ಶೀರ್ಷಿಕೆ : ಕೃಷಿ ಉದ್ಯೋಗ ತರಬೇತಿಗಾಗಿ ಅರ್ಜಿ ಆಹ್ವಾನ
ಲಿಂಕ್ : ಕೃಷಿ ಉದ್ಯೋಗ ತರಬೇತಿಗಾಗಿ ಅರ್ಜಿ ಆಹ್ವಾನ
ಕೃಷಿ ಉದ್ಯೋಗ ತರಬೇತಿಗಾಗಿ ಅರ್ಜಿ ಆಹ್ವಾನ
ಕೊಪ್ಪಳ ಜು. 10 (ಕರ್ನಾಟಕ ವಾರ್ತೆ): ಉತ್ತರ ಕನ್ನಡ ಜಿಲ್ಲೆ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯು ಹೈದರಾಬಾದಿನ ನ್ಯಾಷನ್ ಇನ್ಸ್ಟಿಟ್ಯೂಷನ್ ಆಫ್ ಅಗ್ರಿಕಲ್ಚರಲ್ ಎಕ್ಸ್ಟೆಂಷನ್ ಮ್ಯಾನೆಜ್ಮೆಂಟ್ (ಎಂ.ಎ.ಎನ್.ಎ.ಜಿ.ಇ) ಇವರ ಸಹಯೋಗದೊಂದಿಗೆ ಎರಡು ತಿಂಗಳ ಅಗ್ರಿಕ್ಲಿನಿಕ್ & ಅಗ್ರಿ ಬಿಜ್ನೆಸ್ ಎಂಬ ತರಬೇತಿಯನ್ನು ಆಗಸ್ಟ್ ತಿಂಗಳಿನಲ್ಲಿ ಹಮ್ಮಿಕೊಂಡಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೃಷಿ ಅಥವಾ ತತ್ಸಮಾನ ಪದವಿಗಳಾದ ಡಿಪ್ಲೋಮಾ, ಪದವಿ ಹಾಗೂ ಸ್ನಾತಕೋತ್ತರ ಪದವಿ ಹೊಂದಿರಬೇಕು. 2017 ಅಥವಾ ಅದಕ್ಕಿಂತ ಪೂರ್ವದಲ್ಲಿ ಪದವಿ ಹೊಂದಿರಬೇಕು. "ಕೃಷಿಕರು ಸುಭದ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳುವ ಮೂಲಕ ಸ್ವಾವಲಂಬಿಗಳಾಗುವುದು" ಎಂಬುವುದೇ ತರಬೇತಿಯ ಮುಖ್ಯ ಉದ್ದೇಶವಾಗಿದೆ. ತರಬೇತಿಯ ನಂತರ ಕೃಷಿಯಲ್ಲಿ ಸ್ವಾವಲಂಬನೆ ಹೊಂದಲು ಬೇಕಾದ ಬ್ಯಾಂಕ್ ನೆರವನ್ನು ಪಡೆಯಲು ಸಹಾಯ ಮಾಡಲಾಗುತ್ತದೆ. ತರಬೇತಿಯು ಊಟ ವಸತಿಯೊಂದಿಗೆ ಉಚಿತವಾಗಿದ್ದು, ತರಬೇತಿ ಪಡೆಯಲಿಚ್ಚಿಸುವವರು ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ, ಉದ್ಯೋಗ ವಿದ್ಯಾನಗರ, ದಾಂಡೇಲಿ ರಸ್ತೆ, ಹಳಿಯಾಳ (ಉತ್ತರ ಕರ್ನಾಟಕ ಜಿಲ್ಲೆ), ಈ ವಿಳಾಸಕ್ಕೆ ಕೂಡಲೇ ಸಂಪರ್ಕಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ದೂರವಾಣಿ ಸಂಖ್ಯೆ 9482188780, 9483485489 ಕ್ಕೆ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಕೃಷಿ ಉದ್ಯೋಗ ತರಬೇತಿಗಾಗಿ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಕೃಷಿ ಉದ್ಯೋಗ ತರಬೇತಿಗಾಗಿ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಕೃಷಿ ಉದ್ಯೋಗ ತರಬೇತಿಗಾಗಿ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/07/blog-post_51.html
0 Response to "ಕೃಷಿ ಉದ್ಯೋಗ ತರಬೇತಿಗಾಗಿ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ