ಶೀರ್ಷಿಕೆ : ವಿವಿ ಸಿಂಡಿಕೇಟ್ ಸದಸ್ಯರ ನಾಮನಿರ್ದೇಶನ
ಲಿಂಕ್ : ವಿವಿ ಸಿಂಡಿಕೇಟ್ ಸದಸ್ಯರ ನಾಮನಿರ್ದೇಶನ
ವಿವಿ ಸಿಂಡಿಕೇಟ್ ಸದಸ್ಯರ ನಾಮನಿರ್ದೇಶನ
ಕೊಪ್ಪಳ ಸೆ. 01 (ಕರ್ನಾಟಕ ವಾರ್ತೆ): ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರನ್ನಾಗಿ ಬಳ್ಳಾರಿ ಜಿಲ್ಲೆಯ ಒಬ್ಬರು ಹಾಗೂ ಕೊಪ್ಪಳ ಜಿಲ್ಲೆಯ ಮೂರು ಪ್ರಾಶುಂಪಾಲರನ್ನು ನಾಮನಿರ್ದೇಶನ ಮಾಡಲಾಗಿದೆ ಎಂದು ವಿ.ಎಸ್.ಕೆ.ಯು.ಬಿ. ಕುಲಸಚಿವರು ತಿಳಿಸಿದ್ದಾರೆ.
ಕರ್ನಾಟಕ ವಿಶ್ವವಿದ್ಯಾಲಯಗಳ ಅಧಿನಿಯಮದಡಿ ಬಳ್ಳಾರಿಯ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಪ್ರಥಮ ದರ್ಜೆ ಸ್ವಾಯತ್ತ ಮಹಾವಿದ್ಯಾಲಯದ ಪ್ರಾಶುಂಪಾಲ ಪ್ರೊ. ಅಬ್ದುಲ್ ಮುತಾಲಿಬ್, ಕೊಪ್ಪಳ ಜಿಲ್ಲೆಯ ಗವಿಸಿದ್ದೇಶ್ವರ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದ ಪ್ರಾಶುಂಪಾಲ ಪ್ರೋ. ಎಂ.ಎಸ್. ದಾದ್ಮಿ, ಕುಕನೂರಿನ ಅಂದಾನಪ್ಪ ಹೊಸಮನಿ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದ ಪ್ರಾಶುಂಪಾಲರಾದ ರೂಪಾ ದೇಸಾಯಿ ಮತ್ತು ಕೊಪ್ಪಳದ ರಾಜೀವಗಾಂಧಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಶುಂಪಾಲ ವಿನೋದ್ ಹುಲಿ ಅವರನ್ನು ಆ. 27 ರಿಂದ ಅನ್ವಯವಾಗುವಂತೆ ಒಂದು ವರ್ಷದ ಅವಧಿಗೆ ಅಥವಾ ಅವರ ನಿವೃತ್ತಿ ದಿನಾಂಕದವರೆಗೆ (ಯಾವುದು ಮೊದಲು ಘಟಿಸುವುದೋ ಅಲ್ಲಿಯವರೆಗೆ) ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ವಿವಿ ಸಿಂಡಿಕೇಟ್ ಸದಸ್ಯರ ನಾಮನಿರ್ದೇಶನ
ಎಲ್ಲಾ ಲೇಖನಗಳು ಆಗಿದೆ ವಿವಿ ಸಿಂಡಿಕೇಟ್ ಸದಸ್ಯರ ನಾಮನಿರ್ದೇಶನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ವಿವಿ ಸಿಂಡಿಕೇಟ್ ಸದಸ್ಯರ ನಾಮನಿರ್ದೇಶನ ಲಿಂಕ್ ವಿಳಾಸ https://dekalungi.blogspot.com/2018/09/blog-post_77.html
0 Response to "ವಿವಿ ಸಿಂಡಿಕೇಟ್ ಸದಸ್ಯರ ನಾಮನಿರ್ದೇಶನ"
ಕಾಮೆಂಟ್ ಪೋಸ್ಟ್ ಮಾಡಿ