫಲಕಗಳನ್ನು ಪ್ರದರ್ಶಿಸಬೇಕು.  ಕಾರ್ಯಕ್ರಮ ನಡೆಯುವ ಗ್ರಾಮಗಳ ಸ್ತೀಶಕ್ತಿ ಹಾಗೂ ಸ್ವಶಕ್ತಿ ಗುಂಪುಗಳ ಪದಾಧಿಕಾರಿಗಳು ಭಾಗವಹಿಸಲು ಸೂಚಿಸಬೇಕು.  ವಿಶೇಷ ತೀವ್ರತರ ಇಂದ್ರಧನುಷ್ ಅಭಿಯಾನದಡಿ ನೀಡಲಾಗುತ್ತಿರುವ ಲಸಿಕೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ.  ಕಾರ್ಯಕ್ರಮ ದಿನದಂದು ಜಿಲ್ಲೆಯಾದ್ಯಂತ ವಿದ್ಯುತ್ ನಿಲುಗಡೆಯಾಗದಂತೆ ಜೆಸ್ಕಾಂ ಇಲಾಖೆ ಎಚ್ಚರ ವಹಿಸಬೇಕು.  ಇದು ಕೊನೆಯ ಸುತ್ತು ಆಗಿರುವುದರಿಂದ, ಯಾವುದೇ ಅರ್ಹರು ಲಸಿಕೆಯಿಂದ ವಂಚಿತರಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಸೂಚನೆ ನೀಡಿದರು.
    ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಮಾತನಾಡಿ, ಇಂದ್ರಧನುಷ್ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು ಹಾಗೂ ಲಸಿಕೆಗಳನ್ನು ಹಾಕಿಸುವುದು ಪೋಷಕರ ಕರ್ತವ್ಯವಾಗಿದೆ.  ವಿಶೇಷ ತೀವ್ರತರ ಇಂದ್ರಧನುಷ್ ಅಭಿಯಾನದಡಿಯಲ್ಲಿ ಗರ್ಭಿಣಿಯರಿಗೆ ಟಿಟಿ ಲಸಿಕೆ (ಧನುರ್ವಾಯು), ಎರಡು ವರ್ಷದ ಒಳಗಿನ ಮಕ್ಕಳಿಗೆ ಬಿಸಿಜಿ, ಪೋಲಿಯೋ, ದರಾಡ ಮತ್ತು ರುಬೆಲ್ಲಾ ಪ್ರತ್ಯೇಕ ಲಸಿಕೆ ಹಾಗೂ ಡಿಪಿಟಿ, ಹೆಪಟೈಟಿಸ್-ಬಿ, ಇನ್‍ಫ್ಲಯೆಂಜಾ-ಬಿ ಸೇರಿರುವ ಪೆಂಟಾವೆಲಂಟ್.  5 ರಿಂದ 6 ವರ್ಷದ ಮಕ್ಕಳಿಗೆ ಡಿಪಿಟಿ ಬೂಸ್ಟರ್ ನೀಡಲಾಗುವುದು.  ಎಲ್ಲಾ ಹಂತದ ಸಕಾರಿ ಆಸ್ಪತ್ರೆ ಹಾಗೂ ಉಪಕೇಂದ್ರಗಳಲ್ಲಿ ಉಚಿತವಾಗಿ ಲಸಿಕೆಯನ್ನು ನೀಡಲಾಗುವುದು.  ಕಳೆದ ಮೇ. ಮತ್ತು ಜೂನ್ ತಿಂಗಳಲ್ಲಿ ಮೊದಲನೇ ಮತ್ತು ಎರಡನೇ ಹಂತದ ಅಭಿಯಾನವನ್ನು ಆಯೋಜಿಸಲಾಗಿದ್ದು, ಸಮೀಕ್ಷೆಗೂ ಮೀರಿ ಅಧಿಕ ಸಂಖ್ಯೆಯಲ್ಲಿ ಲಸಿಕೆಯನ್ನು ಹಾಕಲಾಗಿದೆ.  ಅದೇ ರೀತಿ 3ನೇ ಸುತ್ತಿನ ವಿಶೇಷ ತೀವ್ರತರ ಇಂದ್ರಧನುಷ್ ಅಭಿಯಾನವನ್ನು  ಜು. 18, 20 ಮತ್ತು 21 ರಂದು ಜಿಲ್ಲೆಯ 17 ಗ್ರಾಮಗಳಲ್ಲಿ ಆಯೋಜಿಸಿದ್ದು, 0-2 ವರ್ಷದ ಮಕ್ಕಳು-208 ಹಾಗೂ 5-6 ವರ್ಷದ ಮಕ್ಕಳು-06 ಸೇರಿ ಒಟ್ಟು 214 ಮಕ್ಕಳು ಮತ್ತು 21 ಗರ್ಭಿಣಿ ಮಹಿಳೆಯರಿಗೆ ಲಸಿಕೆಯನ್ನು ಹಾಕಿಸಲು ಗುರಿ ನಿಗದಿಪಡಿಸಲಾಗಿದೆ.  ಕಾರ್ಯಕ್ರಮಕ್ಕೆ ವಿವಿಧ ಇಲಾಖೆಗಳ ಸಹಕಾರ ಅತ್ಯವಶ್ಯಕವಾಗಿದೆ ಎಂದರು.
    ಸಭೆಯಲ್ಲಿ ಐಎಎಸ್  ಪ್ರೊಬೆಷನರಿ ಅಧಿಕಾರಿ ಅಕ್ಷಯ್ ಶ್ರೀಧರ್, ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ ಹೆಚ್., ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ದಾನರಡ್ಡಿ, ಜಿಲ್ಲಾ ಮಾನಸಿಕ ಆರೋಗ್ಯಾಧಿಕಾರಿ ಡಾ. ಎಸ್.ಕೆ. ದೇಸಾಯಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಎಮ್.ಎಮ್ ಕಟ್ಟಿಮನಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಡಾ. ಜಂಬಯ್ಯ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳ ಟಿ.ಹೆಚ್.ಒ.ಗಳು, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಇಲಾಖೆ, ಮಕ್ಕಳ ಸಹಾಯವಾಣಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


ಹೀಗಾಗಿ ಲೇಖನಗಳು ಜು. 18 ರಿಂದ ಜಿಲ್ಲೆಯಲ್ಲಿ 3ನೇ ಸುತ್ತಿನ ವಿಶೇಷ ಇಂದ್ರಧನುಷ್ ಅಭಿಯಾನ ಇಂದ್ರಧನುಷ್ ಲಸಿಕಾ ಕಾರ್ಯಕ್ರಮ ಅರ್ಹ ಎಲ್ಲ ಮಕ್ಕಳಿಗೆ ತಲುಪಲಿ : ಎಂ. ಕನಗವಲ್ಲಿ

ಎಲ್ಲಾ ಲೇಖನಗಳು ಆಗಿದೆ ಜು. 18 ರಿಂದ ಜಿಲ್ಲೆಯಲ್ಲಿ 3ನೇ ಸುತ್ತಿನ ವಿಶೇಷ ಇಂದ್ರಧನುಷ್ ಅಭಿಯಾನ ಇಂದ್ರಧನುಷ್ ಲಸಿಕಾ ಕಾರ್ಯಕ್ರಮ ಅರ್ಹ ಎಲ್ಲ ಮಕ್ಕಳಿಗೆ ತಲುಪಲಿ : ಎಂ. ಕನಗವಲ್ಲಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಜು. 18 ರಿಂದ ಜಿಲ್ಲೆಯಲ್ಲಿ 3ನೇ ಸುತ್ತಿನ ವಿಶೇಷ ಇಂದ್ರಧನುಷ್ ಅಭಿಯಾನ ಇಂದ್ರಧನುಷ್ ಲಸಿಕಾ ಕಾರ್ಯಕ್ರಮ ಅರ್ಹ ಎಲ್ಲ ಮಕ್ಕಳಿಗೆ ತಲುಪಲಿ : ಎಂ. ಕನಗವಲ್ಲಿ ಲಿಂಕ್ ವಿಳಾಸ https://dekalungi.blogspot.com/2018/07/18-3.html

Subscribe to receive free email updates:

0 Response to "ಜು. 18 ರಿಂದ ಜಿಲ್ಲೆಯಲ್ಲಿ 3ನೇ ಸುತ್ತಿನ ವಿಶೇಷ ಇಂದ್ರಧನುಷ್ ಅಭಿಯಾನ ಇಂದ್ರಧನುಷ್ ಲಸಿಕಾ ಕಾರ್ಯಕ್ರಮ ಅರ್ಹ ಎಲ್ಲ ಮಕ್ಕಳಿಗೆ ತಲುಪಲಿ : ಎಂ. ಕನಗವಲ್ಲಿ"

ಕಾಮೆಂಟ್‌‌ ಪೋಸ್ಟ್‌ ಮಾಡಿ