ಶೀರ್ಷಿಕೆ : ಕೊಪ್ಪಳ : ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಜನಾಂದೋಲನಕ್ಕೆ ಶಾಸಕರಿಂದ ಚಾಲನೆ
ಲಿಂಕ್ : ಕೊಪ್ಪಳ : ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಜನಾಂದೋಲನಕ್ಕೆ ಶಾಸಕರಿಂದ ಚಾಲನೆ
ಕೊಪ್ಪಳ : ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಜನಾಂದೋಲನಕ್ಕೆ ಶಾಸಕರಿಂದ ಚಾಲನೆ

ಕೊಪ್ಪಳ ಆ. 02 (ಕರ್ನಾಟಕ ವಾರ್ತೆ): ಕೊಪ್ಪಳ ತಾಲೂಕ ಪಂಚಾಯತ್ ವತಿಯಿಂದ ನಡೆಯಲಿರುವ "ಸ್ವಚ್ಛ ಸರ್ವೇಕ್ಷಣ ಗ್ರಾಮೀಣ" ಜನಾಂದೋಲನಕ್ಕೆ ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅವರು ಹಸಿರು ನಿಶಾನೆ ತೊರಿಸುವುದರ ಮೂಲಕ ಚಾಲನೆ ನೀಡಿದರು.
ತಾ.ಪಂ., ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಯೂನಿಸೆಫ್, ಸೇರಿದಂತೆ ತಾಲೂಕ ಮಟ್ಟದ ವಿವಿಧ ಇಲಾಖೆಗಳ ಸಹಯೋಗದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕೊಪ್ಪಳ ತಾಲೂಕಾ ಪಂಚಾಯತಿ ಕಚೇರಿ ಆವರಣದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅವರು, ಸ್ವಚ್ಛತೆಯ ಜಾಗೃತಿ, ಪ್ಲಾಸ್ಟಿಕ್ ಬಳಕೆ ನಿಷೇಧ, ಗ್ರಾಮದ ರಸ್ತೆ ಮತ್ತು ಚರಂಡಿ ಸ್ವಚ್ಛತೆ ಹಾಗೂ ಅದರ ಮಹತ್ವದ ಬಗ್ಗೆ ಮಾಹಿತಿ ನೀಡಿ ಕೊಪ್ಪಳ ತಾಲೂಕ ಮಟ್ಟದಲ್ಲಿ ಬರುವ ಎಲ್ಲಾ ಇಲಾಖೆಗಳು ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಪ್ರಶಸ್ತಿಗಾಗಿ ಶ್ರಮಿಸಿ ಎಂದು ಸಲಹೆ ನೀಡಿದರು.
ತಾ.ಪಂ. ಅಧ್ಯಕ್ಷ ಬಾಲಚಂದ್ರನ್, ಉಪಾಧ್ಯಕ್ಷೆ ಶಂಕ್ರಮ್ಮ ಉಪಲಾಪುರ, ನಗರಸಭೆ ಅಧ್ಯಕ್ಷ ಮಹೇಂದ್ರ ಚೋಪ್ರಾ ಸೇರಿದಂತೆ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಮೂರ್ತಿ ಹಾಗೂ ಇತರೆ ಅಧಿಕಾರಿ/ ಸಿಬ್ಬಂದಿ ವರ್ಗದವರು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಹೀಗಾಗಿ ಲೇಖನಗಳು ಕೊಪ್ಪಳ : ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಜನಾಂದೋಲನಕ್ಕೆ ಶಾಸಕರಿಂದ ಚಾಲನೆ
ಎಲ್ಲಾ ಲೇಖನಗಳು ಆಗಿದೆ ಕೊಪ್ಪಳ : ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಜನಾಂದೋಲನಕ್ಕೆ ಶಾಸಕರಿಂದ ಚಾಲನೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಕೊಪ್ಪಳ : ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಜನಾಂದೋಲನಕ್ಕೆ ಶಾಸಕರಿಂದ ಚಾಲನೆ ಲಿಂಕ್ ವಿಳಾಸ https://dekalungi.blogspot.com/2018/08/blog-post_4.html
0 Response to "ಕೊಪ್ಪಳ : ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಜನಾಂದೋಲನಕ್ಕೆ ಶಾಸಕರಿಂದ ಚಾಲನೆ"
ಕಾಮೆಂಟ್ ಪೋಸ್ಟ್ ಮಾಡಿ