ಶೀರ್ಷಿಕೆ : ಕೃಷಿ ಸಚಿವರ ಪ್ರವಾಸ ಕಾರ್ಯಕ್ರಮ
ಲಿಂಕ್ : ಕೃಷಿ ಸಚಿವರ ಪ್ರವಾಸ ಕಾರ್ಯಕ್ರಮ
ಕೃಷಿ ಸಚಿವರ ಪ್ರವಾಸ ಕಾರ್ಯಕ್ರಮ
ಕೊಪ್ಪಳ ಆ. 14 (ಕರ್ನಾಟಕ ವಾರ್ತೆ): ರಾಜ್ಯ ಕೃಷಿ ಸಚಿವರಾದ ಎನ್.ಹೆಚ್. ಶಿವಶಂಕರ ರೆಡ್ಡಿ ಅವರು ಆ. 17 ರಂದು ಒಂದು ದಿನದ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಬೆಳಿಗ್ಗೆ ಹೊಸಪೇಟೆಯಿಂದ ಹೊರಟು ಬೆಳಿಗ್ಗೆ 9-45 ಗಂಟೆಗೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಂಗಾಪೂರ ಗ್ರಾಮಕ್ಕೆ ಆಗಮಿಸಿ, ಬಾಡಿಗೆ ಆಧಾರಿತ ಕೃಷಿಯಂತ್ರಧಾರೆ ಸೇವಾ ಕೇಂದ್ರದ ಉದ್ಘಾಟನೆ ನೆರವೇರಿಸಿ ರೈತರೊಂದಿಗೆ ಚರ್ಚಿಸುವರು. 10-45 ಕ್ಕೆ ಗಂಗಾವತಿಗೆ ತೆರಳಿ ಕೃಷಿ ವಿಜ್ಞಾನ ಕೇಂದ್ರಕ್ಕೆ ಭೇಟಿ ಹಾಗೂ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು. 11-10 ಕ್ಕೆ ಹೇರೂರ ಗ್ರಾಮಕ್ಕೆ ತೆರಳಿ ಭತ್ತದಲ್ಲಿ ನೇರ ಕೂರಿಗೆ ಬಿತ್ತನೆ ಪ್ರಾತ್ಯಕ್ಷಿಕೆ ವೀಕ್ಷಿಸಲು ಭೇಟಿ ಹಾಗೂ ರೈತರೊಂದಿಗೆ ಚರ್ಚೆ, 11-40 ಕ್ಕೆ ಸುಳೆಕಲ್ನಲ್ಲಿ ಜಲಾಯನ ಕಾಮಗಾರಿ ವೀಕ್ಷಿಸಿ, ರೈತರೊಂದಿಗೆ ಚರ್ಚಿಸುವರು. ಮಧ್ಯಾಹ್ನ 12-30 ಗಂಟೆಗೆ ಕನಕಗಿರಿ ತಾಲೂಕಿಗೆ ತೆರಳಿ ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿದ ಕೃಷಿಹೊಂಡಗಳ ವೀಕ್ಷಣೆ ಹಾಗೂ ರೈತರೊಂದಿಗೆ ಚರ್ಚೆ ನಡೆಸುವರು. 1-30 ಕ್ಕೆ ಗಂಗಾವತಿಗೆ ಆಗಮಿಸುವರು. ನಂತರ ಮಧ್ಯಾಹ್ನ 2-15 ಕ್ಕೆ ರಾಯಚೂರು ಜಿಲ್ಲೆ ಸಿಂಧನೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಕೃಷಿ ಸಚಿವರ ಪ್ರವಾಸ ಕಾರ್ಯಕ್ರಮ
ಎಲ್ಲಾ ಲೇಖನಗಳು ಆಗಿದೆ ಕೃಷಿ ಸಚಿವರ ಪ್ರವಾಸ ಕಾರ್ಯಕ್ರಮ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಕೃಷಿ ಸಚಿವರ ಪ್ರವಾಸ ಕಾರ್ಯಕ್ರಮ ಲಿಂಕ್ ವಿಳಾಸ https://dekalungi.blogspot.com/2018/08/blog-post_21.html
0 Response to "ಕೃಷಿ ಸಚಿವರ ಪ್ರವಾಸ ಕಾರ್ಯಕ್ರಮ"
ಕಾಮೆಂಟ್ ಪೋಸ್ಟ್ ಮಾಡಿ