News and Photo Date: 30-4-2019

News and Photo Date: 30-4-2019 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು News and Photo Date: 30-4-2019, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : News and Photo Date: 30-4-2019
ಲಿಂಕ್ : News and Photo Date: 30-4-2019

ಓದಿ


News and Photo Date: 30-4-2019

ಚಿಂಚೋಳಿ ವಿಧಾನಸಭಾ ಉಪಚುನಾವಣೆ:
**************************************
27 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧ
***************************************
ಕಲಬುರಗಿ,ಏಪ್ರಿಲ್.30.(ಕ.ವಾ.). 42-ಚಿಂಚೋಳಿ (ಪ.ಜಾ.) ವಿಧಾನಸಭಾ ಕ್ಷೇತ್ರಕ್ಕೆ 2019ರ ಮೇ 19ರಂದು ನಡೆಯುವ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ನಾಮಪತ್ರಗಳ ಪರಿಶೀಲನಾ ಕಾರ್ಯವು ಮಂಗಳವಾರ ಜರುಗಿತು. ನಾಮಪತ್ರಗಳ ಪರಿಶೀಲನೆ ನಡೆಸಿದ ನಂತರ ಎಲ್ಲ 27 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಚಿಂಚೋಳಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಸೋಮಶೇಖರ ಎಸ್.ಜಿ. ಅವರು ತಿಳಿಸಿದ್ದಾರೆ.
ನಾಮಪತ್ರ ಹಿಂದಕ್ಕೆ ಪಡೆಯಲು ಮೇ 2 ರಂದು ಕೊನೆಯ ದಿನವಾಗಿದೆ. ಮೇ 23ರಂದು ಮತ ಎಣಿಕೆ ನಡೆಯಲಿದೆ.
ನಾಮಪತ್ರ ಕ್ರಮಬದ್ಧಗೊಂಡ ಅಭ್ಯರ್ಥಿಗಳ ಹೆಸರು ಹಾಗೂ ಪಕ್ಷದ ವಿವರ ಇಂತಿದೆ.
ಕ್ರ.ಸಂ. ಅಭ್ಯರ್ಥಿಯ ಹೆಸರು ಪಕ್ಷ
01 ಅವಿನಾಶ ಉಮೇಶ ಭಾರತೀಯ ಜನತಾ ಪಕ್ಷ
02 ಗೌತಮ ಬಕ್ಕಪ್ಪ ಬಹುಜನ ಸಮಾಜ ಪಕ್ಷ
03 ಸುಭಾಷ ವಿ. ರಾಠೋಡ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್
04 ದೀಪಕ ಗಂಗಾರಾಮ ಹಿಂದೂಸ್ತಾನ ಜನತಾ ಪಾರ್ಟಿ
05 ಮಾರುತಿ ಭೀಮಶಪ್ಪ ಬಹುಜನ ಮುಕ್ತಿ ಪಾರ್ಟಿ
06 ವಿಜಯ ಗೋವಿಂದ ಜಾಧವ ಸರ್ವ ಜನತಾ ಪಾರ್ಟಿ
07 ಸಂಜಯ ಕುಮಾರ ರೇವಣಸಿದ್ದಪ್ಪ ಅಖಿಲ ಭಾರತೀಯ ಮುಸ್ಲಿಂ ಲೀಗ್ ಸೆಕ್ಯೂಲರ್
08 ಗುರುಶಾಂತ ಮಲ್ಲಪ್ಪ ಪಟ್ಟೇದಾರ್ ಪಕ್ಷೇತರ
09 ತಿಪ್ಪಣ್ಣ ಭೀಮಶಾ ಒಡೆಯರಾಜ್ ಪಕ್ಷೇತರ
10 ಕೆ. ದೀಪಾ ಗಣಪತರಾವ ಪಕ್ಷೇತರ
11 ನಾಗೇಂದ್ರಪ್ಪ ಬಸಪ್ಪ ಪಕ್ಷೇತರ
12 ಪ್ರದೀಪಕುಮಾರ ಶಂಕ್ರಪ್ಪ ಪಕ್ಷೇತರ
13 ಪ್ರವೀಣಕುಮಾರ ಧೂಳಪ್ಪ ಬೆಳ್ಳುಂಡಗಿ ಪಕ್ಷೇತರ
14 ಬಸವರಾಜ ಮಲ್ಲಯ್ಯ ಪಕ್ಷೇತರ
15 ಭಾಗ್ಯ ಸಂತೋಷ ಪಕ್ಷೇತರ
16 ಮಲ್ಲಿಕಾರ್ಜುನ ನರಸಿಂಗ್‍ರಾವ ಪಕ್ಷೇತರ
17 ರಮೇಶ ಭೀಮಸಿಂಗ್ ಪಕ್ಷೇತರ
18 ರಾಜೇಂದ್ರಪ್ರಸಾದ ಸಾಯಬಣ್ಣ ಪಕ್ಷೇತರ
19 ವಿಶ್ವೇಶ್ವರಯ್ಯ ತುಳಜಾರಾಮ ಭೋವಿ ಪಕ್ಷೇತರ
20 ಶಾಮರಾವ ಗಂಗಾರಾಮ ಪಕ್ಷೇತರ
21 ಶಾಮರಾವ ಚಂದ್ರಪ್ಪ ಪಕ್ಷೇತರ
22 ಶಾಮರಾವ ಮಲ್ಲೇಶಪ್ಪ ಪಕ್ಷೇತರ
23 ಶಿವಕುಮಾರ ಖತಲಪ್ಪ ಕೊಲ್ಲೂರ ಪಕ್ಷೇತರ
24 ಶಿವಕುಮಾರ ಶಂಕರ ಪಕ್ಷೇತರ
25 ಸಂತೋಷ ಧನಸಿಂಗ್ ಪಕ್ಷೇತರ
26 ಹನುಮಂತ ರಾಮನಾಯ್ಕ ಎಂ.ಬಿ. ಪಕ್ಷೇತರ
27 ಹರಿಸಿಂಗ್ ರಾಮಜಿ ಪಕ್ಷೇತರ
ಮೇ 1 ರಂದು ಕಾನೂನು ಅರಿವು-ನೆರವು ಕಾರ್ಯಕ್ರಮ
***********************************************
ಕಲಬುರಗಿ,ಏ.30.(ಕ.ವಾ)-ಕಲಬುರಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ನ್ಯಾಯಾವಾದಿಗಳ ಸಂಘ, ಮೆಹನತ್ ಕಟ್ಟಡ ಕಾರ್ಮಿಕ ಯುನಿಯನ್, ಸಹಾರಾ ಸೇವಾ ಸಂಸ್ಥೆ ಕಲಬುರಗಿ ಮತ್ತು ಹರಸೂರ ಗ್ರಾಮ ಪಂಚಾಯತಿ ಇವುಗಳ ಸಂಯುಕ್ತಾಶ್ರಯದಲ್ಲಿ “ಅಂತರರಾಷ್ಟ್ರೀಯ ಕಾರ್ಮಿಕ ದಿನಾಚರಣೆ” ಅಂಗವಾಗಿ ಅಸಂಘಟಿತ ಕಾರ್ಮಿಕರಿಗಾಗಿ”ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಬುಧವಾರ ಮೇ 1 ರಂದು ಬೆಳಿಗ್ಗೆ 10 ಗಂಟೆಗೆ ಹರಸೂರ ಕೆರೆ ಸಮೀಪದಲ್ಲಿ (ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿ ಸ್ಥಳದಲ್ಲಿ) ಹಮ್ಮಿಕೊಳ್ಳಲಾಗಿದೆ.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಆರ್. ಮಾಣಿಕ್ಯ ಅವರು ಈ ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸುವರು. ಹರಸೂರ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿರಾಜ್ ಪಟೇಲ್ ಖಾಜಾ ಪಟೇಲ್ ಕಾರ್ಯಕ್ರಮದ ಅಧ್ಯಕ್ಷತೆವಹಿಸುವರು.
ನ್ಯಾಯವಾದಿಗಳ ಸಂಘದ ಅಧ್ಯಕ್ಷ ಅರುಣಕುಮಾರ ಬಿ.ಕಿಣ್ಣಿ, ಕಲಬುರಗಿ ವಿಭಾಗದ ಸಹಾಯಕ ಕಾರ್ಮಿಕ ಆಆಯುಕ್ತ ಶ್ರೀಹರಿ ದೇಶಪಾಂಡೆ, ಹರಸೂರ ಗ್ರಾಮ ಪಂಚಾಯಿತಿ ಪಿ.ಡಿ.ಓ. ಆನಂದಕುಮಾರ ಎಸ್.ದೊಡ್ಡಮನಿ, ಸಹಾರ ಸೇವಾ ಸಂಸ್ಥೆಯ ನಿರ್ದೇಶಕ ಮಸ್ತಾನ ಬಿರಾದಾರ, ಮಹನತ್ ಕಟ್ಟಡ ಕಾರ್ಮಿಕ ಯೂನಿಯನ್ ಅಧ್ಯಕ್ಷ ಶೇಖ ಸಲಾವೋದ್ದಿನ, ಸ್ಥಳೀಯ ಮುಖಂಡರು ಹಾಗೂ ಪ್ರಗತಿಪರ ಚಿಂತಕ ಮೆಹರಾಜುದ್ದೀನ್ ಪಟೇಲ್ ತಾವರಗೇರಾ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಹಿರಿಯ ಕಾರ್ಮಿಕ ನಿರೀಕ್ಷಕ ರವೀಂದ್ರಕುಮಾರ ಅವರು ಕಟ್ಟಡ ಕಾರ್ಮಿಕರು ಮತ್ತು ಇತರೆ ಕಾರ್ಮಿಕರ ನೋಂದಣಿ ಮತ್ತು ಸೌಲಭ್ಯಗಳ ಕುರಿತು ಹಾಗೂ ಎನ್.ಸಿ.ಎಲ್.ಪಿ. ಯೋಜನಾ ನಿರ್ದೇಶಕ ಸಂತೋಷ ಕುಲಕರ್ಣಿ ಅವರು ಕಾರ್ಮಿಕ ಕಾಯ್ದೆ ಕುರಿತು ವಿಶೇಷ ಉಪನ್ಯಾಸ ನೀಡುವರು.
ಮಾನಸಿಕ ರೋಗಿಗಳ ತಪಾಸಣಾ ಶಿಬಿರ
***********************************
ಕಲಬುರಗಿ,ಏ.30.(ಕ.ವಾ)-ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಿಂದ ಮನೋಚೈತನ್ಯ ಕಾರ್ಯಕ್ರಮದಡಿ 2019ರ ಮೇ ಮಾಹೆಯಲ್ಲಿ ಕಲಬುರಗಿ ಜಿಲ್ಲೆಯ ತಾಲೂಕುಗಳ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮಾನಸಿಕ ರೋಗಿಗಳ ತಪಾಸಣಾ ಶಿಬಿರವನ್ನು ಕೆಳಕಂಡ ದಿನಾಂಕಗಳಂದು ನಡೆಸಲಾಗುವುದು ಎಂದು ಕಲಬುರಗಿ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿಗಳು ತಿಳಿಸಿದ್ದಾರೆ. ಶಿಬಿರದ ದಿನಾಂಕ, ಸ್ಥಳ ಮತ್ತು ಪಾಲ್ಗೊಳ್ಳುವ ತಜ್ಞ ಮನೋವೈದ್ಯರುಗಳ ವಿವರ ಇಂತಿದೆ.
ಮೇ 4 ರಂದು: ಕಲಬುರಗಿ ನಿರಾಶ್ರಿತ ಪರಿಹಾರ ಕೇಂದ್ರ-ಕಲಬುರಗಿ ಕೆ.ಬಿ.ಎನ್. ಆಸ್ಪತ್ರೆಯ ಮನೋವೈದ್ಯ ಡಾ. ಅಮೋಲ ಪತಂಗೆ. ಮೇ 8 ರಂದು: ಆಳಂದ ತಾಲೂಕು ಆಸ್ಪತ್ರೆ-ಕಲಬುರಗಿ ಕೆ.ಬಿ.ಎನ್. ಆಸ್ಪತ್ರೆಯ ಮನೋವೈದ್ಯ ಡಾ. ಅಮೋಲ ಪತಂಗೆ. ಮೇ 10 ರಂದು: ಅಫಜಲಪುರ ತಾಲೂಕು ಆಸ್ಪತ್ರೆ-ಕಲಬುರಗಿ ಕೆ.ಬಿ.ಎನ್. ಆಸ್ಪತ್ರೆಯ ಮನೋವೈದ್ಯ ಡಾ. ಅಮೋಲ ಪತಂಗೆ. ಮೇ 14 ರಂದು: ಚಿಂಚೋಳಿ ತಾಲೂಕು ಆಸ್ಪತ್ರೆ-ಕಲಬುರಗಿ ಜಿಲ್ಲಾ ಆಸ್ಪತ್ರೆಯ ಮನೋವೈದ್ಯ ಡಾ|| ವಿಜಯೇಂದ್ರ.
ಮೇ 15 ರಂದು: ಆಳಂದ (ಎನ್.ಜಿ.ಓ.) ಬುದ್ಧಿಮಾಂದ್ಯ ಶಾಲೆ- ಕಲಬುರಗಿ ಕೆ.ಬಿ.ಎನ್. ಆಸ್ಪತ್ರೆಯ ಮನೋವೈದ್ಯ ಡಾ. ಮುನಾವರ ಹುಸೇನ್. ಮೇ 17 ರಂದು: ಜೇವರ್ಗಿ ತಾಲೂಕು ಆಸ್ಪತ್ರೆ- ಕಲಬುರಗಿ ಕೆ.ಬಿ.ಎನ್. ಆಸ್ಪತ್ರೆಯ ಮನೋವೈದ್ಯ ಡಾ. ಮುನಾವರ ಹುಸೇನ್. ಮೇ 18 ರಂದು: ದೇವಲಗಾಣಗಾಪುರ ಸರ್ಕಾರಿ ಆರೋಗ್ಯ ಕೇಂದ್ರ-ಕಲಬುರಗಿ ಬಸವೇಶ್ವರ ಆಸ್ಪತ್ರೆಯ ಮನೋವೈದ್ಯ ಡಾ. ರಾಹುಲ ಮಂದಕನಳ್ಳಿ. ಮೇ 21 ರಂದು: ಚಿತ್ತಾಪುರ ತಾಲೂಕು ಆಸ್ಪತ್ರೆ- ಕಲಬುರಗಿ ಕೆ.ಬಿ.ಎನ್. ಆಸ್ಪತ್ರೆಯ ಮನೋವೈದ್ಯ ಡಾ. ಅಮೋಲ ಪತಂಗೆ. ಮೇ 24 ರಂದು: ಕಲಬುರಗಿ ರಾಜ್ಯ ಮಹಿಳಾ ನಿಲಯ- ಕಲಬುರಗಿ ಕೆ.ಬಿ.ಎನ್. ಆಸ್ಪತ್ರೆಯ ಮನೋವೈದ್ಯ ಡಾ. ಅಮೋಲ ಪತಂಗೆ.
ಮೇ 27 ರಂದು: ಕಲಬುರಗಿ ಪ್ರಗತಿ ಕಾಲೋನಿಯ ಬಾಲಕರ ಬಾಲಮಂದಿರ-ಕಲಬುರಗಿ ಜಿಲ್ಲಾ ಆಸ್ಪತ್ರೆಯ ಮನೋವೈದ್ಯ ಡಾ|| ವಿಜಯೇಂದ್ರ. ಮೇ 28 ರಂದು: ಸೇಡಂ ತಾಲೂಕು ಆಸ್ಪತ್ರೆ- ಕಲಬುರಗಿ ಕೆ.ಬಿ.ಎನ್. ಆಸ್ಪತ್ರೆಯ ಮನೋವೈದ್ಯ ಡಾ. ಮುನಾವರ ಹುಸೇನ್. ಮೇ 29 ರಂದು: ಕಲಬುರಗಿ ದರ್ಗಾ-ಕಲಬುರಗಿ ಕೆ.ಬಿ.ಎನ್. ಆಸ್ಪತ್ರೆಯ ಮನೋವೈದ್ಯ ಡಾ. ಮುನಾವರ ಹುಸೇನ್.
ಮೇಲ್ಕಂಡ ದಿನಾಂಕಗಳಂದು ಮನೋವೈದ್ಯರು ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ಮಾನಸಿಕ ರೋಗದಿಂದ ಬಳಲುತ್ತಿರುವವರು ಸದರಿ ದಿನದಂದು ಮನೋವೈದ್ಯರ ಹತ್ತಿರ ತಪಾಸಣೆ ಮತ್ತು ಚಿಕಿತ್ಸಾ ಸೌಲಭ್ಯ ಪಡೆಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಮೊರಾರ್ಜಿ ದೇಸಾಯಿ/ಏಕಲವ್ಯ ಪದವಿ ಪೂರ್ವ ಕಾಲೇಜು:
**************************************************
ಪ್ರಥಮ ಪಿಯುಸಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
*****************************************
ಕಲಬುರಗಿ,ಏ.30.(ಕ.ವಾ)-ಪ್ರಸಕ್ತ 2019-20ನೇ ಸಾಲಿನಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಳಕಂಡ ಮೊರಾರ್ಜಿ ದೇಸಾಯಿ ಹಾಗೂ ಏಕಲವ್ಯ ಮಾದರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಥಮ ಪಿ.ಯು.ಸಿ. (ವಿಜ್ಞಾನ ವಿಭಾಗ) ಪ್ರವೇಶಕ್ಕಾಗಿ ಎಸ್.ಎಸ್.ಎಲ್.ಸಿ. ಪಾಸಾದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಚಿತ್ತಾಪುರ ತಾಲೂಕಿನ ಗುಂಡಗುರ್ತಿ ಮೊರಾರ್ಜಿ ದೇಸಾಯಿ ಪದವಿಪೂರ್ವ ಕಾಲೇಜು ಹಾಗೂ ಕೊಂಚೂರ ಏಕಲವ್ಯ ಮಾದರಿ ಪದವಿ ಪೂರ್ವ ಕಾಲೇಜು, ಅಫಜಲಪುರ ತಾಲೂಕಿನ ಅರ್ಜುಣಗಿ ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜು ಹಾಗೂ ಚಿತ್ತಾಪುರ ತಾಲೂಕಿನ ಚಿತ್ತಾಪುರ ಟೌನ್ ನಾಗಾವಿ ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರವೇಶ ಪಡೆಯಬಹುದಾಗಿದೆ.
ಪದವಿಪೂರ್ವ ವಿಜ್ಞಾನ ವಸತಿ ಕಾಲೇಜುಗಳಲ್ಲಿ ಸೇರಬಯಲಿಚ್ಚಿಸುವ ಅರ್ಹ ವಿದ್ಯಾರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು 2019ರ ಮೇ 1 ರಿಂದ ಮೇಲ್ಕಂಡ ಆಯಾ ವಸತಿ ಕಾಲೇಜುಗಳಿಂದ ಪಡೆದು ಭರ್ತಿ ಮಾಡಿ ಅರ್ಜಿಯೊಂದಿಗೆ ಅವಶ್ಯಕ ದಾಖಲಾತಿಗಳನ್ನು ಲಗತ್ತಿಸಿ 2019ರ ಮೇ 15ರೊಳಗಾಗಿ ಅದೇ ಪದವಿಪೂರ್ವ ಕಾಲೇಜುಗಳಲ್ಲಿ ಸಲ್ಲಿಸಬೇಕು. ಈ ಕಾಲೇಜುಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪಿಯುಸಿ (ವಿಜ್ಞಾನ) (ಪಿಸಿಎಂಬಿ ಆಂಡ್ ಪಿಸಿಎಂಸಿ) ಪ್ರಥಮ ಹಾಗೂ ದ್ವಿತೀಯ ವರ್ಷದ ಶಿಕ್ಷಣವನ್ನು ಕಲ್ಪಿಸಲಾಗುತ್ತದೆ.
ಸೀಟುಗಳ ಮೀಸಲಾತಿ, ವಿದ್ಯಾರ್ಥಿಗಳ ಪೋಷಕರ ಆದಾಯ ಮಿತಿ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಮನ್ವಯಾಧಿಕಾರಿಗಳು ಮತ್ತು ಆಯಾ ಕಾಲೇಜು ಪ್ರಾಂಶುಪಾಲರಿಂದ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9886611971, 9620528262, 9945997714, 8095534843ಗಳಿಗೆ ಸಂಪರ್ಕಿಸಲು ಕೋರಲಾಗಿದೆ.
ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿ: ನೇರ ಆಯ್ಕೆ ಮೂಲಕ ಪ್ರವೇಶ
*********************************************************
ಕಲಬುರಗಿ,ಏ.30.(ಕ.ವಾ)-ಮೈಸೂರಿನ ಪ್ಲಾಸ್ಟಿಕ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ/ ಕಾಲೇಜಿನಲ್ಲಿ (ಸಿಪೆಟ್)ಯಲ್ಲಿ 2019-20ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ, ಯುವತಿಯರಿಗೆ ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡಲಾಗುತ್ತಿದೆ. ಇದಕ್ಕಾಗಿ ಅರ್ಹ ಯುವಕ, ಯುವತಿಯರು ಅವಶ್ಯಕ ಮೂಲ ದಾಖಲಾತಿಗಳೊಂದಿಗೆ 2019ರ ಮೇ 3ರ ಸಂಜೆ 5 ಗಂಟೆಯೊಳಗಾಗಿ ಹಾಜರಾಗಿ ನೇರ ಅಯ್ಕೆ ಮೂಲಕ ಪ್ರವೇಶ ಪಡೆಯಬಹುದಾಗಿದೆ ಎಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.
ಈ ತರಬೇತಿ ಪಡೆಯಲು ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ ಹಾಗೂ ಡಿಗ್ರಿ ಹೊಂದಿರಬೇಕು. ವಯೋಮಿತಿ 18 ರಿಂದ 35 ವರ್ಷದೊಳಗಿರಬೇಕು. ತರಬೇತಿ ಅವಧಿ 6 ತಿಂಗಳು ಇದ್ದು, ತರಬೇತಿ ಅವಧಿಯಲ್ಲಿ ಉಚಿತ ಊಟ, ವಸತಿ ಹಾಗೂ ಮಾಸಿಕ 500ರೂ.ಗಳ ಶಿಷ್ಯವೇತನ ನೀಡಲಾಗುತ್ತದೆ. ಭರ್ತಿ ಮಾಡಿದ ಅರ್ಜಿಯೊಂದಿಗೆ ಅವಶ್ಯಕ ದಾಖಲೆಗಳಾದ ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐಟಿಐ., ಡಿಗ್ರಿ ಪಾಸಾದ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣಪತ್ರ (2.5 ಲಕ್ಷ ರೂ. ದೊಳಗಿರಬೇಕು), 5 ಭಾವಚಿತ್ರಗಳು, ಆಧಾರ ಕಾರ್ಡ ಮೂಲ ದಾಖಲಾತಿಗಳೊಂದಿಗೆ ಹಾಜರಾಗಿ ನೇರ ಅಯ್ಕೆ ಮೂಲಕ ಪ್ರವೇಶ ಪಡೆಯಬಹುದಾಗಿದೆ. ಕೆಲವೇ ಸೀಟುಗಳು ಉಳಿದಿದ್ದು, ಮೊದಲ ಬಂದವರಿಗೆ ಆದ್ಯತೆ ನೀಡಲಾಗುತ್ತದೆ. ಪ್ರತಿ ಜಿಲ್ಲೆಯಿಂದ 100 ಅಭ್ಯರ್ಥಿಗಳನ್ನು ನೇರ ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಹೆಚ್ಚಿನ ಮಾಹಿತಿಗಾಗಿ ಸಿ.ಐ.ಪಿ.ಇ.ಟಿ., 437/ಎ, ಹೆಬ್ಬಾಳ ಇಂಡಸ್ಟ್ರೀಯಲ್ ಏರಿಯಾ, ಮೈಸೂರು-570016 ವಿಳಾಸಕ್ಕೆ ಹಾಗೂ ದೂರವಾಣಿ ಸಂಖ್ಯೆ 0821-2510618, 2511903, ಮೊಬೈಲ್ ಸಂಖ್ಯೆ 9632688884, 9480253024 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.
ಕಾಣೆಯಾದ ಮಹಿಳೆಯ ಪತ್ತೆಗೆ ಮನವಿ
*********************************
ಕಲಬುರಗಿ,ಏ.30.(ಕ.ವಾ)-ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ನಿರಗುಡಿ ಗ್ರಾಮದ 30 ವರ್ಷದ ಕೊಂಡಾಬಾಯಿ ಗಂಡ ಮಲ್ಲಿನಾಥ ಪಾತ್ರೆ ಇವರು 2018ರ ಆಗಸ್ಟ್ 20 ರಂದು ಬೆಳಿಗ್ಗೆ 10 ಗಂಟೆಗೆ ಮನೆಯಿಂದ ತವರು ಮನೆಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದವಳು ಈವರೆಗೆ ಮರಳಿ ಮನೆಗೆ ಬಾರದೇ ಕಾಣೆಯಾಗಿರುತ್ತಾಳೆ ಎಂದು ಆಳಂದ ಪೊಲೀಸ್ ಠಾಣೆಯ ಆರಕ್ಷಕ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕುರಿತು ಆಳಂದ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ. 93/2019 ಕಲಂ ರನ್ವಯ ಪ್ರಕರಣ ದಾಖಲಿಸಲಾಗಿದೆ. ಐದು ಅಡಿ ಎತ್ತರ, ಸಾದಾ ಕಪ್ಪು ಮೈಬಣ್ಣ, ತಲೆಯ ಮೇಲೆ ಕಪ್ಪು ಕೂದಲು ಇದ್ದು, ಹಳದಿ ಬಣ್ಣದ ಹೂವುಳ್ಳ ಸೀರೆ ಮತ್ತು ಬಿಳಿ ಬಣ್ಣದ ಜಂಪರ್ ಧರಿಸಿರುತ್ತಾಳೆ. ಕನ್ನಡ, ಹಿಂದಿ ಹಾಗೂ ಮರಾಠಿ ಭಾಷೆ ಮಾತನಾಡುತ್ತಾಳೆ.
ಕಾಣೆಯಾದ ಮಹಿಳೆಯ ಸುಳಿವು ಸಿಕ್ಕಲ್ಲಿ ಕೂಡಲೇ ಕಲಬುರಗಿ ಪೊಲೀಸ್ ಅಧೀಕ್ಷರ ಮೊಬೈಲ್ ಸಂಖ್ಯೆ 9480803501, ಆಳಂದ ಪೊಲೀಸ್ ಉಪಾಧೀಕ್ಷಕರ ಮೊಬೈಲ್ ಸಂಖ್ಯೆ 948080352, ಆಳಂದ ಆರಕ್ಷಕ ವೃತ್ತ ನಿರೀಕ್ಷಕರ ಮೊಬೈಲ್ ಸಂಖ್ಯೆ 9480803539 ಹಾಗೂ ಆಳಂದ ಪೊಲೀಸ್ ಠಾಣೆಯ ಪಿ.ಎಸ್.ಐ. ಇವರ ಮೊಬೈಲ್ ಸಂಖ್ಯೆ 9480803563 ಗಳಿಗೆ ತಿಳಿಸಬೇಕೆಂದು ಅವರು ತಿಳಿಸಿದ್ದಾರೆ.
ಮೇ 2ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
******************************************
ಕಲಬುರಗಿ,ಏ.30.(ಕ.ವಾ.)-ಜೆಸ್ಕಾಂ ಕಲಬುರಗಿ ನಗರ ಕಾರ್ಯ ಮತ್ತು ಪಾಲನೆ ನಗರ ವಿಭಾಗದ ವ್ಯಾಪ್ತಿಯಲ್ಲಿ ಬರುವ 11ಕೆ.ವಿ. ರಾಮಮಂದಿರ ಫೀಡರ ವ್ಯಾಪ್ತಿಯಲ್ಲಿ ನಿರ್ವಹಣಾ ಕಾರ್ಯಕೈಗೊಂಡಿರುವ ಹಿನ್ನೆಲೆಯಲ್ಲಿ ಗುರುವಾರ ಮೇ 2ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಜೆಸ್ಕಾಂನೊಂದಿಗೆ ಸಹಕರಿಸುವಂತೆ ವಿಭಾಗದ ಕಾರ್ಯನಿರ್ವಾಹಕ ಇಂಜಿನೀಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
11ಕೆ.ವಿ. ರಾಮಮಂದಿರ ಫೀಡರ್: ರಾಮ ಮಂದಿರ, ಸಿ.ಬಿ.ಐ. ಕಾಲೋನಿ, ಸದಾಶಿವ ನಗರ, ನವಜೀವನ ಸೊಸೈಟಿ, ಕಲ್ಮಣಕರ್ ಲೇಔಟ್, ಕರುಣೇಶ್ವರ ನಗರ ನವಣಿ ಲೇಔಟ್, ಸಂಗಮೇಶ್ವರ ಲೇಔಟ್, ದೇವಾನಗರ, ಓಜಾ ಕಾಲೋನಿ, ವಿವೇಕಾನಂದ ಕಾಲೋನಿ, ಲಕ್ಷ್ಮೀನಾರಾಯಣ ಲೇಔಟ್, ಶಿವ ಶಕ್ತಿ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ಎ.ಸಿ.ಬಿ. ಅಧಿಕಾರಿಗಳಿಂದ ಜನಸಂಪರ್ಕ ಸಭೆ
****************************************
ಕಲಬುರಗಿ,ಏಪ್ರಿಲ್.30.(ಕ.ವಾ.)-ಕಲಬುರಗಿ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಅಧಿಕಾರಿಗಳು 2019ರ ಮೇ ಮಾಹೆಯಲ್ಲಿ ಆಯಾ ದಿನಾಂಕಗಳಂದು ಬೆಳಗಿನ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಜಿಲ್ಲೆಯ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ಕಲಬುರಗಿ ಎಸಿಬಿ ಪೊಲೀಸ್ ಠಾಣಾ ಮಟ್ಟದ ಜನಸಂಪರ್ಕ ಸಭೆಗಳನ್ನು ನಡೆಸಲಿದ್ದಾರೆ ಎಸಿಬಿ ಪೊಲೀಸ್ ಠಾಣೆಯ ಅರಕ್ಷಕ ಉಪಾಧೀಕ್ಷಕರಾದ ಸುಧಾ ಆದಿ ಅವರು ತಿಳಿಸಿದ್ದಾರೆ.
ಕಲಬುರಗಿ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಆರಕ್ಷಕ ಉಪಾಧೀಕ್ಷಕರಾದ ಸುಧಾ ಆದಿ (ಮೊಬೈಲ್ ಸಂಖ್ಯೆ 9480806240) ಅವರು ಮೇ 2 ರಂದು ಚಿಂಚೋಳಿ ತಾಲೂಕು ಪ್ರವಾಸಿ ಮಂದಿರದಲ್ಲಿ, ಮೇ 4ರಂದು ಚಿತ್ತಾಪುರ ತಾಲೂಕು ಪ್ರವಾಸಿ ಮಂದಿರದಲ್ಲಿ ಹಾಗೂ ಮೇ 6ರಂದು ಜೇವರ್ಗಿ ತಾಲೂಕು ಪ್ರವಾಸಿ ಮಂದಿರದಲ್ಲಿ ಜನಸಂಪರ್ಕ ಸಭೆ ನಡೆಸುವರು.
ಕಲಬುರಗಿ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಇನ್ಸ್‍ಪೆಕ್ಟರ್ ಕಷ್ಣಪ್ಪ ಕಲ್ಲದೇವರು (ಮೊಬೈಲ್ ಸಂಖ್ಯೆ 9480806310) ಅವರು ಮೇ 3 ರಂದು ಕಾಳಗಿ ತಾಲೂಕು ಪ್ರವಾಸಿ ಮಂದಿರದಲ್ಲಿ, ಮೇ 9ರಂದು ಅಫಜಲಪುರ ತಾಲೂಕು ಪ್ರವಾಸಿ ಮಂದಿರದಲ್ಲಿ, ಮೇ 13 ರಂದು ಸೇಡಂ ತಾಲೂಕು ಪ್ರವಾಸಿ ಮಂದಿರದಲ್ಲಿ ಹಾಗೂ ಮೇ 15 ರಂದು ಆಳಂದ ತಾಲೂಕು ಪ್ರವಾಸಿ ಮಂದಿರದಲ್ಲಿ ಜನಸಂಪರ್ಕ ಸಭೆ ನಡೆಸುವರು.
ಪೊಲೀಸ್ ಇನ್ಸ್‍ಪೆಕ್ಟರ್ ಮಹ್ಮದ ಇಸ್ಮಾಯಿಲ್ (ಮೊಬೈಲ್ ಸಂಖ್ಯೆ 9480806309) ಅವರು ಮೇ 8ರಂದು ಯಡ್ರಾಮಿ ತಾಲೂಕು ಪ್ರವಾಸಿ ಮಂದಿರದಲ್ಲಿ, ಮೇ 10ರಂದು ಶಹಾಬಾದ ತಾಲೂಕು ಪ್ರವಾಸಿ ಮಂದಿರದಲ್ಲಿ ಹಾಗೂ ಮೇ 14ರಂದು ಕಮಲಾಪುರ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಜನಸಂಪರ್ಕ ಸಭೆ ನಡೆಸುವರು.


ಹೀಗಾಗಿ ಲೇಖನಗಳು News and Photo Date: 30-4-2019

ಎಲ್ಲಾ ಲೇಖನಗಳು ಆಗಿದೆ News and Photo Date: 30-4-2019 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ News and Photo Date: 30-4-2019 ಲಿಂಕ್ ವಿಳಾಸ https://dekalungi.blogspot.com/2019/04/news-and-photo-date-30-4-2019.html

Subscribe to receive free email updates:

0 Response to "News and Photo Date: 30-4-2019"

ಕಾಮೆಂಟ್‌‌ ಪೋಸ್ಟ್‌ ಮಾಡಿ